![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 1, 2023, 3:46 PM IST
ಇಲ್ಲಿಯವರೆಗೆ ಗ್ಲಾಮರಸ್ ಮತ್ತು ಹೋಮ್ಲಿ ಎರಡೂ ಥರದ ಪಾತ್ರಗಳಲ್ಲಿ ಮಿಂಚಿದ್ದ ನಟಿ ಭಾವನಾ ರಾವ್, ಈ ಬಾರಿ ಖಡಕ್ ಪೊಲೀಸ್ ಆಫೀಸರ್ ಗೆಟಪ್ನಲ್ಲಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಸದ್ಯ ಭಾವನಾ ರಾವ್ ಅಭಿನಯದ “ಗ್ರೇ ಗೇಮ್ಸ್’ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಈ ಸಿನಿಮಾದಲ್ಲಿ ಭಾವನಾ ರಫ್ ಆ್ಯಂಡ್ ಟಫ್ ಆಗಿರುವಂಥ ಸೈಬರ್ ಕ್ರೈಂ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗಷ್ಟೇ “ಗ್ರೇ ಗೇಮ್ಸ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿ ಭಾವನಾ ಪಾತ್ರ ಕೂಡ ಗಮನ ಸೆಳೆಯುತ್ತಿದೆ. ಇನ್ನು ತಮ್ಮ ಹೊಸ ಪಾತ್ರದ ಬಗ್ಗೆ ಮಾತನಾಡುವ ಭಾವನಾ ರಾವ್, “ಇಲ್ಲಿಯವರೆಗೆ ನಾನು ಮಾಡಿದ ಪಾತ್ರಗಳಿಗಿಂತ ಸಂಪೂರ್ಣ ವಿಭಿನ್ನವಾದ ಪಾತ್ರ “ಗ್ರೇ ಗೇಮ್ಸ್’ ಸಿನಿಮಾದಲ್ಲಿದೆ. ಮೊದಲ ಬಾರಿಗೆ ಈ ಸಿನಿಮಾದಲ್ಲಿ ಸೈಬರ್ ಕ್ರೈಂ ಪೊಲೀಸ್ ಅμàಸರ್ ಪಾತ್ರದಲ್ಲಿ
ಕಾಣಿಸಿಕೊಂಡಿದ್ದೇನೆ. ಒಂದಷ್ಟು ಆ್ಯಕ್ಷನ್ಸ್ ಕೂಡ ಸಿನಿಮಾದಲ್ಲಿದೆ. ಪವರ್ಫುಲ್ ಮಹಿಳೆಯೊಬ್ಬಳು ಹೇಗಿರುತ್ತಾಳೆ ಎಂಬುದನ್ನು ನನ್ನ ಪಾತ್ರ ಪ್ರತಿನಿಧಿಸುತ್ತದೆ. ಆನ್ ಲೈನ್ ಗೇಮಿಂಗ್ ಮತ್ತು ಅದರ ಹಿಂದಿನ ಕ್ರೈಂ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ’ ಎಂದು ತಮ್ಮ ಪಾತ್ರ ಮತ್ತು ಕಥೆಯ ವಿವರಣೆ ಕೊಡುತ್ತಾರೆ.
ಇನ್ನು “ಗ್ರೇ ಗೇಮ್ಸ್’ ಸಿನಿಮಾದಲ್ಲಿ ಭಾವನಾ ರಾವ್ ಮತ್ತು ವಿಜಯ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಉಳಿದಂತೆ ಜೈ, ಶ್ರುತಿ ಪ್ರಕಾಶ್, ಅಪರ್ಣಾ, ರವಿ ಭಟ್ ಮತ್ತು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಗಂಗಾಧರ ಸಾಲಿಮಠ್ ನಿರ್ದೇಶನದಲ್ಲಿ ಮೂಡಿಬಂದಿರುವ “ಗ್ರೇ ಗೇಮ್ಸ್’ ಸಿನಿಮಾಕ್ಕೆ ವರುಣ ಡಿ. ಕೆ ಛಾಯಾಗ್ರಹಣವಿದೆ. ಆನಂದ ಹೆಚ್. ಮುಗದ್ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಒಟ್ಟಾರೆ ಹೊಸ ಗೆಟಪ್ನಲ್ಲಿ ಭಾವನಾ ರಾವ್ ತೆರೆಮೇಲೆ ಹೇಗೆ ಮಿಂಚಲಿದ್ದಾರೆ ಎಂಬುದು “ಗ್ರೇ ಗೇಮ್ಸ್’ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.