![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 22, 2023, 12:51 PM IST
ನಟ ವಿನಯ್ ರಾಜಕುಮಾರ್ ಅಭಿನಯದ “ಅದೊಂದಿತ್ತು ಕಾಲ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ “ಅದೊಂದಿತ್ತು ಕಾಲ’ ಸಿನಿಮಾದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಇದೀಗ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಈಗ ಚಿತ್ರತಂಡದಿಂದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಅದು ಚಿತ್ರದ ಆಡಿಯೋ ರೈಟ್ಸ್ ಕುರಿತಾದ್ದು. ಚಿತ್ರದ ಆಡಿಯೋ ಹಕ್ಕನ್ನು ಎ2 ಆಡಿಯೋ ಸಂಸ್ಥೆ ಭರ್ಜರಿ ಬೆಲೆಗೆ ಖರೀದಿಸಿದೆ. ಈ ಮೂಲಕ ಚಿತ್ರತಂಡ ಖುಷಿಯಾಗಿದೆ.
ವಿ.ರಾಘವೇಂದ್ರ ಸಂಗೀತ ಸಂಯೋಜಿಸಿರುವ ಚಿತ್ರದ ಹಾಡುಗಳಿಗೆ ಡಾ. ವಿ.ನಾಗೇಂದ್ರ ಪ್ರಸಾದ್ ಹಾಗೂ ಧನಂಜಯ್ ರಂಜನ್ ಸಾಹಿತ್ಯವಿದೆ. ಸಿದ್ ಶ್ರೀರಾಮ್, ವಿಜಯಪ್ರಕಾಶ್ ಸೇರಿದಂತೆ ಅನೇಕ ಖ್ಯಾತ ಗಾಯಕರು ಚಿತ್ರದ ಹಾಡುಗಳಿಗೆ ದನಿಗೂಡಿಸಿದ್ದಾರೆ. ಇದರ ಜೊತೆಗೆ ಚಿತ್ರತಂಡ ಬಿಟ್ಟಿರುವ ಹಾಡಿನ ಟೀಸರ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
90 ರ ದಶಕದ ಕಥೆಯಿಂದ ಚಿತ್ರ ಆರಂಭವಾಗಲಿದ್ದು, ನಾಯಕನ ವಿವಿಧ ಮಜಲುಗಳನ್ನು ತೋರಿಸುತ್ತಾ ಸಾಗುತ್ತದೆಯಂತೆ. ಚಿತ್ರದಲ್ಲಿ ನಟ ರವಿಚಂದ್ರನ್ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. “ಭುವನ್ ಸಿನಿಮಾಸ್’ ಲಾಂಛನದಡಿಯಲ್ಲಿ ನಿರ್ಮಾಪಕರಾದ ಸುರೇಶ್ ಹಾಗೂ ಎನ್. ಲೋಕೇಶ್ ನಿರ್ಮಿಸುತ್ತಿರುವ “ಅಂದೊಂದಿತ್ತು ಕಾಲ’ ಸಿನಿಮಾಕ್ಕೆ ಕೀರ್ತಿ ನಿರ್ದೇಶನವಿದೆ.
ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್ ಅವರಿಗೆ ಅದಿತಿ ಪ್ರಭುದೇವ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ನಿಶಾ ಮಿಲನ, ಅರುಣಾ ಬಾಲರಾಜ್ ಮೋಹನ್ ಜುನೇಜಾ, ಕಡ್ಡಿಪುಡಿ ಚಂದ್ರು, ಮಜಾ ಭಾರತ್ ಜಗ್ಗಪ್ಪ, ಧರ್ಮೆಂದ್ರ ಅರಸ್, ಹಿರಿಯ ಸಾಹಿತಿ ಪ್ರೊ. ದೊಡ್ಡರಂಗೇಗೌಡ, ಗೋವಿಂದೇಗೌಡ ಮುಂತಾದವರು “ಅಂದೊಂದಿತ್ತು ಕಾಲ’ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ರವಿಪ್ರಕಾಶ್ ರೈ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.