‘ಮುಗಿಲ್‌ ಪೇಟೆ’ ಸಿನಿಮಾದಲ್ಲಿ ಅಸ್ಸಾಂ ಬೆಡಗಿ ಖಯಾದು


Team Udayavani, Oct 31, 2021, 4:35 PM IST

kayadu lohar

ಯಾವುದೇ ಚಿತ್ರರಂಗವಿರಲಿ, ಅಲ್ಲಿ ಎಲ್ಲಾ ಭಾಷೆಯ ನಟ, ನಟಿಯರ ಎಂಟ್ರಿ ಇದ್ದೇ ಇರುತ್ತೆ. ಇದಕ್ಕೆ ಕನ್ನಡ ಚಿತ್ರರಂಗ ಕೂಡ ಹೊರತಲ್ಲ. ಈಗಾಗಲೇ ಕನ್ನಡಕ್ಕೆ ಟಾಲಿವುಡ್‌, ಕಾಲಿವುಡ್‌, ಮಾಲಿವುಡ್‌, ಬಾಲಿವುಡ್‌ನಿಂದಲೂ ನಟಿಯರು ಕಾಲಿಟ್ಟಾಗಿದೆ. ಅದರೊಂದಿಗೆ ವಾರಣಾಸಿ, ಕಾಶ್ಮೀರ, ಒಡಿಸ್ಸಾ, ಕೊಲ್ಕತ್ತಾ ಹೀಗೆ ಇನ್ನಿತರೆ ರಾಜ್ಯಗಳಿಂದಲೂ ನಟಿಯರು ಬಂದಾಗಿದೆ. ಆ ಸಾಲಿಗೆ ಈಗ ಅಸ್ಸಾಂ ಬೆಡಗಿಯೊಬ್ಬಳ ಆಗಮನವಾಗಿದೆ. ಹೀಗೆ ಅಸ್ಸಾಂನಿಂದ ಬಂದ ನಟಿ ಖಯಾದು ಲೋಹರ್‌. ಅದು “ಮುಗಿಲ್‌ ಪೇಟೆ’ ಚಿತ್ರದ ಮೂಲಕ. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

ಖಯಾದು ಅವರಿಗೆ ಸಿನಿಮಾ ಹೊಸದಲ್ಲ. ಇದಕ್ಕೂ ಮುನ್ನ ಅವರು ಮರಾಠಿ ಭಾಷೆಯ ಚಿತ್ರವೊಂದರಲ್ಲಿ ನಟಿಸಿದ್ದಾರೆ. ದಕ್ಷಿಣ ಭಾರತ ಚಿತ್ರರಂಗಕ್ಕೆ ಬಂದಿರುವುದರಿಂದ ಖಯಾದು ಲೋಹರ್‌ಗೆ ಖುಷಿ ¨ ಖಯಾದು ಅವರು ತಮ್ಮ ಕನ್ನಡದ ಮೊದಲ ಚಿತ್ರದ ಬಗ್ಗೆ ಹೇಳಿಕೊಳ್ಳುವುದು ಹೀಗೆ.”ನನಗೆ ಇದು ಮೊದಲ ಕನ್ನಡ ಸಿನಿಮಾ. ಕನ್ನಡ ಭಾಷೆ ನನಗಿಷ್ಟ. ಆದರೆ, ಸರಿಯಾಗಿ ಮಾತನಾಡಲು ಬರುವುದಿಲ್ಲ. ಆದರೆ, ಮಾತನಾಡುವ ಭಾಷೆ ನನಗೆ ಅರ್ಥವಾಗುತ್ತೆ. ಇದೇ ಮೊದಲ ಸಲ ಕನ್ನಡ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಹಾಗಾಗಿ, ನಾನು ಕನ್ನಡ ಭಾಷೆ ಕಲಿಯುವ ಆಸಕ್ತಿ ಹೊಂದಿದ್ದು, ಕ್ಯಾಮೆರಾ ಮುಂದೆ ನಿಲ್ಲುವ ಮೊದಲೇ ನಾನು ಕನ್ನಡ ಭಾಷೆಯ ಬಗ್ಗೆ ತಿಳಿದುಕೊಂಡಿದ್ದೇನೆ. ನಿರ್ದೇಶಕರು ಕನ್ನಡ ಭಾಷೆ ಕಲಿಯಲು ತರಬೇತಿ ಕ್ಲಾಸ್‌ಗೆ ಕಳುಹಿಸಿದ್ದಾರೆ ಕೂಡಾ’ ಎನ್ನುತ್ತಾರೆ.

ಖಯಾದು ಲೋಹರ್‌ ಹಿಂದಿ ರಂಗಭೂಮಿಯಲ್ಲಿ ಒಂದಷ್ಟು ತರಬೇತಿ ಪಡೆದು ಬಂದಿದ್ದಾರೆ. ಅವರು ಸದ್ಯಕ್ಕೆ ಪೂನಾದಲ್ಲಿ ವಾಸವಾಗಿದ್ದಾರೆ. ಓದುವ ಸಂದರ್ಭದಲ್ಲೇ ಅವರಿಗೆ ಮರಾಠಿ ಚಿತ್ರವೊಂದಕ್ಕೆ ನಟಿಸುವ ಅವಕಾಶ ಸಿಕ್ಕಿದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಅಂದುಕೊಂಡ ಖಯಾದು ಅವರಿಗೆ, ಆಡಿಷನ್‌ ಮೂಲಕವೇ ಮರಾಠಿ ಸಿನಿಮಾದಲ್ಲಿ ನಟಿಸುವ ಅವಕಾಶ ಲಬಿಸಿದೆ.

ಇದನ್ನೂ ಓದಿ:ವರ್ಷದ ಹಿಂದೆ ಪುನೀತ್ ಗೆ ರಾಯರ ಸೂಚನೆ?; ವೈರಲ್ ವಿಡಿಯೋ ಗೆ ಮಂತ್ರಾಲಯ ಶ್ರೀಗಳ ಸ್ಪಷ್ಟನೆ

ಇನ್ನು, ಕನ್ನಡದ “ಮುಗಿಲ್‌ ಪೇಟೆ’ ಚಿತ್ರದಲ್ಲೂ ಸಹ ಆಡಿಷನ್‌ ಮೂಲಕವೇ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಹಾಗಾದರೆ, ಈ ಚಿತ್ರದಲ್ಲಿ ಅವರಿಗೆ ಸಿಕ್ಕ ಪಾತ್ರವೇನು? ಈ ಕುರಿತು ಹೇಳುವ ಖಯಾದು ಲೋಹರ್‌, “ಈ ಚಿತ್ರದಲ್ಲಿ ನನಗೆ ಬಬ್ಲಿ ಪಾತ್ರ ಸಿಕ್ಕಿದೆ. ತುಂಬಾ ಸ್ವತಂತ್ರವಾಗಿ ಓಡಾಡಿಕೊಂಡಿರುವ ಹುಡುಗಿಯಾಗಿ ಅವರು ಕಾಣಿಸಿಕೊಳ್ಳುತ್ತಿದ್ದೇನೆ. ಸದಾ ನಾಯಕನ ಜೊತೆ ಜಗಳವಾಡುವಂತಹ ಪಾತ್ರ ನನ್ನದು. ಒಂದು ರೀತಿ ಚಾಲೆಂಜಿಂಗ್‌ ಪಾತ್ರ ನನ್ನ ಪಾಲಿಗೆ ದಕ್ಕಿದೆ. ನನಗೆ ಸೌತ್‌ ಇಂಡಸ್ಟ್ರಿಯಲ್ಲಿ ಕೆಲಸ ಮಾಡಬೇಕು ಎಂಬ ಆಸೆ ಇತ್ತು. ಅದೀಗ ಕನ್ನಡ ಚಿತ್ರರಂಗದ ಮೂಲಕ ಈಡೇರಿದೆ’ ಎಂದು ಖುಷಿಗೊಳ್ಳುತ್ತಾರೆ ಅವರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.