ವರ್ಷಕ್ಕೆರಡು ಸಿನಿಮಾ ಮಾಡುವ ಕನಸಿದೆ…

ಅಶ್ವಿ‌ನಿ ಪುನೀತ್‌ ರಾಜ್‌ಕುಮಾರ್‌ ಮುಕ್ತ ಮಾತು

Team Udayavani, Jul 26, 2023, 1:57 PM IST

tdy-15

ಅಶ್ವಿ‌ನಿ ಪುನೀತ್‌ ರಾಜ್‌ಕುಮಾರ್‌ ಯಾವುದೇ ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾದರೂ ಅಲ್ಲಿ ಅವರ ಮಾತು ಕಮ್ಮಿ. ಆದರೆ, ಸಿನಿಮಾ ತಂಡವನ್ನು ಮುಕ್ತ ಮನಸ್ಸಿನಿಂದ ಹರಸುತ್ತಾರೆ. ಸದ್ಯ ಅವರದ್ದೇ ನಿರ್ಮಾಣದ “ಆಚಾರ್‌ ಅಂಡ್‌ ಕೋ’ ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈ ಸಂದರ್ಭದಲ್ಲಿ ಅವರು ವಿಶೇಷ ಸಂದರ್ಶನ ನೀಡಿದ್ದು, “ಆಚಾರ್‌ ಅಂಡ್‌ ಕೋ’ ಜೊತೆಗೆ ತಮ್ಮ ಮುಂದಿನ ಸಿನಿಮಾ ಕನಸುಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ಅದು ಅವರದ್ದೇ ಮಾತುಗಳಲ್ಲಿ..

‘ಆಚಾರ್‌ ಆ್ಯಂಡ್‌ ಕೋ’ ಫ್ಯಾಮಿಲಿ ಸಿನಿಮಾ: ಇದೊಂದು ಕಂಟೆಂಟ್‌ ಒರಿಯೆಂಟೆಡ್‌ ಸಿನಿಮಾ. ನಾನು ಇದರ ಸ್ಕ್ರಿಪ್ಟ್ ಓದಿದ್ದೆ. ಸ್ಕ್ರಿಪ್ಟ್ ನನಗೆ ತುಂಬ ಇಷ್ಟವಾಯಿತು. 60ರ ದಶಕದ ಬೆಂಗಳೂರಿನ ಕಥೆಯನ್ನು ಈ ಸಿನಿಮಾ ಹೊಂದಿಎ. ಪಕ್ಕಾ ಫ್ಯಾಮಿಲಿ ಡ್ರಾಮಾ. 2021ರ ಜೂನ್‌ನಲ್ಲಿ ಕಥೆ ಓಕೆ ಮಾಡಿದ್ದೆವು. ಆಮೇಲೆ 2021ರ ಡಿಸೆಂಬರ್‌ನಲ್ಲಿ ಶೂಟಿಂಗ್‌ ಆರಂಭಿಸಬೇಕು ಎಂದುಕೊಂಡಿದ್ದೆವು. ಕೊನೆಗೆ 2022ರ ಏಪ್ರಿಲ್‌ನಲ್ಲಿ ಸಿನಿಮಾ ಆರಂಭವಾಯಿತು. ಈಗ ಸಿನಿಮಾ ರಿಲೀಸ್‌ ಆಗುತ್ತಿದೆ. ಇದು ಎಲ್ಲರಿಗೂ ಕನೆಕ್ಟ್ ಆಗುವ ಸಿನಿಮಾ. ಹಿಂದಿನ ಕಾಲದ ತರಹ ಈ ಸಿನಿಮಾದಲ್ಲೂ ದೊಡ್ಡ ಕುಟುಂಬ ಇರುತ್ತದೆ.

ಮಹಿಳಾ ಪ್ರಧಾನ ಸಿನಿಮಾ ಅಂಥ ಹೇಳಲಾಗದು: “ಆಚಾರ್‌ ಆ್ಯಂಡ್‌ ಕೋ’ ಸಿನಿಮಾದ ಹಲವು ವಿಭಾಗಳಲ್ಲಿ ಮಹಿಳೆಯರು ಪ್ರಮುಖವಾಗಿ ಕಾಣಿಸಿಕೊಂಡಿದ್ದಾರೆ ನಿಜ. ಹಾಗಂತ ಇದನ್ನು ಮಹಿಳಾ ಪ್ರಧಾನ ಸಿನಿಮಾ ಎನ್ನು ವಂತಿಲ್ಲ. ಚಿತ್ರವನ್ನು ಸಿಂಧೂ ಶ್ರೀನಿವಾಸಮೂರ್ತಿ ನಿರ್ದೇಶನ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸಿದ್ದಾರೆ. ಆನಂತರ ಸಂಗೀತ ನಿರ್ದೇಶಕಿಯಾಗಿ ಬಿಂದುಮಾಲಿನಿ ಇದ್ದಾರೆ. ಹೀಗೆ ಸಿನಿಮಾದ ಪ್ರಮುಖ ವಿಭಾಗಗಳಲ್ಲಿ ಮಹಿಳೆಯರೇ ಕೆಲಸ ಮಾಡಿದ್ದಾರೆ. ಮೊದಲು ಈ ಸಿನಿಮಾವನ್ನು ಓಟಿಟಿಯಲ್ಲಿ ರಿಲೀಸ್‌ ಮಾಡುವುದು ಅಂದುಕೊಂಡಿದ್ದೆವು. ಆದರೆ, ಅಂದುಕೊಂಡ ಬಜೆಟ್‌ಗಿಂತ ಜಾಸ್ತಿಯಾಗಿದೆ. ಈಗ ಥಿಯೇಟರ್‌ ನಲ್ಲಿ ರಿಲೀಸ್‌ ಮಾಡುತ್ತಿದ್ದೇವೆ. ಜನರ ಪ್ರತಿಕ್ರಿಯೆ ಬಗ್ಗೆ ನನಗೆ ಕುತೂಹಲವಿದೆ.

ಕಂಟೆಂಟ್‌ ಮತ್ತು ಮೇಕಿಂಗ್‌ ಎರಡೂ ಮುಖ್ಯ: ಸಿನಿಮಾದ ಮೇಕಿಂಗ್‌ ಜೊತೆಗೆ ಕಂಟೆಂಟ್‌ ಕೂಡಾ ತುಂಬಾ ಮುಖ್ಯವಾಗುತ್ತದೆ. ಹಾಗಾಗಿ, ಕಂಟೆಂಟ್‌ ಬಗ್ಗೆ ಹೆಚ್ಚು ಗಮನ ಕೊಡುತ್ತಿದ್ದೇವೆ. ಕಂಟೆಂಟ್‌ ಜೊತೆಗೆ ಒಳ್ಳೆಯ ಮೇಕಿಂಗ್‌ ಇದ್ದರೆ ಸಿನಿಮಾದ ತೂಕ ಹೆಚ್ಚುತ್ತದೆ. ನಮ್ಮ ಬ್ಯಾನರ್‌ನಲ್ಲಿ ಬೇರೆ ಬೇರೆ ಜಾನರ್‌ನ ಸಿನಿಮಾಗಳನ್ನು ಮಾಡಬೇಕು ಎಂಬ ಆಸೆ ಇದೆ. ದೊಡ್ಡ ಬಜೆಟ್‌ನ ಸಿನಿಮಾ ಮಾಡುತ್ತಿಲ್ಲ. ಅಲ್ಲಿ ರಿಸ್ಕ್ ಜಾಸ್ತಿ ಇರುತ್ತದೆ. ಸಾಕಷ್ಟು ಕಥೆಗಳನ್ನು ಕೇಳುತ್ತೇನೆ. ಇಷ್ಟವಾದ ಕಥೆಗಳನ್ನು ಸಿನಿಮಾ ಮಾಡುತ್ತಿದ್ದೇವೆ.

ಕಥೆ ಇಷ್ಟವಾದರೆ ನಾವೇ ಸಂಪರ್ಕಿಸುತ್ತೇವೆ…: ಇವತ್ತು ತಂತ್ರಜ್ಞಾನ ಮುಂದುವರೆದಿದೆ. ಕಂಟೆಂಟ್‌ಗಳನ್ನು ಬೇರೆ ಬೇರೆ ರೂಪ ದಲ್ಲಿ ತಲುಪಿಸಬಹುದು. ಕೆಲವರು ಶಾರ್ಟ್‌ ಮೂವೀಸ್‌ ಮಾಡಿಕೊಂಡು ಬಂದು ತೋರಿಸುತ್ತಾರೆ. ಇನ್ನು ಕೆಲವರು ಮೇಲ್‌ ಮಾಡಿ ಕಂಟೆಂಟ್‌ ಬಗ್ಗೆ ಹೇಳುತ್ತಾರೆ. ಮೊದಲು ನನಗೆ ಇಷ್ಟವಾದರೆ ಆ ನಂತರ ನನ್ನ ತಂಡಕ್ಕೆ ಹೇಳುತ್ತೇನೆ. ಆ ತಂಡ ಅವರನ್ನು ಸಂಪರ್ಕಿಸುತ್ತದೆ. ನಮ್ಮ ಜೊತೆ ಮೂವರು ನಿರ್ದೇಶಕರಿದ್ದಾರೆ. ಅವರ ಜೊತೆ ಚರ್ಚೆ ಮಾಡುತ್ತೇನೆ.

ಕಾದಂಬರಿ ಓದುತ್ತಿದ್ದೇನೆ..: ನನಗೆ ಕಾದಂಬರಿ ಓದುವುದರೆಂದರೆ ತುಂಬಾ ಇಷ್ಟ. ಕಾಲೇಜು ದಿನಗಳಿಂದಲೂ ನಾನು ತುಂಬಾ ಕಾದಂಬರಿ ಓದಿದ್ದೇನೆ. ಸದ್ಯ ಕನ್ನಡದ ಎರಡು ಕಾದಂಬರಿಗಳನ್ನು ಓದುತ್ತಿದ್ದೇನೆ. ಕಾದಂಬರಿ ಆಧರಿಸಿದ ಸಿನಿಮಾಗಳನ್ನು ಮಾಡುವ ಕನಸಿದೆ.

ಅಂಗಾಂಗ ದಾನದ ರಾಯಭಾರಿಯಾಗಲು ಆಹ್ವಾನ ಬಂದಿಲ್ಲ.. : ಅಂಗಾಂಗ ದಾನ ಜಾಗೃತಿ ಮೂಡಿಸುವ ಕುರಿತಾಗಿ ರಾಯಭಾರಿಯಾಗಿ ಮಾಡಲು ಸರ್ಕಾರ ಮುಂದಾಗಿರುವ ವಿಚಾರವನ್ನು ನಾನು ಮಾಧ್ಯಮಗಳಲ್ಲಿ ನೋಡಿ ತಿಳಿದೆ. ನನಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲ. ಆದರೆ, ಇದೊಂದು ಒಳ್ಳೆಯ ಕಾರ್ಯ.

ಥ್ರಿಲ್ಲರ್‌ ಸಿನಿಮಾಗಳೆಂದ್ರೆ ಇಷ್ಟ: ನಾನು ಎಲ್ಲಾ ಜಾನರ್‌ನ ಸಿನಿಮಾಗಳನ್ನು ನೋಡುತ್ತೇನೆ. ಆದರೆ, ವೈಯಕ್ತಿಕವಾಗಿ ನನಗೆ ಥ್ರಿಲ್ಲರ್‌ ಸಿನಿಮಾ ಗಳೆಂದರೆ ಇಷ್ಟ.

ವರ್ಷಕ್ಕೆರಡು ಸಿನಿಮಾ ಮಾಡುವ ಯೋಜನೆ: ನಮ್ಮ ಪಿಆರ್‌ಕೆ ಬ್ಯಾನರ್‌ ನಲ್ಲಿ ವರ್ಷಕ್ಕೆರಡು ಸಿನಿಮಾಗಳನ್ನು ಮಾಡುವ ಕನಸಿದೆ. ಆ ನಿಟ್ಟಿನಲ್ಲೇ ಕಥೆಗಳನ್ನು ಕೂಡಾ ಕೇಳುತ್ತಿದ್ದೇವೆ. ಈಗಾಗಲೇ “ಆಚಾರ್‌ ಅಂಡ್‌ ಕೋ’ ರಿಲೀಸ್‌ ಹಂತಕ್ಕೆ ಬಂದಿದೆ. ಇದರ ಜೊತೆಗೆ “ಓ2′ ಎಂಬ ಸಿನಿಮಾವೊಂದು ರೆಡಿಯಾಗಿದೆ. ಆ ಚಿತ್ರ ಕೂಡಾ ಈ ವರ್ಷ ರಿಲೀಸ್‌ ಆಗಬಹುದು.

ಸದ್ಯಕ್ಕೆ ಮಕ್ಕಳಿಗೆ ಸಿನಿಮಾಸಕ್ತಿ ಇಲ್ಲ… : ಮಕ್ಕಳ ಜೊತೆ ಸಿನಿಮಾ ಬಗ್ಗೆ ಮಾತನಾಡುತ್ತೇನೆ. ಹಾಗಂತ ಅವರಿಗೆ ತುಂಬಾ ಆಸಕ್ತಿ ಇಲ್ಲ. ಮಕ್ಕಳು ಇನ್ನೂ ಓದುತ್ತಿದ್ದಾರೆ. ಸದ್ಯಕ್ಕಂತೂ ಸಿನಿಮಾದ ಕಡೆ ಆಸಕ್ತಿ ತೋರಿಸಿಲ್ಲ. ದೊಡ್ಡ ಮಗಳು (ಧೃತಿ) ಆರ್ಟ್‌ ವಿಷಯವನ್ನು ಓದುತ್ತಿದ್ದಾಳೆ. ಚಿಕ್ಕವಳು (ವಂದಿತಾ) ಈಗ ಸೆಕೆಂಡ್‌ ಪಿಯುಸಿ. ಅವರ ಅಣ್ಣಂದಿರ (ವಿನಯ್‌, ಯುವ) ಜೊತೆಗೆ ಚಿಕ್ಕವಳು ಸಿನಿಮಾ ಕುರಿತಾಗಿ ಮಾತನಾಡುತ್ತಿರುತ್ತಾಳೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.