![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 29, 2023, 4:54 PM IST
ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿ ಶುಕ್ರವಾರ ಬೆಂಗಳೂರು ಸೇರಿ ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಬಂದ್ ಆಚರಿಸಿ ಹೋರಾಟ ತೀವ್ರ ಗೊಂಡಿರುವ ವೇಳೆ ‘ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ ?’ ಎಂದು ನಟ, ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಟ್ವೀಟ್ ಮಾಡಿ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
‘ಕಾವೇರಿ ಮತ್ತು ನಂಬಿಕೆ …..ಹಲವು ವರುಷಗಳ ಅನುಭವವಿರುವ ನಾವೇ ಆಯ್ಕೆ ಮಾಡಿರುವ ನಮ್ಮ ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ ? ನಾಳೆ ನೀರಿನ ಸಮಸ್ಯೆಯಾದರೆ ನಮ್ಮ ಜನಪ್ರತಿನಿಧಿಗಳೇ ಅದನ್ನು ಪರಿಹರಿಸಬೇಕಲ್ಲವೇ ? ವರ್ಷಗಳಿಂದ ಅಂಕಿ ಅಂಶಗಳನ್ನು ನೀಡಿ ವಾದಿಸುತ್ತಿರುವ ಕಾನೂನು ತಜ್ಞರಿಗಿಂತ ನಮಗೆ ತಿಳುವಳಿಕೆ ಇದೆಯೇ ? ಆತಂಕ ಏಕೆ ?” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಹೋರಾಟಕ್ಕೆ ಚಿತ್ರರಂಗ ಬೆಂಬಲ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ ಬೃಹತ್ ವೇದಿಕೆಯಲ್ಲಿ ಚಿತ್ರರಂಗದ ಹಿರಿಯ ಕಲಾವಿದರು ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಉಪೇಂದ್ರ ಅವರೂ ಹೋರಾಟದಲ್ಲಿ ಭಾಗಿಯಾದರು. ಡಾ. ಶಿವರಾಜ್ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್ , ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ, ಶ್ರೀನಾಥ್, ಹಂಸಲೇಖ, ದುನಿಯಾ ವಿಜಯ್ ,ಧ್ರುವ ಸರ್ಜಾ, ಸುಂದರ್ ರಾಜ್,ಪ್ರಮೀಳಾ ಜೋಷಾಯ್, ಶ್ರೀನಿವಾಸ ಮೂರ್ತಿ, ಅನು ಪ್ರಭಾಕರ್,ಗಿರಿಜಾ ಲೋಕೇಶ್, ಅನುಶ್ರೀ ಪೂಜಾ ಗಾಂಧಿ, ಚಿಕ್ಕಣ್ಣ, ರಘು ಮುಖರ್ಜಿ, ತಬಲ ನಾಣಿ, ಅನಿರುದ್ಧ್ ಜತ್ಕರ್ ಸೇರಿದಂತೆ ಹಲವರು ಹೋರಾಟದಲ್ಲಿ ಭಾಗಿಯಾಗಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.