ಚೇಜ್ ಗಾಗಿ ಕಾದಿದ್ದವರಿಗೆ ಸಿಕ್ತು ಸಾರ್ಥಕವೆನಿಸುವ ಭರ್ಜರಿ ಟ್ರೈಲರ್

ಇದು ಚೇಜ್ ಮೇಲಿನ ನಿರೀಕ್ಷೆಗಳ ದುಪ್ಪಾಟ್ಟಾಗಿಸುವ ಟ್ರೈಲರ್

Team Udayavani, Jul 12, 2022, 7:31 PM IST

ಚೇಸ್ ಗಾಗಿ ಕಾದಿದ್ದವರಿಗೆ ಸಿಕ್ತು ಸಾರ್ಥಕವೆನಿಸುವ ಭರ್ಜರಿ ಟ್ರೈಲರ್

ಚೇಜ್.. ಸ್ಯಾಂಡಲ್ ವುಡ್ ನಲ್ಲಿ ಸಖತ್ ಟಾಕ್ ಕ್ರಿಯೇಟ್ ಮಾಡಿದ್ದ ಚಿತ್ರ. ಚಿತ್ರ ಘೋಷಣೆಯಾದಾಗಿನಿಂದ ಚೇಜ್ ನಲ್ಲಿ ಏನೋ ಸಖತ್ ಕಂಟೆಂಟ್ ಇದೆ ಅನ್ನೋ ಖಾತರಿಯನ್ನ ಚೇಜ್ ಮಾಡುವಂತೆ ಮಾಡಿದ್ದ ಚಿತ್ರ. ವಿಲೋಕ್ ಶೆಟ್ಟಿ ನಿರ್ದೇಶನದ ಚೇಜ್ ಟೈಟಲ್, ಪೋಸ್ಟರ್, ಟೀಸರ್,ಹಾಡು ಗಳಿಂದಲೇ ಭರಪೂರ ನಿರೀಕ್ಷೆಯನ್ನ ಹುಟ್ಟಿಸಿತ್ತು. ಈಗ ಇನ್ನೇನು ಇದೇ 15 ಕ್ಕೆ ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ ಅನ್ನೋ ಸಮಾಧಾನ ಚಿತ್ರ ಪ್ರೇಮಿಗಳಲ್ಲಿ ಮೂಡಿತ್ತು. ಈ ಸಮಯದಲ್ಲೇ ಚಿತ್ರದ ಟ್ರೈಲರ್ ರಿಲೀಸ್ ಮಾಡಿರುವ ತಂಡ ಚೇಜ್ ಚಿತ್ರದ ಹೂರಣದ ಮೇಲೆ ಬೆಳಕು ಹಾಯಿಸಿ ಚಿತ್ರ ನೋಡುವ ಕುತೂಹಲಕ್ಕೆ ಕಿಚ್ಚು ಹೊತ್ತಿಸಿದೆ.

ಹೌದು ರಿಲೀಸ್ ಆದ ಟ್ರೈಲರ್ ಒಮ್ಮೆ ನೋಡಿದ್ರೆ, ಅಯ್ಯೋ ಪೂರ್ತಿ ಸಿನೆಮಾ ನೋಡಲು ಇನ್ನು ಎರಡ್ಮೂರು ದಿನ ಕಾಯಬೇಕಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ. ಕ್ರೈಂ, ಸಸ್ಸೇನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚೇಜ್ ನ ಟ್ರೈಲರ್ ನಲ್ಲಿ ಮರ್ಡರ್ ಮಿಸ್ಟ್ರಿ ಕಥೆಯ ಎಳೆ ಮೈ ಜುಮ್ಮೆನಿಸುವಂತಿದೆ. ಮಿಸ್ಸಿಂಗ್, ಪೊಲೀಸ್, ಕಂಪ್ಲೇಂಟ್, ಕೊಲೆ, ಪ್ರೀತಿ-ಪ್ರೇಮ, ಪಾರ್ಟಿ ಇನ್ಯಾವುದೋ ಜಾಲ ಹೀಗೆ ಪಾತ್ರಗಳು ತೆರೆದುಕೊಂಡು ಚುರುಕಿನ ಸಂಭಾಷಣೆಯೊಂದಿಗೆ ಗಮನಸೆಳೆಯುತ್ತಿದೆ.  ಟ್ರೈಲರ್ ನೋಡಿದ್ಮೇಲಂತೂ ಚಿತ್ರ ನೋಡುವ ಕೌತುಕ ಹೆಚ್ಚೋದು ಸತ್ಯ. ಯಾಕಂದ್ರೆ ಕೇವಲ ಒಂದು ಟ್ರೈಲರ್ ನಲ್ಲೇ ಪ್ರೇಕ್ಷಕರನ್ನ ತುದಿ ಸೀಟಿಗೆ ತಂದು ಕೂರಿಸುವಂತಿರುವಾಗ ಇನ್ನೂ ಸಿನೆಮಾ ಹೇಗಿರಬೇಡ ಎಂಬ ಚರ್ಚೆಗಳು ಶುರುವಾಗಿವೆ. ಸದ್ಯ ಎಲ್ಲರಿಗೂ ಟ್ರೈಲರ್ ಇಷ್ಟವಾಗ್ತಿದ್ದು, ರಿಲೀಸ್ ಆದ ಕೆಲವೇ ಸಮಯದಲ್ಲಿ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ತಿದೆ. ಈ ಮೂಲಕ ಚಿತ್ರ ರಿಲೀಸ್ ಗೂ ಮೊದಲೇ ನಿರ್ದೇಶಕ ವಿಲೋಕ್ ಶೆಟ್ಟಿ ಸಿನೆಮಾ ಹಾಗು ತಂಡಕ್ಕೆ ಮೊದಲ ಜಯ ಸಿಕ್ಕಂತಾಗಿದೆ.

ತಾರಾಗಣದಲ್ಲಿರುವ ರಾಧಿಕಾ ನಾರಾಯಣ್, ಅವಿನಾಶ್ ನರಸಿಂಹರಾಜು, ರಾಜೇಶ್ ನಟರಂಗ, ಶೀತಲ್ ಶೆಟ್ಟಿ, ಸುಶಾಂತ್ ಪೂಜಾರಿ ಮುಂತಾದವರ ಪಾತ್ರಗಳೂ ಟ್ರೈಲರ್ ನಲ್ಲಿ ಕುತೂಹಲ ಹುಟ್ಟಿಸಿವೆ. ಸಿಂಪ್ಲಿಫನ್ ಮೀಡಿಯಾ ನೆಟ್ವರ್ಕ್ ಬ್ಯಾನರ್ ನಡಿ ಮನೋಹರ್ ಸುವರ್ಣ, ಪ್ರದೀಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಬಂಡವಾಳ ಹೂಡಿದ್ದು, ಶಿವ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ. ಕಾರ್ತಿಕ್ ಆಚಾರ್ಯ ಸಂಗೀತ ಸಾರಥ್ಯ, ಶ್ರೀ ಕ್ರೇಜಿ ಮೈಂಡ್ಸ್ ಸಂಕಲನ, ಅನಂತ ರಾಜ್ ಅರಸ್ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಪ್ರಮೋದ್ ಶೆಟ್ಟಿ, ಅರ್ಜುನ್ ಯೋಗೇಶ್ ರಾಜ್, ಸುಶಾಂತ್ ಪೂಜಾರಿ, ಸುಧಾ ಬೆಳವಾಡಿ, ರಾಜೇಶ್ ನಟರಂಗ, ಅರವಿಂದ್ ಬೋಳಾರ್, ರೆಹಮಾನ್ ಹಾಸನ್ ಒಳಗೊಂಡ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದ್ದು ಇದೇ ಜುಲೈ 15 ಕ್ಕೆ ತೆರೆಯ ಮೇಲೆ ಅನಾವರಣಗೊಳ್ಳಲಿದೆ.

ಈ ಚಿತ್ರವನ್ನು ಮನೋಹರ್ ಸುವರ್ಣ ನಿರ್ಮಾಣ ಮಾಡಿದ್ದಾರೆ. ಪ್ರಶಾಂತ್ ಶೆಟ್ಟಿ ಮತ್ತು ಪ್ರದೀಪ್ ಶೆಟ್ಟಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಶಿವ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಅನಂತ್ ರಾಜ್ ಅರಸ್ ಛಾಯಾಗ್ರಹಣ, ಕಾರ್ತಿಕ್ ಆಚಾರ್ಯ ಹಿನ್ನೆಲೆ ಸಂಗೀತ ಮತ್ತು ಸಂಗೀತ ನಿರ್ದೇಶನ, ಶ್ರೀ ಕ್ರೇಜಿಮೈಂಡ್ಸ್ ಸಂಕಲನ, ಅವಿನಾಶ್ ಎಸ್ ದಿವಾಕರ್ ಕಲಾ ನಿರ್ದೇಶನ, ಸುನೀಲ್ ಕಟಾಬು ಉಪ ನಿರ್ದೇಶನ, ಡಿಫರೆಂಟ್ ಡ್ಯಾನಿ, ಚೇತನ್ ರಮ್ಶಿ ಡಿಸೋಜಾ ಮತ್ತು ವಿನೋದ್ ಸಾಹಸ ನಿರ್ದೇಶನ, ವಿಜಯ ರಾಣಿ ಮತ್ತು ಸುಶಾಂತ್ ಪೂಜಾರಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ರಾಧಿಕಾ ನಾರಾಯಣ್, ಅವಿನಾಶ್, ಶೀತಲ್ ಶೆಟ್ಟಿ, ಅರ್ಜುನ್ ಯೋಗಿ, ಸುಶಾಂತ್ ಪೂಜಾರಿ, ರಾಜೇಶ್ ನಟರಂಗ, ಅರವಿಂದ್ ರಾವ್, ಪ್ರಮೋದ್ ಶೆಟ್ಟಿ, ಅರವಿಂದ್ ಬೋಳಾರ್, ಶ್ವೇತಾ ಸಂಜೀವುಲು, ರೆಹಮಾನ್ ಹಾಸನ್, ವೀಣಾ ಸುಂದರ್, ಸುಧಾ ಬೆಳವಾಡಿ, ಉಷಾ ಭಂಡಾರಿ, ಸುಂದರ್, ಸತೀಶ್ ಸಿದ್ಧಾರ್ಥ ಮಾಧ್ಯಮಿಕ, ಪ್ರಿಯಾ ಶಟಮರ್ಶನ್ ಮುಂತಾದವರ ಬೃಹತ್ ತಾರಾಗಣವಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.