ಅಂಬರೀಶ್‌ ಫ್ಯಾಮಿಲಿ ಸಿನಿಮಾ ಹಬ್ಬ!

ಮೇ ತಿಂಗಳಲ್ಲಿ ಪತ್ನಿ, ಪುತ್ರ ಸಿನಿಮಾ ಜೊತೆ ಅಂತ ಚಿತ್ರ!

Team Udayavani, Apr 29, 2019, 3:00 AM IST

Ambarish

ಕನ್ನಡ ಚಿತ್ರರಂಗದಲ್ಲಿ ಆಗಾಗ ಒಂದಷ್ಟು ನಿರೀಕ್ಷೆ ಹುಟ್ಟಿಸುವ ಮತ್ತು ಸಂತಸ ಹೆಚ್ಚಿಸುವ ಬೆಳವಣಿಗೆಗಳು ನಡೆಯುತ್ತಲೆ ಇರುತ್ತವೆ. ಇಲ್ಲಿ ಸಹೋದರರ ಚಿತ್ರಗಳು ಜೊತೆ ಜೊತೆಗೆ ಬಿಡುಗಡೆಯಾಗಿರುವ ಉದಾಹರಣೆಗಳೂ ಇವೆ.

ಅಷ್ಟೇ ಅಲ್ಲ, ತಂದೆ ನಿರ್ದೇಶನ ಮಗ ನಾಯಕನಾಗಿರುವ ಚಿತ್ರಗಳೂ ಒಟ್ಟಿಗೆ ಬಂದಿವೆ. ಅವುಗಳ ಸಾಲಿಗೆ ಈಗ ಒಂದೇ ತಿಂಗಳಲ್ಲಿ ಒಂದೇ ಕುಟುಂಬದವರ ಮೂರು ಚಿತ್ರಗಳು ತೆರೆಗೆ ಬರುತ್ತಿವೆ ಎಂಬುದು ವಿಶೇಷ. ಹೌದು, ಮೇ ತಿಂಗಳಲ್ಲಿ ಅಂಬರೀಶ್‌ ಫ್ಯಾಮಿಲಿಯವರ ಚಿತ್ರಗಳ ದರ್ಶನವಾಗಲಿದೆ. ಆ ಕುರಿತು ಒಂದು ವಿಶೇಷ ವರದಿ.

ಅಂಬರೀಶ್‌ ಈಗಿಲ್ಲ. ಆದರೆ, ಅವರ ಅಭಿಮಾನಿಗಳ ಮನದಲ್ಲಿ ಸದಾ ಅಚ್ಚಳಿಯದೆ ಉಳಿದಿದ್ದಾರೆ. ಅವರು ಅಭಿನಯಿಸಿದ ಚಿತ್ರಗಳ ಮೂಲಕ ಇಂದಿಗೂ ರಂಜಿಸುತ್ತಿದ್ದಾರೆ. ಅದೇ ಖುಷಿಯಲ್ಲಿರುವ ಅಂಬರೀಶ್‌ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದಿದೆ.

ಅಂಬರೀಶ್‌ ಇಲ್ಲದ ಮೊದಲ ಹುಟ್ಟುಹಬ್ಬ ಮೇ.29 ರಂದು ಆಚರಿಸಲಾಗುತ್ತಿದ್ದು, ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಎವರ್‌ಗ್ರೀನ್‌ ಚಿತ್ರ ಎಂದೇ ಹೇಳುವ “ಅಂತ’ ಚಿತ್ರ ಬಿಡುಗಡೆಯಾಗುತ್ತಿದೆ. ಅವರ ಪುತ್ರ ಅಭಿಷೇಕ್‌ ಅಂಬರೀಶ್‌ ಅಭಿನಯದ “ಅಮರ್‌’ ಚಿತ್ರ ಕೂಡ ಮೇ.31 ರಂದು ಬಿಡುಗಡೆ ಕಾಣುತ್ತಿದೆ.

ಇನ್ನು, ಅವರ ಪತ್ನಿ ಸುಮಲತಾ ಅಂಬರೀಶ್‌ ಅಭಿನಯಿಸಿರುವ “ಡಾಟರ್‌ ಆಫ್ ಪಾರ್ವತಮ್ಮ’ ಚಿತ್ರ ಕೂಡ ತೆರೆಗೆ ಬರುತ್ತಿದೆ. ಅಲ್ಲಿಗೆ ಅಂಬರೀಶ್‌ ಸಿನಿಮಾ ಜೊತೆಗೆ ಪತ್ನಿ ಮತ್ತು ಪುತ್ರನ ಸಿನಿಮಾ ಕೂಡ ಹುಟ್ಟುಹಬ್ಬದ ಕೊಡುಗೆಯಾಗಿ ಬಿಡುಗಡೆಯಾಗುತ್ತಿವೆ.

ಅಂಬರೀಶ್‌ ಅಭಿನಯದ “ಅಂತ’ ಚಿತ್ರವನ್ನು ಮರು ಬಿಡುಗಡೆ ಮಾಡಲು ನಿರ್ಮಾಪಕ ವೇಣುಗೋಪಾಲ್‌ ನಿರ್ಧರಿಸಿದ್ದಾರೆ. ಕಳೆದ 38 ವರ್ಷಗಳ ಹಿಂದೆ ತೆರೆಗೆ ಬಂದಿದ್ದ “ಅಂತ’ 80 ರ ದಶಕದಲ್ಲಿ ಭರ್ಜರಿ ಯಶಸ್ಸು ಪಡೆದಿತ್ತು. ರಾಜೇಂದ್ರ ಸಿಂಗ್‌ ಬಾಬು ನಿರ್ದೇಶನದ ಈ ಚಿತ್ರವನ್ನು ಎಚ್‌.ಎನ್‌.ಮಾರುತಿ ಮತ್ತು ವೇಣುಗೋಪಾಲ್‌ ನಿರ್ಮಾಣ ಮಾಡಿದ್ದರು.

ಹೆಚ್‌.ಕೆ.ಅನಂತರಾವ್‌ ಅವರ ಕಾದಂಬರಿ ಆಧರಿಸಿದ ಚಿತ್ರದಲ್ಲಿ ಅಂಬರೀಶ್‌ ಇನ್ಸ್‌ಪೆಕ್ಟರ್‌ ಸುಶೀಲ್‌ಕುಮಾರ್‌ ಪಾತ್ರದ ಮೂಲಕ ಗಮನಸೆಳೆದಿದ್ದರು. ಅಷ್ಟೇ ಅಲ್ಲ, ಆ ಚಿತ್ರದಲ್ಲಿ ಅವರು ಕನ್ವರ್‌ಲಾಲ್‌ ಎಂಬ ನೆಗೆಟಿವ್‌ ಪಾತ್ರವನ್ನೂ ನಿರ್ವಹಿಸಿ, ಮನೆಮಾತಾಗಿದ್ದರು.

ಅಂಬರೀಶ್‌ ಅವರ ಸಿನಿಮಾ ವೃತ್ತಿ ಬದುಕಿನಲ್ಲಿ “ಅಂತ’ ಅದ್ಭುತ ಸಿನಿಮಾ. ಈಗ ಮತ್ತೂಮ್ಮೆ ಆ ಚಿತ್ರ ಹೊಸ ತಂತ್ರಜ್ಞಾನದೊಂದಿಗೆ ಪ್ರೇಕ್ಷಕರ ಮುಂದೆ ಹುಟ್ಟುಹಬ್ಬಕ್ಕೆ ಬರಲಿದೆ. ನಿರ್ಮಾಪಕರು “ಅಂತ’ ಚಿತ್ರಕ್ಕೆ ತಂತ್ರಜ್ಞಾನದ ಹೊಸ ಸ್ಪರ್ಶ ನೀಡಿ ಬಿಡುಗಡೆ ಮಾಡುತ್ತಿದ್ದಾರೆ.

ಚಿತ್ರಕ್ಕೆ ಜಿ.ಕೆ. ವೆಂಕಟೇಶ್‌ ಅವರ ಸಂಗೀತವಿತ್ತು. ಹಾಡುಗಳು ಇಂದಿಗೂ ಜನರಲ್ಲಿ ಅಚ್ಚಳಿಯದೆ ಉಳಿದಿವೆ. ಇನ್ನು, ಸುಮಲತಾ ಅಂಬರೀಶ್‌ ಅವರು ಅಭಿನಯಿಸಿರುವ “ಡಾಟರ್‌ ಆಫ್ ಪಾರ್ವತಮ್ಮ’ ಚಿತ್ರ ಕೂಡ ಮೇ ತಿಂಗಳಲ್ಲೇ ತೆರೆಗೆ ಬರುತ್ತಿದೆ.

ಈಗಾಗಲೇ ಚಿತ್ರದ ನಿರ್ಮಾಪಕರಾದ ಶಶಿಧರ ಕೆ.ಎಂ., ವಿಜಯಲಕ್ಷ್ಮೀ ಕೃಷ್ಣೇಗೌಡ, ಸಂದೀಪ್‌ ಶಿವಮೊಗ್ಗ ಮತ್ತು ಶ್ವೇತ ಮಧುಸೂದನ್‌ ಅವರು ಮೇ.24 ರಂದು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಈ ಚಿತ್ರದಲ್ಲಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರೆ, ಅವರ ತಾಯಿ ಪಾತ್ರದಲ್ಲಿ ಸುಮಲತಾ ಅಂಬರೀಶ್‌ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರಕ್ಕೆ ಶಂಕರ್‌ ಕೆ, ನಿರ್ದೇಶಕರು. ಮಿಥುನ್‌ ಮುಕುಂದನ್‌ ಸಂಗೀತ, ಅರುಣ್‌ ಸೋಮಸುಂದರಂ ಛಾಯಾಗ್ರಹಣವಿದೆ. ಇಲ್ಲಿ ಹರಿಪ್ರಿಯ ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಅತ್ತ ಅಂಬರೀಶ್‌ ಪುತ್ರ ಅಭಿಷೇಕ್‌ ಅವರ “ಅಮರ್‌’ ಚಿತ್ರವನ್ನು ಸಹ ಮೇ.31 ರಂದು ಬಿಡುಗಡೆ ಮಾಡಲು ನಿರ್ಮಾಪಕ ಸಂದೇಶ್‌ ನಾಗರಾಜ್‌ ನಿರ್ಧರಿಸಿದ್ದಾರೆ.

ಈಗಾಗಲೇ ಚಿತ್ರ ಬಿಡುಗಡೆಯನ್ನು ಪಕ್ಕಾ ಮಾಡಿರುವ ಅವರು, ಅಂಬರೀಶ್‌ ಅವರ ಹುಟ್ಟುಹಬ್ಬದ ಅಂಗವಾಗಿ ಚಿತ್ರ ರಿಲೀಸ್‌ ಮಾಡುತ್ತಿರುವುದಾಗಿ ಹೇಳಿದ್ದಾರೆ. ರಾಜ್ಯ, ದೇಶ ಹಾಗು ವಿದೇಶಗಳಲ್ಲಿ “ಅಮರ್‌’ ತೆರೆಗೆ ಬರುತ್ತಿದೆ. ಇದು ಅಭಿಷೇಕ್‌ ಅಂಬರೀಶ್‌ ಅವರ ಮೊದಲ ಚಿತ್ರ.

ಇದು ಅಂಬರೀಶ್‌ ಅವರ ಮನಸ್ಸಿನ ಕಥೆ. ಅದರಲ್ಲೂ ಅವರು ತುಂಬಾನೇ ಇಷ್ಟಪಟ್ಟು ಆಯ್ಕೆ ಮಾಡಿದ ಕಥೆ ಇದು. ನನ್ನ ಮಗ ಒಂದೊಳ್ಳೆಯ ಲವ್‌ಸ್ಟೋರಿ ಮೂಲಕವೇ ಸಿನಿಮಾ ರಂಗಕ್ಕೆ ಎಂಟ್ರಿಯಾಗಬೇಕು ಅಂದುಕೊಂಡೇ ಅವರು “ಅಮರ್‌’ ಕಥೆಯನ್ನು ಆಯ್ಕೆ ಮಾಡಿದ್ದರು. ಇದೊಂದು ಅಮರ ಪ್ರೇಮ ಕಥೆ.

ಒಬ್ಬ ಯಂಗ್‌ ಎನರ್ಜಿಟಿಕ್‌ ಲವ್ವರ್‌ ಬಾಯ್‌ ಸ್ಟೋರಿ ಇಲ್ಲಿದೆ. ಇಲ್ಲಿ ಪ್ರೀತಿ, ಆ್ಯಕ್ಷನ್‌, ಸೆಂಟಿಮೆಂಟ್‌,ಎಮೋಷನ್ಸ್‌, ಗೆಳೆತನ, ಹಾಸ್ಯ ಎಲ್ಲವೂ ಮೇಳೈಸಿದೆ. ಅದೇನೆ ಇರಲಿ, ಮೇ ತಿಂಗಳಲ್ಲಿ ಅಂಬರೀಶ್‌ ಅವರ “ಅಂತ’ ಚಿತ್ರದ ಜೊತೆಗೆ ಪತ್ನಿ ಮತ್ತು ಪುತ್ರನ ಸಿನಿಮಾ ಬಿಡುಗಡೆಯಾಗುತ್ತಿರುವುದು ಅವರ ಅಭಿಮಾನಿಗಳಿಗೆ ಇನ್ನಷ್ಟು ಖುಷಿ ಹೆಚ್ಚಿರುವುದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.