Seetha Payana: ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್ ಹೀರೋ
Team Udayavani, Oct 17, 2024, 3:25 PM IST
ನಿರ್ದೇಶಕ ಅರ್ಜುನ್ ಸರ್ಜಾ ಸದ್ದಿಲ್ಲದೇ ಸಿನಿಮಾವೊಂದನ್ನು ನಿರ್ದೇಶಿಸಿದ್ದಾರೆ. ಅದು “ಸೀತಾ ಪಯಣ’. ಈ ಚಿತ್ರದಲ್ಲಿ ನಿರಂಜನ್ ನಾಯಕರಾಗಿ ನಟಿಸಿದ್ದಾರೆ. ಯಾರು ನಿರಂಜನ್ ಎಂದರೆ ಉಪೇಂದ್ರ ಅವರ ಮನೆಯ ಕಡೆಗೆ ಬೆರಳು ತೋರಿಸಬೇಕು. ಏಕೆಂದರೆ ಈ ನಿರಂಜನ್ ಬೇರಾರು ಅಲ್ಲ, ಉಪೇಂದ್ರ ಅಣ್ಣ ಸುಧೀಂದ್ರ ಅವರ ಪುತ್ರ. ಈಗಾಗಲೇ ಎರಡ್ಮೂರು ಸಿನಿಮಾಗಳಲ್ಲಿ ನಿರಂಜನ್ ನಟಿಸಿದ್ದು, ಆ ಚಿತ್ರಗಳು ಬಿಡುಗಡೆಯ ಹಂತಕ್ಕೆ ಬಂದಿವೆ. ಈ ನಡುವೆಯೇ ನಿರಂಜನ್ ಸದ್ದಿಲ್ಲದೇ “ಸೀತಾ ಪಯಣ’ದಲ್ಲಿ ನಟಿಸಿದ್ದಾರೆ.
ಅರ್ಜುನ್ ಸರ್ಜಾ ನಿರ್ದೇಶಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ “ಪ್ರೇಮ ಬರಹ’ ಎಂಬ ಸಿನಿಮಾ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ತಮ್ಮ ಮಗಳು ಐಶ್ವರ್ಯ ಅರ್ಜುನ್ ಅವರನ್ನು ನಾಯಕಿಯನ್ನಾಗಿಸುವ ಮೂಲಕ ಚಿತ್ರರಂಗಕ್ಕೆ ಪರಿಚಯಿಸಿದ್ದರು. ನಟ ಚಂದನ್ ಈ ಚಿತ್ರದ ಹೀರೋ. 2018ರಲ್ಲಿ ರೊಮ್ಯಾಂಟಿಕ್ ಡ್ರಾಮಾ ಕಥಾಹಂದರದ ಈ ಸಿನಿಮಾವನ್ನು ಸ್ವತಃ ಅರ್ಜುನ್ ಸರ್ಜಾ ನಿರ್ದೇಶಿಸಿ, ತಮ್ಮದೇ ಶ್ರೀರಾಮ್ ಫಿಲಂಸ್ ಬ್ಯಾನರ್ನಡಿ ನಿರ್ಮಿಸಿದ್ದರು. ಈ ಚಿತ್ರಕ್ಕೆ ಕಥೆಯನ್ನೂ ಸ್ವತಃ ಅವರೇ ಬರೆದಿದ್ದರು.
ಅದಕ್ಕೂ ಮೊದಲು 2014ರಲ್ಲಿ ತೆರೆಕಂಡ “ಅಭಿಮನ್ಯು’ ಸಿನಿಮಾವನ್ನು ಅರ್ಜುನ್ ನಿರ್ದೇಶಿಸಿದ್ದರು. ಈ ಚಿತ್ರಕ್ಕೆ ಕರ್ನಾಟಕ ರಾಜ್ಯ ಪ್ರಶಸ್ತಿಯೂ ಬಂದಿತ್ತು. ಇತ್ತೀಚೆಗೆ ಪ್ಯಾನ್ ಇಂಡಿಯಾ, ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ತೆರೆಕಂಡ ಧ್ರುವಾ ಸರ್ಜಾ ಅವರ “ಮಾರ್ಟಿನ್’ ಚಿತ್ರಕ್ಕೂ ಅರ್ಜುನ್ ಕಥೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Chethan Kumar: ನಟ ಚೇತನ್ ವಿರುದ್ಧದ ವಾರಂಟ್ ಹಿಂಪಡೆದ ಕೋರ್ಟ್
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
BBK11: ನೀವು ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು, ಜನರ ಮನಸ್ಸು ಗೆಲ್ಲೋದು ನಾನೇ.. ಜಗದೀಶ್
Ellige Payana Yaavudo Daari Movie: ಟ್ರೇಲರ್ನಲ್ಲಿ ಅಭಿಮನ್ಯು ಪಯಣ
MUST WATCH
ಹೊಸ ಸೇರ್ಪಡೆ
Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Lawrwnce: ಬಿಷ್ಣೋಯಿ ಗ್ಯಾಂಗ್ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ
Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.