![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 30, 2021, 3:40 PM IST
ಕಳೆದ ವಾರ ಬಿಡುಗಡೆಯಾದ “ಅಮೃತ್ ಅಪಾರ್ಟ್ಮೆಂಟ್ಸ್’ ಚಿತ್ರ ನಿಧಾನವಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದ್ದು, ಚಿತ್ರದ ಬಗ್ಗೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿದೆ. ಇದರ ನಡುವೆಯೇ ಚಿತ್ರವನ್ನು ಮಲೆಯಾಳಂ ಮತ್ತು ಹಿಂದಿಗೆ ರಿಮೇಕ್ ಆಗುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ.
“ಅಮೃತ್ ಅಪಾರ್ಟ್ಮೆಂಟ್ಸ್’ ಬಿಡುಗಡೆಯ ಬಳಿಕ ಸಿಗುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಮಾತನಾಡುವ ನಿರ್ದೇಶಕ ಗುರುರಾಜ ಕುಲಕರ್ಣಿ, “ನಮ್ಮದು ವಿಷಯಪ್ರಧಾನ ಸಿನಿಮಾವಾಗಿದ್ದರಿಂದ, ಕೆಲವು ಮಲ್ಟಿಪ್ಲೆಕ್ಸ್ ಸೇರಿದಂತೆ, ಆಯ್ದ ಕೇಂದ್ರಗಳಲ್ಲಿ ಮಾತ್ರ ಸಿನಿಮಾವನ್ನು ಬಿಡುಗಡೆ ಮಾಡಿದ್ದೆವು. ಇದೀಗ ಬಿಡುಗಡೆಯಾದ ಎಲ್ಲ ಕಡೆಗಳಲ್ಲೂ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹಿಂದಿ ಮತ್ತು ಮಲೆಯಾಳಂ ಚಿತ್ರರಂಗದಿಂದ ರಿಮೇಕ್ಗಾಗಿ ಬೇಡಿಕೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಈ ಎರಡೂ ಭಾಷೆಗಳಿಗೂ ರಿಮೇಕ್ ಆಗುವ ಸಾಧ್ಯತೆ ಇದೆ. ಕನ್ನಡದ ಅನೇಕ ಹಿರಿಯ ನಿರ್ದೇಶಕರು ಪೋನ್ ಮಾಡಿ ಅಭಿನಂದಿಸಿದ್ದಾರೆ. ಈ ಥರದ ಸಿನಿಮಾಗಳನ್ನು ಮಾಡಲು ಧೈರ್ಯಬೇಕು ಎಂದು ಮುಕ್ತವಾಗಿ ಬೆನ್ನುತಟ್ಟುತ್ತಿದ್ದಾರೆ. ಇದಲ್ಲದೆ ಓಟಿಟಿ ಕಡೆಯಿಂದಲೂ ಸಿನಿಮಾಕ್ಕೆ ಬೇಡಿಕೆ ಬರುತ್ತಿದೆ. ಈ ಬಗ್ಗೆ ಮಾತುಕಥೆ ಶುರುವಾಗಿದೆ’ ಎನ್ನುತ್ತಾರೆ.
ಇನ್ನು “ಅಮೃತ್ ಅಪಾರ್ಟ್ಮೆಂಟ್ಸ್’ ಹೆಂಗಳೆಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಬಗ್ಗೆಯೂ ಮಾತನಾಡುವ ನಿರ್ದೇಶಕರು, “ಸಿನಿಮಾ ಹೆಚ್ಚಾಗಿ ಹೆಣ್ಣುಮಕ್ಕಳಿಗೆ ಇಷ್ಟವಾಗುತ್ತಿದೆ. ಗ್ರಾಮೀಣ ಪ್ರದೇಶದ ಮತ್ತು ಮೆಟ್ರೋ ಸಿಟಿಯಲ್ಲಿರುವ ಹೆಣ್ಣುಮಕ್ಕಳು ಕೂಡ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಸಿನಿಮಾ ನೋಡಿದ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಸಾಕಷ್ಟು ಒಳ್ಳೆಯ ಮಾತುಗಳನ್ನು ಹೇಳುತ್ತಿದ್ದಾರೆ. ಪ್ರೇಕ್ಷಕರ ಸಂಖ್ಯೆಯಲ್ಲಿ ನಿಧಾನವಾಗಿ ಏರಿಕೆಯಾಗುತ್ತಿದೆ. ಈ ಥರದ ಪ್ರತಿಕ್ರಿಯೆಯನ್ನು ನಾನು ನಿರೀಕ್ಷಿಸಿರಲಿಲ್ಲ. ಒಂದು ಒಳ್ಳೆಯ ಮೆಸೇಜ್ ಇರೋದ್ರಿಂದ, ಎಲ್ಲ ಥರದ ಆಡಿಯನ್ಸ್ಗೂ ಸಿನಿಮಾ ಇಷ್ಟವಾಗುತ್ತಿದೆ’ ಎನ್ನುತ್ತಾರೆ.
ಸಸ್ಪೆನ್ಸ್ ಕಂ ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಅಮೃತ್ ಅಪಾರ್ಟ್ ಮೆಂಟ್ಸ್’ನಲ್ಲಿ ತಾರಕ್, ಊರ್ವಶಿ ಗೋವರ್ಧನ್, ಬಾಲಾಜಿ, ಸಂಪತ್, ಮಾನಸ ಜೋಶಿ ಮುಂತಾದವರಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.