ಕಾಣೆಯಾದವರ ಹಿಂದೆ ಬಂದ ಅನಿಲ್‌

ಪ್ರಯೋಗಾತ್ಮಕ ಚಿತ್ರದಲ್ಲಿ ರವಿಶಂಕರ್‌, ರಂಗಾಯಣ ರಘು, ತಬಲನಾಣಿ

Team Udayavani, Jul 11, 2019, 3:00 AM IST

kaneyadavaru

ಕನ್ನಡದಲ್ಲೀಗ ದಿನ ಕಳೆದಂತೆ ಹೊಸಬಗೆಯ ಚಿತ್ರಗಳು ಶುರುವಾಗುತ್ತಿವೆ. ಅದರಲ್ಲೂ ಪ್ರಯೋಗಾತ್ಮಕ ಚಿತ್ರಗಳಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ ಎಂಬುದು ವಿಶೇಷ. ಕಮರ್ಷಿಯಲ್‌ ಸಿನಿಮಾಗಳ ಜೊತೆಗೆ ಪ್ರಯೋಗಾತ್ಮಕ ಚಿತ್ರಗಳು ಗಮನಸೆಳೆಯುತ್ತಿವೆ ಎಂಬುದು ಮತ್ತೊಂದು ವಿಶೇಷ. ಅಂದಹಾಗೆ, ಹೊಸ ಪ್ರಯೋಗಕ್ಕೆ ಇಳಿದವರು ಹೊಸಬರಂತೂ ಅಲ್ಲ ಎಂಬುದು ನೆನಪಿರಲಿ.

ಹೌದು, ನಿರ್ದೇಶಕ ಅನಿಲ್‌ ಈಗ ಅಂಥದ್ದೊಂದು ಹೊಸ ಪ್ರಯೋಗದ ಸಿನಿಮಾಗೆ ಕೈ ಹಾಕಿದ್ದಾರೆ. ಅವರ ಪ್ರಯೋಗದ ಚಿತ್ರಕ್ಕೆ “ಕಾಣೆಯಾದವರ ಬಗ್ಗೆ ಪ್ರಕಟಣೆ’ ಎಂದು ಹೆಸರಿಡಲಾಗಿದೆ. ಶೀರ್ಷಿಕೆ ಕೇಳಿದಾಕ್ಷಣ, ಇದೊಂದು ಕಾಣೆಯಾದವರ ಕುರಿತಾದ ಚಿತ್ರ ಅಂತ ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ ಬಿಡಿ. ಈವರೆಗೆ ಕಮರ್ಷಿಯಲ್‌ ಚಿತ್ರಗಳ ಹಿಂದೆ ಇದ್ದ ಅನಿಲ್‌ , ಈ ಚಿತ್ರ ಮಾಡೋಕೆ ಕಾರಣ, ಕಥೆ.

ಅವರಿಗೆ ಆ ಕಥೆಯ ಎಳೆ ಹೊಳೆದದ್ದೇ ತಡ, ಚಿತ್ರ ಮಾಡೋಕೆ ಅಣಿಯಾಗಿದ್ದಾರೆ. ನವೀನ್‌ ಎಂಬುವವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅವರಿಗೆ ಇದು ಮೊದಲ ಚಿತ್ರ. ಇಲ್ಲಿ ನಾಯಕ, ನಾಯಕಿ ಅನ್ನುವುದೇನೂ ಇಲ್ಲ. ಚಿತ್ರದಲ್ಲಿ ಸುಮಾರು 65 ವರ್ಷ ವಯಸ್ಸಿನ ಪಾತ್ರಗಳೇ ಹೈಲೈಟ್‌. ಇಲ್ಲಿ ಮೂರು ಪಾತ್ರಗಳು ವಿಶೇಷವಾಗಿ ಕಾಣಿಸಿಕೊಳ್ಳಲಿವೆ.

ಆ ಕುರಿತು ಹೇಳಿಕೊಳ್ಳುವ ನಿರ್ದೇಶಕ ಅನಿಲ್‌, “ರವಿಶಂಕರ್‌, ರಂಗಾಯಣ ರಘು, ತಬಲನಾಣಿ ಪ್ರಮುಖ ಪಾತ್ರಧಾರಿಗಳು. ಅವರೆಲ್ಲರೂ ತಾತನ ಪಾತ್ರದಲ್ಲಿ ಮಿಂಚಲಿದ್ದಾರೆ. ಅವರಿಗೆ ಯಾರೂ ನಾಯಕಿಯರು ಇರುವುದಿಲ್ಲ. ಮೊದಲೇ ಹೇಳಿದಂತೆ ಇದು ಕಮರ್ಷಿಯಲ್‌ ಚಿತ್ರವಂತೂ ಅಲ್ಲ. ಹಾಫ್ಬೀಟ್‌ ಸಿನಿಮಾ ಇದಾಗಿದ್ದು, ಇಲ್ಲೊಂದಷ್ಟು ಸಸ್ಪೆನ್ಸ್‌ ಕೂಡ ಇದೆ.

ಅದರೊಂದಿಗೆ ಮಾನವೀಯ ಗುಣಗಳು ಚಿತ್ರದ ಹೈಲೈಟ್‌ ಆಗಿರಲಿವೆ. 1950, 70, 80 ರ ದಶಕ ಸೇರಿದಂತೆ 2019ರವರೆಗೆ ನಡೆಯುವ ವಿಷಯಗಳು ಇರಲಿವೆ. ಇಡೀ ಚಿತ್ರ ಹೊಸತನದೊಂದಿಗೆ ಸಾಗಲಿದೆ. ನೋಡುಗರಿಗೊಂದು ಆಪ್ತಭಾವ ಮೂಡಿಸುವ ಪ್ರಯತ್ನ ಇಲ್ಲಿ ಮಾಡಲಾಗುತ್ತಿದೆ ‘ ಎಂದು ವಿವರಿಸುತ್ತಾರೆ ನಿರ್ದೇಶಕ ಅನಿಲ್‌.

ಆಗಸ್ಟ್‌ 6 ರಿಂದ ಚಿತ್ರೀಕರಣ ಶುರುವಾಗಲಿದೆ. ಬ್ಯಾಂಕಾಕ್‌ನಲ್ಲಿ 20 ದಿನಗಳ ಮೊದಲ ಹಂತವನ್ನು ಮುಗಿಸಿಕೊಂಡು ಆ ನಂತರ ಇಲ್ಲಿ ಚಿತ್ರೀಕರಣ ಮಾಡಲಾಗುವುದು. ಚಿಕ್ಕಣ್ಣ ಕೂಡ ಇಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಎರಡು ವಿಶೇಷ ಪಾತ್ರಗಳಿರಲಿದ್ದು, ಅದು ಇನ್ನೂ ಅಂತಿಮವಾಗಿಲ್ಲ ಎಂಬುದು ಅನಿಲ್‌ ಕೊಡುವ ವಿವರ. ಚಿತ್ರಕ್ಕೆ ಶಿವು ಛಾಯಾಗ್ರಹಣವಿದೆ.

ಅರ್ಜುನ್‌ ಜನ್ಯ ಸಂಗೀತ, ಕೆ.ಎಂ.ಪ್ರಕಾಶ್‌ ಸಂಕಲನ ಮಾಡಲಿದ್ದಾರೆ. ರವಿವರ್ಮ ಸಾಹಸವಿದೆ. ಅನಿಲ್‌ ಸದ್ಯಕ್ಕೆ “ದಾರಿ ತಪ್ಪಿದ ಮಗ’ ಚಿತ್ರವನ್ನು ಮುಗಿಸಿದ್ದಾರೆ. ಇನ್ನೊಂದು ಹಾಡು ಬಾಕಿ ಉಳಿದಿದ್ದು, ಅದನ್ನು ಇಷ್ಟರಲ್ಲೇ ಚಿತ್ರೀಕರಿಸುವ ಯೋಜನೆ ಅವರದು. ಅದಕ್ಕೂ ಮುನ್ನ “ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರ ಕೈಗೆತ್ತಿಕೊಂಡು, ಒಂದು ಹಂತ ಮುಗಿಸಿದ ನಂತರ “ದಾರಿ ತಪ್ಪಿದ ಮಗ’ ಚಿತ್ರದ ಕೆಲಸಕ್ಕೆ ಹೊರಡುವುದಾಗಿ ಹೇಳುತ್ತಾರೆ ಅನಿಲ್‌.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.