‘ಚಾಂಪಿಯನ್‌’ ಓಟ ಶುರು; ಹೀರೋ ಬರ್ತ್‌ಡೇಗೆ ಇಂಟ್ರೋಡಕ್ಷನ್‌ ಸಾಂಗ್


Team Udayavani, Jun 11, 2022, 1:05 PM IST

champions

ಸದ್ಯ ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ಗಳ ಜೊತೆಗೆ ಹೊಸಬರ ಸಿನಿಮಾಗಳು ಕೂಡಾ ಸದ್ದು ಮಾಡುತ್ತಿವೆ. ಕೆಲವು ಸಿನಿಮಾಗಳು ಬಿಡುಗಡೆಯಾದ ನಂತರ ಗಮನ ಸೆಳೆದರೆ, ಇನ್ನು ಕೆಲವು ಸಿನಿಮಾಗಳು ಬಿಡುಗಡೆಗೆ ಮುನ್ನವೇ ಪ್ರೇಕ್ಷಕನ ಕುತೂಹಲಕ್ಕೆ ಕಾರಣವಾಗುತ್ತವೆ. ಈಗ ಆ ಸಾಲಿಗೆ ಸೇರುವ ಸಿನಿಮಾ “ಚಾಂಪಿಯನ್‌’.

ಹೊಸಬರ ತಂಡ ಸೇರಿಕೊಂಡು ಮಾಡಿರುವ ಈ ಸಿನಿಮಾ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌, ಹಾಡು ಹಿಟ್‌ ಆಗಿದ್ದು, ಈಗ ಚಿತ್ರತಂಡ ಮತ್ತೂಂದು ಹಾಡು ಬಿಡುಗಡೆ ಮಾಡಲು ಮುಂದಾಗಿದೆ. ಅದಕ್ಕೆ ಕಾರಣ ನಾಯಕ ನಟನ ಬರ್ತ್‌ಡೇ.

ಹೌದು, ಈ ಚಿತ್ರದಲ್ಲಿ ಸಚಿನ್‌ ಧನ್‌ಪಾಲ್‌ ನಾಯಕರಾಗಿ ನಟಿಸಿದ್ದು, ಜೂ.12 ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಹೀರೋ ಇಂಟ್ರೊಡಕ್ಷನ್‌ ಹಾಡನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಅಂದಹಾಗೆ, ಇದು ಇಂದಿನ ಯುವಕರಿಗೆ ಸ್ಫೂರ್ತಿ ನೀಡುವ ಹಾಡಾಗಿದ್ದು, ಎಲ್ಲರಿಗೂ ಇಷ್ಟವಾಗುವ ವಿಶ್ವಾಸವಿದೆ

ಅಂದಹಾಗೆ, ನಾಯಕ ಸಚಿನ್‌ ಸೇನೆ ಹಿನ್ನೆಲೆ ಇರುವ ಕುಟುಂಬದಿಂದ ಬಂದವರು. ಸೇನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳವು ಆಸೆ ಈಡೇರದಿದ್ದಾಗ, ಬೆಂಗಳೂರಿಗೆ ಬಂದು ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಸ್ಥರಾಗಿದ್ದರು. ಜೊತೆಯಲ್ಲಿ ಚಿತ್ರರಂಗದ ನಂಟು ಬೆಸೆದ ಅವರು 2019 ರಲ್ಲಿ ನಟರಾದರು. ನಟನಾಗುವ ಮೊದಲು ಜಬರ್ದಸ್ತ್ ತಯಾರಿ ನಡೆಸಿದ್ದ ಸಚಿನ್‌, ನಿರ್ದೇಶಕರ ಒಂದು ಮಾತಿಗೆ 95 ಕೆಜಿಯಿಂದ 73 ಕೆಜಿಗೆ ತೂಕ ಇಳಿಸಿದ್ದಾರೆ. ಬರೋಬ್ಬರಿ 22 ಕೆಜಿ ತೂಕ ಇಳಿಸುವ ಮೂಲಕ, ಚಿತ್ರದೆಡೆಗೆ ತಮಗಿರುವ ನಿಷ್ಠೆಯನ್ನು ಸಾಬೀತುಪಡಿಸಿದ್ದರು.

“ಚಾಂಪಿಯನ್‌’ ಕ್ರೀಡಾ ಕಥೆಯುಳ್ಳ ಚಿತ್ರವಾಗಿದ್ದು, ಓರ್ವ ಹಳ್ಳಿಯುವಕ ಅಂತಾರಾಷ್ಟ್ರೀಯ ಕ್ರೀಡಾ ಪಟುವಾಗುವ ಕಠಿಣ ಹಾದಿಯನ್ನು ಚಿತ್ರಿಸಲಾಗಿದೆ. ಚಿತ್ರದಲ್ಲಿ ಒಂದು ಒಳ್ಳೆಯ ಸಂದೇಶವಿದ್ದು ಯುವಕರಿಗೆ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ಏನನ್ನಾದರು ಸಾಧಿಸಲು ಇದು ಸ್ಫೂರ್ತಿಯಾಗಲಿದೆ ಎಂಬುದು ಚಿತ್ರತಂಡದ ಮಾತು.

ಇದನ್ನೂ ಓದಿ:ಕೃಷ್ಣನ ‘ದಿಲ್ ಪಸಂದ್’; ಜೂ.12ಕ್ಕೆ ಚಿತ್ರದ ಫ‌ಸ್ಟ್‌ ಗ್ಲಿಂಪ್ಸ್

“ಚಾಂಪಿಯನ್‌’ ಒಂದು ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಚಿತ್ರವಾಗಿದೆ. ಚಿತ್ರದಲ್ಲಿ ರೊಮ್ಯಾನ್ಸ್‌, ಫ್ಯಾಮಿಲಿ ಸೆಂಟಿಮೆಂಟ್‌, ಹಾಗೂ ಬರಪೋರ್‌ ಕಾಮಿಡಿ ದೃಶ್ಯಗಳು ಇದ್ದು, ಜನಕ್ಕೆ ಇಷ್ಟವಾಗುವುದರಲ್ಲಿ ಎರಡು ಮಾತಿಲ್ಲ ಎಂಬುದು ಚಿತ್ರತಂಡದ ವಿಶ್ವಾಸ.

ಶಿವಾನಂದ ಎಸ್‌ ನೀಲಣ್ಣನವರ್‌ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶಾಹುರಾಜ್‌ ಶಿಂಧೆ ನಿರ್ದೇಶನ, ಬಿ ಅಜನೀಶ್‌ ಲೋಕನಾಥ್‌ ಸಂಗೀತ, ನಾಗಾರ್ಜುನ್‌ ಶರ್ಮಾ, ಶಿವು ಬೆರಗಿ, ಪ್ರೇಮ ಅಭಿಮಾನ್‌ ಸಾಹಿತ್ಯ, ವೆಂಕಟೇಶ್‌ ಸಂಕಲನ ಚಿತ್ರಕ್ಕಿದೆ.

ನಾಯಕನಾಗಿ ಸಚಿನ್‌ ಧನ್‌ಪಾಲ್‌, ನಾಯಕಿ ಅದಿತಿ ಪ್ರಭುದೇವಾ ಅಭಿನಯಿಸಿದ್ದು, ದೇವರಾಜ್‌, ರಂಗಾಯಣ ರಘು, ಚಿಕ್ಕಣ್ಣ, ಗಿರೀಶ್‌, ಆದಿ ಲೊಕೇಶ್‌, ಶೋಭ್‌ರಾಜ್‌, ಅವಿನಾಶ್‌, ಪ್ರದೀಪ್‌ ರಾವತ್‌ ಎಂಬ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.