ಅರ್ಜುನ್‌ ಸರ್ಜಾ ಈಗ ಭೂಮಿಪುತ್ರ


Team Udayavani, Apr 30, 2017, 11:18 AM IST

kumar-life-story-film.jpg

ಇದುವರೆಗೂ ಕರ್ನಾಟಕದಲ್ಲಿ ಯಾವ ಸಕ್ರಿಯ ರಾಜಕಾರಣಿಯ ಕುರಿತು ಸಿನಿಮಾ ಬಂದ ಉದಾಹರಣೆಗಳಿಲ್ಲ. ಕೆಲವು ಚಿತ್ರಗಳು ಶುರುವಾದರೂ, ಅವು ಬಿಡುಗಡೆಯಾಗಿಲ್ಲ. ಹೀಗಿರುವಾದ ಒಂದು ದೊಡ್ಡ ಸಾಹಸಕ್ಕೆ ಹಿರಿಯ ನಿರ್ದೇಶಕ ಎಸ್‌. ನಾರಾಯಣ್‌ ಕೈಹಾಕಿದ್ದಾರೆ. ಅವರೀಗ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಕುರಿತ ಒಂದು ಸಿನಿಮಾ ಮಾಡುವುದಕ್ಕೆ ಹೊರಟಿದ್ದಾರೆ.

ಕುಮಾರಸ್ವಾಮಿ ಅವರ ಆಡಳಿತಾವಧಿಯ 20 ತಿಂಗಳ ಚಿತ್ರಣವನ್ನು ಅವರು ಸಿನಿಮಾ ರೂಪದಲ್ಲಿ ಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರಿಟ್ಟ ಹೆಸರು “ಭೂಮಿಪುತ್ರ’. ಈ ಚಿತ್ರ ಮೇ 8ರಂದು ನ್ಯಾಷನಲ್‌ ಕಾಲೇಜಿನ ಮೈದಾನದಲ್ಲಿ ದೊಡ್ಡ ಮಟ್ಟದಲ್ಲಿ ಪ್ರಾರಂಭವಾಗಲಿದೆ. ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಂದು ಹಾಜರಿರಲಿದ್ದಾರೆ. ಅಂದಹಾಗೆ, ಈ ಚಿತ್ರದಲ್ಲಿ ಕುಮಾರಸ್ವಾಮಿ ಅವರ ಪಾತ್ರ ಮಾಡುತ್ತಿರುವ ನಟ ಯಾರು ಗೊತ್ತಾ ಅರ್ಜುನ್‌ ಸರ್ಜಾ.

ಎಲ್ಲಾ ಸರಿ, ಕುಮಾರಸ್ವಾಮಿ ಅವರ ಕುರಿತು ಚಿತ್ರ ಮಾಡಬೇಕೆಂದು ಎಸ್‌. ನಾರಾಯಣ್‌ ಅವರಿಗೆ ಯಾಕನಿಸಿತು ಎಂದರೆ, ಅದಕ್ಕೆ ಕಾರಣ ನಿರ್ಮಾಪಕ ಕೆ. ಪ್ರಭು ಕುಮಾರ್‌ ಎನ್ನುತ್ತಾರೆ ನಾರಾಯಣ್‌. “ಈ ಚಿತ್ರವನ್ನು ಪ್ರಭು ಕುಮಾರ್‌ ಅವರು ನಿರ್ಮಿಸುತ್ತಿದ್ದಾರೆ. ಕುಮಾರಸ್ವಾಮಿ ಅವರ ಕುರಿತು ಸಿನಿಮಾ ಮಾಡಬೇಕೆಂಬ ಐಡಿಯಾ ಅವರದ್ದೇ. ಸುಮಾರು ಐದಾರು ತಿಂಗಳ ಕಾಲ ಅವರು ಈ ಚಿತ್ರ ಮಾಡುವ ಪ್ರಯತ್ನ ಮಾಡಿದ್ದಾರೆ. ಕೊನೆಗೆ ಅದು ಕೈಗೂಡಲಿಲ್ಲ.

ಕೊನೆಗೆ ಯಾರೋ ನನ್ನ ಹೆಸರು ಹೇಳಿದ್ದಾರೆ. ಅವರು ನನ್ನನ್ನು ಸಂಪರ್ಕಿಸಿ, ಕುಮಾರಸ್ವಾಮಿ ಅವರ ಕುರಿತು ಚಿತ್ರ ಮಾಡುವುದಕ್ಕೆ ಮೊದಲು ಹೇಳಿದಾಗ, ನನಗೂ ಮೊದಲು ಆಸಕ್ತಿ ಮೂಡಲಿಲ್ಲ. ಆ ನಮತರ ಈ ಚಿತ್ರವನ್ನು ಮಾಡುವುದಕ್ಕೆ ತೀರ್ಮಾನಿಸಿದೆ. ಏಕೆಂದರೆ, ಕುಮಾರಸ್ವಾಮಿ ಅವರ 20 ತಿಂಗಳ ಆಡಳಿತವನ್ನು ಬಹಳ ಹತ್ತಿರದಿಂದ ಕಂಡವನು ನಾನು. ಅವರು ಜನರಿಗೆ ಹೇಗೆ ಸ್ಪಂದಿಸುತ್ತಿದ್ದರು, ಸಾಮಾನ್ಯರಲ್ಲಿ ಸಾಮಾನ್ಯರಾಗಿ ಹೇಗೆ ಇರುತ್ತಿದ್ದರು, ಅವರ ದೂರದೃಷ್ಟಿ, ಅವರ ಕನಸುಗಳು… ಈ ಬಗ್ಗೆ ನನಗೆ ಗೊತ್ತು.

ಇವೆಲ್ಲವೂ ನನಗೆ ಬಹಳ ಹತ್ತಿರದಿಂದ ನೋಡಿದ್ದರಿಂದ, ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂಬ ಕಾರಣಕ್ಕೆ ಈ ಚಿತ್ರ ಮಾಡುವುದಕ್ಕೆ ಒಪ್ಪಿಕೊಂಡೆ’ ಎನ್ನುತ್ತಾರೆ ನಾರಾಯಣ್‌. ಈ ವಿಷಯವನ್ನು ಕುಮಾರಸ್ವಾಮಿ ಅವರ ಬಳಿ ಪ್ರಸ್ತಾಪಿಸಿದಾಗ, ಅವರು ಮೊದಲು ನಿರಾಕರಿಸಿದರಂತೆ. “ನಾನು ಈ ವಿಷಯವನ್ನು ಕುಮಾರಸ್ವಾಮಿ ಅವರ ಬಳಿ ಹೇಳಿದಾಗ, ಯಾಕೆ ಬೇಕು ಎಂದರು. ಕೊನೆಗೆ ಅವರ ಹತ್ತಿರ ಮಾತಾಡಿದೆ. ಇವತ್ತು ಮೆಟ್ರೋ ಬರುವುದಕ್ಕೆ ಶ್ರಮಪಟ್ಟವರು ಅವರು.

ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಆಡುತ್ತಾರೆ. ಸಾಧನೆ ಮಾಡಿದರೆ ಮಾತ್ರ ಇಂಥದ್ದೊಂದು ಮೆಚ್ಚುಗೆ ದೊಡ್ಡವರಿಂದ ಸಿಗುತ್ತದೆ. ಈ ಸತ್ಯಗಳನ್ನು ಜನರಿಗೆ ತಿಳಿಸಬೇಕು ಎನ್ನುವುದು ಒಂದು ವಿಷಯವಾದರೆ, ಒಬ್ಬ ಮುಖ್ಯಮಂತ್ರಿ ಹೇಗಿರಬೇಕು ಎಂಬುದನ್ನು ತಿಳಿಸಿಕೊಟ್ಟರೆ, ಮಾದರಿ ಆದಂತಾಗುತ್ತದೆ. ಈ ಬಗ್ಗೆ ಅವರಿಗೆ ಹೇಳಿದಾಗ, ಮಾದರಿ ಆಗುವುದಾದರೆ ಚಿತ್ರ ಮಾಡಿ ಎಂದು ಒಪ್ಪಿಗೆ ಕೊಟ್ಟರು.

ಆದರೆ, ಯಾವುದೇ ಕಾರಣಕ್ಕೂ ತಮ್ಮನ್ನು ವೈಭವೀಕರಿಸಬಾರದು ಎಂದು ಸ್ಪಷ್ಟವಾಗಿ ಹೇಳಿದರು. ನಾವು ವೈಭವೀಕರಿಸುತ್ತಿಲ್ಲ. ನನಗೆ ಗೊತ್ತಿರುವ ಮಾಹಿತಿಯ ಜೊತೆಗೆ, ಇನ್ನಷ್ಟು ಮಾಹಿತಿಯನ್ನು ಸಂಗ್ರಹಿಸಿ ಚಿತ್ರಕಥೆ ಮಾಡುತ್ತಿದ್ದೇನೆ. ನಾಳೆ ಈ ಚಿತ್ರದಿಂದ ಯಾರಿಗೂ ನೋವಾಗಬಾರದು. ಹಾಗಾಗಿ ಸಾಕಷ್ಟು ಮುಂಜಾಗ್ರತೆವಹಿಸಿ ಚಿತ್ರಕಥೆ ಮಾಡುತ್ತಿದ್ದೇವೆ. ಈಗಾಗಲೇ ಕೊನೆಯ ಹಂತಕ್ಕೆ ಬಂದಿದೆ. ಮೇ ಎಂಟರಂದು ಚಿತ್ರ ಪ್ರಾರಂಭವಾಗಲಿದೆ’ ಎಂದು ಮಾಹಿತಿ ಕೊಡುತ್ತಾರೆ ನಾರಾಯಣ್‌.

ಇದೊಂದು ಬಿಗ್‌ ಬಜೆಟ್‌ ಅಷ್ಟೇ ಅಲ್ಲ, ದೊಡ್ಡ ತಾರಾಗಣದ ಚಿತ್ರವಾಗಲಿದೆಯಂತೆ. “ಚಿತ್ರದಲ್ಲಿ ಸುಮಾರು 125 ಪಾತ್ರಗಳಿವೆ. ಕನ್ನಡ ಚಿತ್ರರಂಗದ ಎಲ್ಲಾ ಪ್ರಮುಖ ಕಲಾವಿದರು ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬರೀ ಬಿಗ್‌ ಬಜೆಟ್‌ ಅಷ್ಟೇ ಅಲ್ಲ, ದೊಡ್ಡ ತಾರಾಗಣದ ಚಿತ್ರವೂ ಇದಾಗಲಿದೆ. ಅರ್ಜುನ್‌ ಸರ್ಜಾ ಅವರು ಕುಮಾರಸ್ವಾಮಿ ಅವರ ಪಾತ್ರ ಮಾಡುತ್ತಿದ್ದಾರೆ. ಇನ್ನು ಪಿ.ಕೆ.ಎಚ್‌. ದಾಸ್‌ ಛಾಯಾಗ್ರಹಣ ಮಾಡುತ್ತಿದ್ದಾರೆ. ಮಿಕ್ಕ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ಸದ್ಯದಲ್ಲೇ ಮಾಡಲಾಗುತ್ತದೆ’ ಎನ್ನುತ್ತಾರೆ ನಾರಾಯಣ್‌.

ಟಾಪ್ ನ್ಯೂಸ್

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.