![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 1, 2024, 5:01 PM IST
ಒಂದೊಂದೇ ಸಿನಿಮಾಗಳ ಮೂಲಕ ಚಿತ್ರರಂಗದಲ್ಲಿ ಬಿಝಿಯಾಗುತ್ತಿರುವ ಅನುಷಾ ರೈಗೆ ಈಗ ಮತ್ತೂಂದು ಹೊಸ ಸಿನಿಮಾ ಸಿಕ್ಕಿದೆ. ಡಿ.ಜಿ.ಉಮೇಶ್ ಗೌಡ ನಿರ್ದೇಶನದ ಹೊಸ ಚಿತ್ರಕ್ಕೆ ಅನುಷಾ ನಾಯಕಿಯಾಗಿದ್ದಾರೆ.
ಈ ಹಿಂದೆ ನವರಂಗಿ, ಹಳ್ಳಿ ಪಂಚಾಯ್ತಿ, ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಅಭಿನಯದ ಓ ಮನಸೇ ಚಿತ್ರಗಳನ್ನು ನಿರ್ದೇಶಿಸಿದ್ದ ಡಿ.ಜಿ. ಉಮೇಶ್ ಗೌಡ ಅವರು ಈಗ ಹೊಸ ಚಿತ್ರ ಮಾಡಲು ಮುಂದಾಗಿದ್ದಾರೆ. ಲವ್, ಆ್ಯಕ್ಷನ್ ಜೊತೆಗೆ ಸೆಂಟಿಮೆಂಟ್ ಡ್ರಾಮಾ ಕಥಾಹಂದರ ಒಳಗೊಂಡಿರುವ ಈ ಚಿತ್ರದ ಮುಹೂರ್ತ ಆಗಸ್ಟ್ 9ಕ್ಕೆ ಬೆಳಗಾವಿಯಲ್ಲಿ ನಡೆಯಲಿದೆ. ನಂತರ ಬೆಳಗಾವಿ, ಬೆಂಗಳೂರು ಸುತ್ತಮುತ್ತ 50 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.
ಚಿತ್ರದಲ್ಲಿ 5 ಹಾಡುಗಳಿದ್ದು ಕೇರಳ, ಮಂಗಳೂರು, ಸಕಲೇಶಪುರ, ಚಿಕ್ಕಮಗಳೂರಿನಲ್ಲಿ ಚಿತ್ರೀಕರಿಸುವ ಯೋಜನೆ ಹಾಕಿಕೊಳ್ಳಲಾ ಗಿದೆ. ಈ ಚಿತ್ರವನ್ನು ಶ್ರೀಸ್ನೇಹ ಕಂಬೈನ್ಸ್ನಡಿ ಶೇಖರ್ ನಾ ಕಾಲೇರಿ ಅವರು ನಿರ್ಮಿಸುತ್ತಿದ್ದಾರೆ
ಚಿತ್ರದ ನಾಯಕನಾಗಿ ಸಂತೋಷ್, ನಾಯಕಿಯಾಗಿ ಅನುಷಾ ರೈ, ಉಳಿದ ಪಾತ್ರಗಳಲ್ಲಿ ಶೋಭರಾಜ್, ಸುಚೇಂದ್ರ ಪ್ರಸಾದ್, ಅಭಿಜಿತ್, ದಿವ್ಯಾ ಗೌಡ ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಡಿ.ಜಿ.ಉಮೇಶ್ ಗೌಡ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.