ನರ್ತಕಿ ಎದುರು ಅಣ್ಣಾವ್ರ ಕಟೌಟ್‌


Team Udayavani, Jan 26, 2018, 12:00 PM IST

Kanaka-(8).jpg

ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಡಾ.ರಾಜಕುಮಾರ್‌ ಅವರ ಕಟೌಟ್‌ ನಿಂತಿದೆ. ಹೌದು, ಬುಧವಾರ ದುನಿಯಾ ವಿಜಯ್‌ ಅಭಿಮಾನಿಗಳು ಅಣ್ಣಾವ್ರ ಕಟೌಟ್‌ಗೆ ಹಾರ ಹಾಕಿ ಹಾಲಿನ ಅಭಿಷೇಕ ಮಾಡುವ ಮೂಲಕ “ಕನಕ’ನ ಆಗಮನಕ್ಕೆ ಸಜ್ಜಾಗಿದ್ದಾರೆ. ನಿರ್ದೇಶಕ ಕಮ್‌ ನಿರ್ಮಾಪಕ ಆರ್‌.ಚಂದ್ರು ಅವರು, ನರ್ತಕಿ ಚಿತ್ರಮಂದಿರದಲ್ಲಿ ಅಣ್ಣಾವ್ರ ಕಟೌಟ್‌ ನಿಲ್ಲಿಸುವುದಾಗಿ ಈ ಹಿಂದೆ ಹೇಳಿದ್ದರು.

ಅದರಂತೆ, ಅವರು ಕಟೌಟ್‌ ನಿಲ್ಲಿಸುವ ಮೂಲಕ  ಅಭಿಮಾನಿಗಳ ಮೊಗದಲ್ಲಿ ಸಂತಸದ ಹೊಳೆ ಹರಿಸಿದ್ದಾರೆ. “ಒಡಹುಟ್ಟಿದವರು’ “ಆಕಸ್ಮಿಕ’, “ಶಬ್ಧವೇದಿ’ ಚಿತ್ರಗಳ ಬಳಿಕ ನರ್ತಕಿ ಚಿತ್ರಮಂದಿರದಲ್ಲಿ ಈಗ ಅಣ್ಣಾವ್ರ ಕಟೌಟ್‌ ನಿಂತಿದೆ. ಸುಮಾರು ಎರಡುವರೆ ದಶಕಗಳ ಹಿಂದೆ ಅಣ್ಣಾವ್ರ ಚಿತ್ರಗಳು ನರ್ತಕಿ ಚಿತ್ರಮಂದಿರದಲ್ಲಿ ಬಿಡುಗಡೆಯಾದಾಗ, ಅಲ್ಲಿ ಎತ್ತರದ ಕಟೌಟ್‌ ತಲೆಎತ್ತುತ್ತಿದ್ದವು.

ಅಭಿಮಾನಿಗಳು ಸಂತಸದಿಂದಲೇ ಕಟೌಟ್‌ಗೆ ಹಾರ ಹಾಕಿ ಸಂಭ್ರಮಿಸುತ್ತಿದ್ದರು. ಆ ಸಂಭ್ರಮ ಈಗ “ಕನಕ’ ಚಿತ್ರದ ಬಿಡುಗಡೆ ಮುನ್ನ ಕಾಣಬಹುದಾಗಿದೆ. ಬುಧವಾರ ಬೆಳಗ್ಗೆಯೇ ಅಣ್ಣಾವ್ರ ಕಟೌಟ್‌ ನಿಂತಿದ್ದು, ಅಭಿಮಾನಿಗಳು ಕಟೌಟ್‌ ನಿಲ್ಲಿಸುವ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಇಂದು “ಕನಕ’ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಅಣ್ಣಾವ್ರ ಕಟೌಟ್‌ ಪಕ್ಕ “ಕನಕ’ ಚಿತ್ರದ ನಾಯಕ ದುನಿಯಾ ವಿಜಯ್‌ ಅವರ ಕಟೌಟ್‌ ಕೂಡ ನಿಲ್ಲಲಿದೆ. 

“ಕನಕ’ಗೆ “ರಾಜ್‌ಕುಮಾರ್‌ ಫ್ಯಾನ್‌’ ಎಂಬ ಅಡಿಬರಹ ಕೂಡಾ ಇದೆ.  “ಕನಕ’ ಆಟೋ ಡ್ರೆ„ವರ್‌ ಒಬ್ಬನ ಕಥೆ. ಆತನೇನು ಡಿಗ್ರಿ ಮಾಡಿದೋನಲ್ಲ. ಓದಿದ್ದು ಕಡಿಮೆಯೇ. ಆದರಾತ ಅಪ್ಪಟವಾಗಿ ಡಾ. ರಾಜ್‌ಕುಮಾರ್‌ ಅವರ ಅಭಿಮಾನಿ. ಇಂಥಾ ವ್ಯಕ್ತಿಯ ಲವ್‌, ಅದರ ಸುತ್ತಲ ಘಟನಾವಳಿಗಳನ್ನು ಸಿನಿಮಾ ಮಾಡಲು ಹೊರಟಿದ್ದಾರೆ ಚಂದ್ರು.

ಚಿತ್ರದಲ್ಲಿ ತೆಲುಗು ನಟಿ ಸುಧಾ ಅವರು ನಟಿಸಿದ್ದಾರೆ. ವಿಶೇಷವೆಂದರೆ, ಅವರಿಲ್ಲಿ ದುನಿಯಾ ವಿಜಯ್‌ ಅವರ ತಾಯಿಯಾಗಿ ನಟಿಸುತ್ತಿದ್ದಾರೆ. ನಟಿ ಸುಧಾ ಅವರು ತೆಲುಗಿನಲ್ಲಿ ಬಹು ಬೇಡಿಕೆಯ ಪೋಷಕ ನಟಿ. ಚಿರಂಜೀವಿ ಸೇರಿದಂತೆ ಮಹೇಶ್‌ಬಾಬು ಹಾಗೂ ಇತರೆ ನಟರ ಬಹುತೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿನ ವಿಜಯ್‌ ಅವರ ಇಂಟ್ರೋಡಕ್ಷನ್‌ ಸಾಂಗ್‌ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ವಿಶಿಷ್ಟವಾದ ವಾರಿಯರ್‌ ಶೈಲಿಯ  ಈ ಹಾಡು ದೇವನಹಳ್ಳಿ ಬಳಿ ಹದಿನೈದೆಕರೆಯಷ್ಟು ವಿಶಾಲವಾದ ಕೆಂಪು ಹುಡಿ ಮಣ್ಣಿನ ಪ್ರದೇಶದಲ್ಲಿ ಚಿತ್ರೀಕರಣಗೊಂಡಿದೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ನವೀನ್‌ ಸಜ್ಜು ಸಂಗೀತವಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.