ಕಿರುತೆರೆಯಲ್ಲೂ ಭಗವಾನ್‌ ಎಂಟ್ರಿ

ಮೊದಲ ಸಲ ಅಪರಂಜಿ ಧಾರಾವಾಹಿಯಲ್ಲಿ ನಟನೆ

Team Udayavani, Apr 14, 2019, 3:00 AM IST

Bhagavan

ಕಳೆದ ವರ್ಷವಷ್ಟೇ “ಆಡುವ ಗೊಂಬೆ’ ಚಿತ್ರವನ್ನು ನಿರ್ದೇಶಿಸಿ ಅಚ್ಚರಿ ಮೂಡಿಸಿದ್ದ ಹಿರಿಯ ನಿರ್ದೇಶಕ ಭಗವಾನ್‌, ಆ ಬಳಿಕ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಹಾಗೆ ಕೇಳಿದವರಿಗೆ ಅಚ್ಚರಿ ಎಂಬಂತಹ ವಿಚಾರ ಇಲ್ಲಿದೆ.

ಹೌದು, ಭಗವಾನ್‌ ಅವರಿಗೀಗ ವಯಸ್ಸು 85. ಇಷ್ಟಾದರೂ, ವಯಸ್ಸಿಗೆ ಮುಖ ತಿರುಗಿಸಿ, ಪ್ರಪ್ರಥಮ ಬಾರಿಗೆ ಕಿರುತೆರೆಯಲ್ಲಿ ನಟಿಸುತ್ತಿದ್ದಾರೆ ಎಂಬುದೇ ಈ ಹೊತ್ತಿನ ವಿಶೇಷ. ಕಲರ್ಸ್‌ ಸೂಪರ್‌ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಪರಂಜಿ’ ಧಾರಾವಾಹಿಯಲ್ಲಿ ಮನೆಯ ಹಿರಿಯರ ಪಾತ್ರದಲ್ಲಿ ಭಗವಾನ್‌ ಕಾಣಿಸಿಕೊಳ್ಳುತ್ತಿದ್ದಾರೆ.

ಈಗಾಗಲೇ 40ಕ್ಕೂ ಹೆಚ್ಚು ಕಂತುಗಳು ಪ್ರಸಾರವಾಗಿವೆ. ಈ ಕುರಿತು ಹೇಳಿಕೊಳ್ಳುವ ಭಗವಾನ್‌, “ನಾನು ಮೊದಲಿಂದಲು ಸುಮ್ಮನೆ ಕೂರುವವನಲ್ಲ. ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ನಟಿಸುವ ಅವಕಾಶ ಬಂತು. ಈ ಪಾತ್ರಕ್ಕೆ ನಾನೇ ಬೇಕು ಅಂದರು. ಹಾಗಾಗಿ, ನಟನೆ ಮಾಡುತ್ತಿದ್ದೇನೆ. ಈ ವಯಸ್ಸಲ್ಲಿ ಬ್ಯುಸಿಯಾಗಿರುವುದು ಒಂಥರಾ ಖುಷಿ, ಆರೋಗ್ಯಕ್ಕೂ ಒಳ್ಳೆಯದು’ ಎನ್ನುತ್ತಾರೆ ಭಗವಾನ್‌.

ಭಗವಾನ್‌ ಅವರಿಗೆ ನಟನೆ ಹೊಸದೇನಲ್ಲ. ಹಾಗೆ ನೋಡಿದರೆ ಇವರು ಚಿತ್ರರಂಗಕ್ಕೆ ಬಂದದ್ದು ಹೀರೋ ಆಗಿ. 1954 ರಲ್ಲಿ ಬಂದ “ಭಾಗ್ಯೋದಯ’ ಚಿತ್ರದಲ್ಲಿ ಎರಡನೇ ಹೀರೋ ಆಗಿದ್ದವರು. ಇನ್ನು 1958 ರಲ್ಲಿ ಬಂದ “ಮಂಗಳಸೂತ್ರ’ ಚಿತ್ರದಲ್ಲೂ ಪೂರ್ಣ ಪ್ರಮಾಣದ ನಾಯಕ ನಟರಾಗಿದ್ದರು. ಆಮೇಲೆ ಅವಕಾಶಕ್ಕಿಂತ ಮುಖ್ಯವಾಗಿ ನಿರ್ದೇಶಕರಿಗೆ ಹೆಚ್ಚಿನ ಸಂಭಾವನೆ ಸಿಗುತ್ತದೆ ಎಂಬ ಕಾರಣಕ್ಕೆ ಅವರು ನಿರ್ದೇಶನದತ್ತ ಮುಖ ಮಾಡಿದ್ದರು.

ಭಗವಾನ್‌ ಅವರಲ್ಲಿ ಇನ್ನೊಂದು ಅಚ್ಚರಿಯೂ ಅಡಗಿದೆ. ಕನ್ನಡ ಚಿತ್ರರಂಗದಲ್ಲಿ ಮೂರು ತಲೆಮಾರಿನ ನಟರ ಜೊತೆ ಭಗವಾನ್‌ ನಟಿಸಿದ್ದಾರೆ. ರಾಜ್‌ಕುಮಾರ್‌, ಅವರ ಮಕ್ಕಳಾದ ಶಿವಣ್ಣ, ರಾಘಣ್ಣ, ಅವರ ಮಕ್ಕಳ ಜೊತೆಯಲ್ಲೂ ನಟಿಸಿದ್ದಾರೆ. ಈಗ ಪುನೀತ್‌ ಅವರ “ಯುವರತ್ನ’ ಚಿತ್ರದಲ್ಲಿ ಜ್ಯೋತಿಷಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗೆ ಒಂದೇ ಕುಟುಂಬದ, ಮೂರು ತಲೆಮಾರು ನಟರೊಂದಿಗೆ ನಟಿಸಿರುವ ಇವರು ಈಗ ಕಿರುತೆರೆ ಕಡೆ ಮುಖ ಮಾಡಿರುವುದು ವಿಶೇಷ.

“ಮೂರು ತಲೆ ಮಾರಿನಿಂದ ನಟಿಸುತ್ತಿರುವವರು ಸಿಕ್ತಾರೆ. ಆದರೆ, ಒಂದೇ ಕುಟುಂಬದಲ್ಲಿ ಮೂರು ಜನರೇಷನ್‌ ಜೊತೆ ಕೊಂಡಿಯಾಗಿ ನಟಿಸಿದ ಹೆಮ್ಮೆ ನನಗಿದೆ. ರಾಜ್‌ಕಪೂರ್‌ ಕೂಡ ಹೀಗೆ ನಟಿಸಿಲ್ಲ. ಈಗ ಕಿರುತೆರೆಯಲ್ಲೂ ನಟನೆ ಮುಂದುವರಿಸುತ್ತಾ ಕಲೆಯನ್ನು ಎಂಜಾಯ್‌ ಮಾಡುತ್ತಿದ್ದೇನೆ ‘ ಎಂಬ ಖುಷಿ ಭಗವಾನ್‌ ಅವರದು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.