Kannada Movie; ಟೀಸರ್ ನಲ್ಲಿ ಅಸುರರು
Team Udayavani, Sep 13, 2024, 6:18 PM IST
ದರೋಡೆ ಕುರಿತ ಕಥೆಯನ್ನೊಳಗೊಂಡ “ಅಸುರರು’ ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ರಾಜ್ ಬಹದ್ದೂರ್ ಈ ಸಿನಿಮಾದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ರಾಜ್ ಬಹದ್ದೂರ್, “ತಾತ ಹೇಳುತ್ತಿದ್ದ ಕಥೆ ಇದು. ಚಿಕ್ಕಂದಿನಿಂದ್ದಾಗ ಕಥೆ ಕೇಳಿ ರೋಮಾಂಚನವಾಗುತ್ತಿತ್ತು. ಅಂದು ನನಗೆ ತಲೆಯಲ್ಲಿತ್ತು. ಹಿಂದೆ ನಮಗೆ ಗೊತ್ತಿಲ್ಲದ ವಿಷಯ ತುಂಬಾ ನಡೆದಿದೆ. ಅಂತಹ ವಿಷಯವನ್ನು ಜನರಿಗೆ ಪರಿಚಯಸಬೇಕು ಎಂದಾಗ ಅಸುರರು ಸಿನಿಮಾ ಮಾಡಿದ್ದು. ಅಸುರರು ಅಂದರೆ ರಾಕ್ಷಸರರು. ಇವರು ಬೇರೆ. ಇವರು ಊರಿನ ಜನಗಳ ಮಧ್ಯೆ ಇರುತ್ತಿರಲಿಲ್ಲ. ಇವರ ಕೆಲಸ ಕಳ್ಳತನ ದರೋಡೆ ಮಾಡುವುದು’ ಎಂದು ಹೇಳಿದರು.
ನಾಯಕ ತಮ್ಮಣ್ಣ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು. ಚಿತ್ರವನ್ನು ನವೆಂಬರ್ನಲ್ಲಿ ತೆರೆಗೆ ತರುವುದಾಗಿ ಹೇಳಿದರು. ಅಸುರರು ಚಿತ್ರಕ್ಕೆ ರಾಜ್ ಬಹದ್ದೂರ್ ನಿರ್ದೇಶನದ ಜೊತೆಗೆ ಪ್ರಮುಖ ಪಾತ್ರದಲ್ಲಿಯೂ ನಟಿಸಿದ್ದಾರೆ. ಉಳಿದಂತೆ ರಾಹುಲ್ ಗಾಯಕವಾಡ, ತಮ್ಮಣ್ಣ ಟಿ.ಕೆ., ತಿಪ್ಪಣ್ಣ ಟಿ.ಎಸ್, ಮಲ್ಲಿಕಾರ್ಜುನ್ ಮಿಮಿಕ್ರಿ, ಸುಪ್ರಿತಾ ರಾಜ್ ತಾರಾಬಳಗದಲ್ಲಿದ್ದಾರೆ.
ರಾಜ್ ಬಹದ್ದೂರ್ ಫಿಲಂ ಫ್ಯಾಕ್ಟರಿ ಬ್ಯಾನರ್ನಡಿ ನಿರ್ಮಾಣವಾಗಿರುವ ಅಸುರರು ಸಿನಿಮಾಗೆ ಸುರೇಶ್ ಅರಸ್ ಸಂಕಲನ, ಸುಭಾಷ್ ಸಂಗೀತ, ನವೀನ್ ಸೂರ್ಯ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.