ಭರತ-ಬಾಹುಬಲಿಯಲ್ಲಿ ಚರಣ್‌ರಾಜ್‌ ಪುತ್ರ

ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ನಟನೆ

Team Udayavani, Jan 12, 2020, 7:00 AM IST

Sri-Bharatha-Baahubali

ನಟ ಚರಣ್‌ ರಾಜ್‌ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಟಿಸಿ, ಮೆಚ್ಚುಗೆ ಪಡೆದಿದ್ದಾರೆ. ಈಗ ಅವರ ಪುತ್ರ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದಾರೆ. ಅದು “ಶ್ರೀ ಭರತ ಬಾಹುಬಲಿ’ ಚಿತ್ರದ ಮೂಲಕ. ಹೌದು, ಮಂಜು ಮಾಂಡವ್ಯ ನಿರ್ದೇಶನದ “ಶ್ರೀ ಭರತ ಬಾಹುಬಲಿ’ ಚಿತ್ರದಲ್ಲಿ ಚರಣ್‌ ರಾಜ್‌ ಪುತ್ರ ತೇಜ್‌ ನಟಿಸಿದ್ದಾರೆ. ಹಾಗಂತ ಹೀರೋ ಆಗಿಯಲ್ಲ, ಬದಲಾಗಿ ಇಡೀ ಸಿನಿಮಾದಲ್ಲಿ ಹೈಲೈಟ್‌ ಆಗುವಂತಹ ಪಾತ್ರವೊಂದರಲ್ಲಿ.

ಅದು ಬಾಹುಬಲಿ ಪಾತ್ರ. ಚಿತ್ರದಲ್ಲಿ ಬರುವ ಬಾಹುಬಲಿ ಎಂಬ ಪಾತ್ರಕ್ಕೆ ಕಟ್ಟುಮಸ್ತಾದ ನಟನೊಬ್ಬನನ್ನು ಹುಡುಕುತ್ತಿದ್ದ ಮಂಜು ಮಾಂಡವ್ಯ ಅವರಿಗೆ ತೇಜ್‌ ಕಣ್ಣಿಗೆ ಬಿದ್ದಿದ್ದಾರೆ. ನೇರವಾಗಿ ಚರಣ್‌ ರಾಜ್‌ ಅವರನ್ನು ಕೇಳಿದ್ದಾರೆ. ಚರಣ್‌ ರಾಜ್‌ ಕೂಡಾ ಖುಷಿಯಿಂದ ಮಗನನ್ನು ಸೆಟ್‌ಗೆ ಕಳುಹಿಸಿದ್ದಾರೆ. ತೇಜ್‌ ಈಗಾಗಲೇ ತಮಿಳಿನಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅನೇಕ ದಿನಗಳಿಂದ ಕನ್ನಡದಲ್ಲಿ ಲಾಂಚ್‌ ಆಗುತ್ತಿದ್ದಾರೆಂಬ ಸುದ್ದಿ ಇತ್ತಾದರೂ ಅದು ಸಾಧ್ಯವಾಗಿರಲಿಲ್ಲ.

ಈಗ “ಶ್ರೀ ಭರತ ಬಾಹುಬಲಿ’ ಸಿನಿಮಾ ಮೂಲಕ ಲಾಂಚ್‌ ಆಗಿದ್ದಾರೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಮಂಜು ಮಾಂಡವ್ಯ, “ಚಿತ್ರದಲ್ಲಿ ತೇಜ್‌ ಅವರ ಪಾತ್ರ ಕೆಲವೇ ನಿಮಿಷ ಬಂದರೂ ತುಂಬಾ ಪವರ್‌ಫ‌ುಲ್‌ ಆಗಿದೆ. ಆ ಪಾತ್ರಕ್ಕೆ ಸಾಕಷ್ಟು ಸಿದ್ಧತೆ ಬೇಕಿತ್ತು. ಅದನ್ನು ತೇಜ್‌ ಮಾಡಿದ್ದಾರೆ. ಸಿನಿಮಾ ನೋಡಿದ ಮೇಲೆ ಅವರ ಪಾತ್ರದ ಮಹತ್ವ ಗೊತ್ತಾಗುತ್ತದೆ’ ಎನ್ನುತ್ತಾರೆ. ಚರಣ್‌ ರಾಜ್‌ ಕೂಡಾ ತಮ್ಮ ಮಗ ಕನ್ನಡದಲ್ಲಿ ಲಾಂಚ್‌ ಆಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ತೇಜ್‌, ತಮ್ಮ ತಂದೆಗೆ ನೀಡಿದ ಪ್ರೋತ್ಸಾಹವನ್ನೇ ತಮಗೆ ನೀಡುವಂತೆ ಕೇಳಿಕೊಂಡರು. ಅಂದಹಾಗೆ, ಈ ಚಿತ್ರ ಜನವರಿ 17 ರಂದು ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಮಂಜು ಮಾಂಡವ್ಯ, ಚಿಕ್ಕಣ್ಣ, ಸಾರಾ ಸೇರಿದಂತೆ ಅನೇಕರು ನಟಿಸಿದ್ದಾರೆ. ಐಶ್ವರ್ಯಾ ಫಿಲಂಸ್‌ನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ಪ್ರಮೋಶನ್‌ಗೆ ಚಿತ್ರತಂಡ ಒಂದು ಕೋಟಿ ರೂಪಾಯಿ ಮೀಸಲಿರಿಸಿದೆ. ಸಿನಿಮಾ ಟಿಕೆಟ್‌ ಖರೀದಿಸುವವರಿಗೆ ಚಿತ್ರತಂಡ ಒಂದು ಕೂಪನ್‌ ನೀಡಲಿದೆ.

ಆ ಕೂಪನ್‌ ಅನ್ನು ಆ ನಂತರ ಲಕ್ಕಿಡ್ರಾ ಮೂಲಕ ತೆಗೆಯಲಾಗುತ್ತದೆ. ಅದರಲ್ಲಿ ಆಯ್ಕೆಯಾದವರಿಗೆ ಒಂದು ಕೋಟಿ ರೂಪಾಯಿಯ ಬಹುಮಾನ ನೀಡಲಾಗುತ್ತದೆ. ಈ ಬಹುಮಾನ ಕಾರು ಹಾಗೂ ಚಿನ್ನವನ್ನು ಒಳಗೊಂಡಿದೆ. ಅಂದಹಾಗೆ, ಈ ಆಫ‌ರ್‌ ಸಿನಿಮಾ ಬಿಡುಗಡೆಯಾಗಿ ಕೇವಲ ಎರಡು ವಾರಕ್ಕಷ್ಟೇ ಸೀಮಿತ. ಈಗಾಗಲೇ ಚಿತ್ರತಂಡ 80 ಲಕ್ಷ ಕೂಪನ್‌ಗಳನ್ನು ಮುದ್ರಿಸಿದೆ. ಚಿತ್ರಮಂದಿರಗಳ ಟಿಕೆಟ್‌ ಜೊತೆಗೆ ಇದು ದೊರೆಯಲಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.