ಬ್ಯಾಕ್‌ ಟು ಬ್ಯಾಕ್‌ ಶಿವಣ್ಣ

ಏಪ್ರಿಲ್‌ನಲ್ಲಿ ಕವಚ ಬಂತು ಮೇಯಲ್ಲಿ ರುಸ್ತುಂ ಬರುತ್ತೆ ...

Team Udayavani, Apr 10, 2019, 3:00 AM IST

Rustom-

ಶಿವರಾಜಕುಮಾರ್‌ ಅಭಿನಯದ “ಕವಚ’ ಚಿತ್ರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಭಾವನಾತ್ಮಕ ಸಂಬಂಧಗಳ ಸುತ್ತ ಸುತ್ತುವ ಈ ಸಿನಿಮಾವನ್ನು ಫ್ಯಾಮಿಲಿ ಆಡಿಯನ್ಸ್‌ ಇಷ್ಟಪಟ್ಟಿದ್ದಾರೆ. ಈಗ ಮಾಸ್‌ ಆಡಿಯನ್ಸ್‌ಗಾಗಿ ಶಿವಣ್ಣ ಅವರ ಮತ್ತೂಂದು ಸಿನಿಮಾ ರೆಡಿಯಾಗಿದೆ.

ಅದು “ರುಸ್ತುಂ’. ಸಾಹಸ ನಿರ್ದೇಶಕ ರವಿವರ್ಮ ನಿರ್ದೇಶನದ ಚೊಚ್ಚಲ ಚಿತ್ರ “ರುಸ್ತುಂ’ ಈಗ ತನ್ನೆಲ್ಲಾ ಕೆಲಸ ಕಾರ್ಯಗಳನ್ನು ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮೇ ಕೊನೆಯ ವಾರದಲ್ಲಿ “ರುಸ್ತುಂ’ ತೆರೆಗೆ ಬರಲಿದೆ.

ಒಂದು ವೇಳೆ ಮೇಯಲ್ಲಿ “ರುಸ್ತುಂ’ ತೆರೆಕಂಡರೆ ಒಂದು ತಿಂಗಳ ಅಂತರದಲ್ಲಿ ಶಿವರಾಜಕುಮಾರ್‌ ಅವರ ಎರಡು ಚಿತ್ರಗಳು ತೆರೆಕಂಡಂತಾಗುತ್ತವೆ. “ರುಸ್ತುಂ’ ಚಿತ್ರ ಫೋಟೋಗಳು ಈಗಾಗಲೇ ಇದೊಂದು ಔಟ್‌ ಅಂಡ್‌ ಔಟ್‌ ಮಾಸ್‌ ಸಿನಿಮಾ ಎಂಬುದನ್ನು ಸಾಬೀತು ಮಾಡಿವೆ.

ಖಡಕ್‌ ಲುಕ್‌ನಲ್ಲಿರುವ ಪೊಲೀಸ್‌ ಅಧಿಕಾರಿಯಾಗಿ ಶಿವರಾಜಕುಮಾರ್‌ ಕಾಣಿಸಿಕೊಂಡಿದ್ದಾರೆ. ಜೊತೆಗೆ ಬಾಲಿವುಡ್‌ನ‌ ವಿವೇಕ್‌ ಒಬೆರಾಯ್‌ ಕೂಡಾ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರಚಿತಾ ರಾಮ್‌, ಶ್ರದ್ಧಾ ಶ್ರೀನಾಥ್‌, ಮಯೂರಿ ಸೇರಿದಂತೆ ಅನೇಕರು ನಟಿಸಿದ್ದಾರೆ.

ಚಿತ್ರದ ಟ್ರೇಲರ್‌ ಏಪ್ರಿಲ್‌ 14ಕ್ಕೆ ಬಿಡುಗಡೆಯಾಗಲಿದೆ. ಸಾಹಸ ನಿರ್ದೇಶಕ ರವಿವರ್ಮ ಅವರ ನಿರ್ದೇಶನದ ಸಿನಿಮಾ “ರುಸ್ತುಂ’ ಆಗಿರುವುದರಿಂದ ಸಹಜವಾಗಿಯೇ ಹೈವೋಲ್ಟೆಜ್‌ ಆ್ಯಕ್ಷನ್‌ ಇರಬಹುದೆಂಬ ನಿರೀಕ್ಷೆ ಮಾಸ್‌ ಪ್ರಿಯರದು.

ಸದ್ಯ ಶಿವರಾಜಕುಮಾರ್‌ ಅವರು “ಆನಂದ್‌’ ಚಿತ್ರದಲ್ಲಿ ನಟಿಸುತ್ತಿದ್ದು, ಆ ಚಿತ್ರವನ್ನು ಆಗಸ್ಟ 9 ರಂದು ತೆರೆಕಾಣಿಸುವ ಉದ್ದೇಶ ಚಿತ್ರತಂಡಕ್ಕಿದೆಯಂತೆ. ಈ ನಡುವೆಯೇ ಸುದೀಪ್‌ ಅವರ “ಪೈಲ್ವಾನ್‌’ ಚಿತ್ರ ಕೂಡಾ ಆಗಸ್ಟ್‌ 09 ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ನಿರ್ದೇಶಕ ಕೃಷ್ಣ, “ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಮೂಲಕ ಮತ್ತೂಮ್ಮೆ ಎರಡು ಸ್ಟಾರ್‌ ಸಿನಿಮಾಗಳು ಮುಖಾಮುಖೀಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಈ ನಡುವೆಯೇ ಮುರಳಿ ನಟಿಸಿರುವ “ಭರಾಟೆ’ ಕೂಡಾ ಆಗಸ್ಟ್‌ನಲ್ಲಿ ತೆರೆಕಾಣಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.