![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 26, 2021, 2:59 PM IST
ನಟನಾಗಿ, ಮಿಮಿಕ್ರಿ ಕಲಾವಿದನಾಗಿ ಪರಿಚಿತರಾಗಿರುವ ದಯಾನಂದ್ ಇದೀಗ ಸದ್ದಿಲ್ಲದೆ ಸಿನಿಮಾವೊಂದನ್ನು ನಿರ್ದೇಶಿಸಿ, ಅದನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ಆ ಸಿನಿಮಾದ ಹೆಸರು “ಅನಿರೀಕ್ಷಿತ’.
ಜೀವನದಲ್ಲಿ ಸಿಗುವ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ, ಯಾರೂ ಕಲಿಸದಂಥ ಪಾಠವನ್ನುಕಲಿಸುತ್ತವೆ. ಇಂಥದ್ದೇ ತಾತ್ವಿಕ ಎಳೆಯೊಂದನ್ನು ಇಟ್ಟುಕೊಂಡು ಮಿಮಿಕ್ರಿ ದಯಾನಂದ್ ಆ್ಯಂಡ್ ಟೀಮ್ ಈ ಸಿನಿಮಾವನ್ನು ತೆರೆಗೆ ತರುತ್ತಿದೆ
ಲಾಕ್ಡೌನ್ ಸಮಯ ವ್ಯರ್ಥ ಮಾಡದ ಹದಿಮೂರು ಜನ ಪ್ರತಿಭಾವಂತರ ತಂಡದ ಪರಿಶ್ರಮದ ಫಲವಾಗಿ ಈ ಚಿತ್ರ ಮೂಡಿಬಂದಿದ್ದು, ಕೇವಲ ಎರಡು ಪಾತ್ರಗಳನ್ನು ಇಟ್ಟುಕೊಂಡು ಒಂದೇ ಚಿತ್ರೀಕರಣ ಸ್ಥಳದಲ್ಲಿ ನಾಲ್ಕು ಲೊಕೇಶನ್ ಗಳಂತೆ ಬಳಸಿ ಇಡೀ ಚಿತ್ರವನ್ನು ಚಿತ್ರೀಕರಿಸಲಾಗಿದೆ. ಇಡೀ ಚಿತ್ರದಲ್ಲಿ ಕೇವಲ ಎರಡು ಪಾತ್ರಗಳಿದ್ದು, ಮಿಮಿಕ್ರಿ ದಯಾನಂದ್ ಹಾಗೂ ಭಾಮ ಆ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಎಸ್.ಕೆ.ಟಾಕೀಸ್’ ಬ್ಯಾನರ್ನಲ್ಲಿ ಶಾಂತ ಕುಮಾರ್ ನಿರ್ಮಿಸಿರುವ “ಅನಿರೀಕ್ಷಿತ’ ಚಿತ್ರಕ್ಕೆ ಸಂತೋಷ್ ಕೊಡಂಕೇರಿ, ರಘು ಎಸ್ ಹಾಗೂ ಮಿಮಿಕ್ರಿ ದಯಾನಂದ್ ಸಹ ನಿರ್ಮಾಣವಿದೆ. ಮಿಮಿಕ್ರಿ ದಯಾನಂದ್ ಕಥೆ, ಚಿತ್ರಕಥೆ ನಿರ್ದೇಶನವಿರುವ ಈ ಚಿತ್ರಕ್ಕೆ ನೆಳ್ಳುಳ್ಳಿ ರಾಜಶೇಖರನ್ ಸಂಭಾಷಣೆ ಇದೆ. ಚಿತ್ರದ ಹಾಡುಗಳಿಗೆ ಗುರುಕಿರಣ್ ಸಂಗೀತ ಸಂಯೋಜಿಸಿದ್ದು, ಜೀವನ್ ಗೌಡ ಛಾಯಾಗ್ರಹಣ ಹಾಗೂ ರಘು ಸಂಕಲನವಿದೆ.
ಸದ್ಯ “ಅನಿರೀಕ್ಷಿತ’ ಚಿತ್ರದ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಚಿತ್ರದ ಟ್ರೇಲರ್ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇತ್ತೀಚೆಗೆ “ಅನೀರಿಕ್ಷಿತ’ ಚಿತ್ರದ ಮೊದಲ ಪೋಸ್ಟರನ್ನು ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬಿಡುಗಡೆ ಮಾಡಿದರು. ಚಿತ್ರದ ಎರಡು ಹಾಗೂ ಮೂರನೇ ಪೋಸ್ಟರನ್ನು ಗಿರಿಜಾ ಲೋಕೇಶ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅನಾವರಣಗೊಳಿಸಿದ್ದಾರೆ. ಚಿತ್ರಮಂದಿರಗಳು ತೆರೆಯುತ್ತಿದ್ದಂತೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.