Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ
Team Udayavani, Apr 21, 2024, 10:45 AM IST
ಕಲ್ಜಿಗ- ಹೀಗೊಂದು ಸಿನಿಮಾ ಸದ್ದಿಲ್ಲದೇ ತಯಾರಾಗಿದೆ. ಅರ್ಜುನ್ ಕಾಪಿಕಾಡ್ ಈ ಚಿತ್ರದ ನಾಯಕ. ಈ ಚಿತ್ರ ತುಳು ಮತ್ತು ಕನ್ನಡ ಎರಡು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಕಲ್ಜಿಗ ಎಂಬುದು ತುಳುಪದವಾಗಿದ್ದು, ಕಲಿಯುಗ ಎಂಬ ಅರ್ಥವಿದೆ. ತುಳುನಾಡಿನಲ್ಲಿ ಹಲವು ಪವಾಡಗಳ, ತನ್ನ ಶಕ್ತಿಯ ಮೂಲಕ ಅಪಾರ ಭಕ್ತರನ್ನು ಹೊಂದಿರುವ ದೈವವೊಂದರ ಸುತ್ತ ಈ ಸಿನಿಮಾ ನಡೆಯಲಿದೆ.
ಸುಮನ್ ಸುವರ್ಣ ನಿರ್ದೇಶನದ ಈ ಚಿತ್ರವನ್ನು ಶರತ್ ಕುಮಾರ್ ಎ.ಕೆ. ನಿರ್ಮಿಸಿದ್ದಾರೆ. ಸುಶ್ಮಿತಾ ಭಟ್ ಈ ಚಿತ್ರದ ನಾಯಕಿ. ನಾಯಕ ಅರ್ಜುನ್ ಕಾಪಿಕಾಡ್ಗೆ ಈ ಸಿನಿಮಾ ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಹೊಸ ಅನುಭವಗಳಾಗಿದ್ದು, ಇದಕ್ಕೆಲ್ಲಾ ಕಾರಣ ಆ ದೈವದ ಕಾರಣಿಕ ಎಂಬುದು ಅವರ ಮಾತು.
ಚಿತ್ರದ ಬಗ್ಗೆ ಮಾತನಾಡುವ ತಂಡ, “ಇದು ಕರಾವಳಿಯಲ್ಲಿ ನಡೆಯುವ ಕಥೆ. ಕರಾವಳಿಗರು ದೈವ-ದೇವರ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡವರು. ಈ ಸಿನಿಮಾದಲ್ಲೂ ತುಳುನಾಡಿನ ದೈವದ ಕಥೆ ಇದೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರದಲ್ಲಿ ಘಟಿಸುವ ರೋಚಕ ಕಥನ ಕಲ್ಜಿಗದಲ್ಲಿದೆ. ಚಿತ್ರದ ಚಿತ್ರೀಕರಣ ಕೂಡಾ ಅಲ್ಲೇ ನಡೆದಿದೆ’ ಎಂಬ ಮಾಹಿತಿ ನೀಡುತ್ತದೆ.
ಚಿತ್ರಕ್ಕೆ ಹಂಸಲೇಖ ಸಂಗೀತವಿದ್ದು, ಚಿತ್ರದಲ್ಲಿ ಎರಡು ಹಾಡುಗಳಿವೆ. ಸಚಿನ್ ಶೆಟ್ಟಿ ಛಾಯಾಗ್ರಹಣ, ಪ್ರಸಾದ್ ಕೆ ಶೆಟ್ಟಿ ಹಿನ್ನೆಲೆ ಸಂಗೀತ, ಯಶ್ವಿನ್ ಕೆ ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಚಿತ್ರವನ್ನು ಸೆಪ್ಟೆಂಬರ್ನಲ್ಲಿ ತೆರೆಗೆ ತರುವ ಯೋಚನೆ ಚಿತ್ರತಂಡದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Seetha Payana: ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್ ಹೀರೋ
Chethan Kumar: ನಟ ಚೇತನ್ ವಿರುದ್ಧದ ವಾರಂಟ್ ಹಿಂಪಡೆದ ಕೋರ್ಟ್
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.