Kannada Cinema; ಚೇತನ್ ಮುಂಡಾಡಿ ನಿರ್ದೇಶನದ ‘ಭಾವಪೂರ್ಣ’ ಅ.27ರಂದು ತೆರೆಗೆ
Team Udayavani, Oct 11, 2023, 6:28 PM IST
ಈಗಂತೂ ಎಲ್ಲಿ ನೋಡಿದ್ರೂ ಸೆಲ್ಫಿಯ ಜಮಾನ. ಕೈಯಲ್ಲಿರುವ ಸ್ಮಾರ್ಟ್ಫೋನಿನಲ್ಲಿ ಪ್ರತಿದಿನ ಭಿನ್ನ-ವಿಭಿನ್ನಭಂಗಿಯ ಹತ್ತಾರು ಫೋಟೋಗಳನ್ನು ಬಹುತೇಕರು ಕ್ಲಿಕ್ಕಿಸಿಕೊಳ್ಳುತ್ತಲೇ ಇರುತ್ತಾರೆ. ಆದರೆ ಎರಡು-ಮೂರು ದಶಕಗಳ ಹಿಂದೆ ಫೋಟೋಗಳನ್ನು ತೆಗೆಸಿಕೊಳ್ಳುವ ಪ್ರಕ್ರಿಯೆ ಹೀಗಿರಲಿಲ್ಲ. ಎಲ್ಲೋ ಹಳ್ಳಿಯಲ್ಲಿರುವವರು ಒಂದು ಚಿಕ್ಕ ಫೋಟೋ ತೆಗೆಸಿಕೊಳ್ಳಬೇಕು ಅಂತಿದ್ದರೇ, ಸಣ್ಣ-ಪುಟ್ಟ ಪಟ್ಟಣಗಳಲ್ಲಿರುವ ಸ್ಟುಡಿಯೋಗಳಿಗೆ ಹೋಗಬೇಕಿತ್ತು. ಆದರೆ ಮದುವೆ ಮತ್ತಿತರ ಯಾವುದಾದರೂ ಸಮಾರಂಭಗಳಿಗೆ ಕಾಯಬೇಕಿತ್ತು. ಇಂಥದ್ದೇ 90ರ ದಶಕದ ಫೋಟೋ ಹಿಂದಿನ ಭಾವನಾತ್ಮಕ ಕಥೆಯನ್ನು ತೆರೆದಿಡುವ ಚಿತ್ರ “ಭಾವಪೂರ್ಣ’. ಈ ಚಿತ್ರ ಅ.27ಕ್ಕೆ ತೆರೆಕಾಣುತ್ತಿದೆ.
90ರ ಕಾಲಘಟ್ಟದ ಕಥೆಯನ್ನು ಇಂದಿನ ಕಾಲಘಟ್ಟದಲ್ಲಿ ಜೋಡಿಸಿ, “ಭಾವಪೂರ್ಣ’ ಸಿನಿಮಾವನ್ನು ಎಲ್ಲರೂ ನೋಡುವಂತೆ, ಎಲ್ಲರಿಗೂ ಕಾಡುವಂಥೆ ತೆರೆಮೇಲೆ
ತಂದಿದ್ದೇವೆ. ಕೆಲವು ಸಿನಿಮಾಗಳು ನೋಡಿದ ನಂತರ ಮರೆಯಾಗುತ್ತದೆ. ಆದರೆ ಕೆಲವು ಸಿನಿಮಾಗಳು ನೋಡಿದ ನಂತರವೂ ಕಾಡುತ್ತವೆ. ಅಂಥ ನೋಡುವ, ಕಾಡುವ ಸಿನಿಮಾ ನಮ್ಮದು ಎನ್ನುವುದು “ಭಾವಪೂರ್ಣ’ ಸಿನಿಮಾದ ನಿರ್ದೇಶಕ ಚೇತನ್ ಮುಂಡಾಡಿ ಮತ್ತು ಚಿತ್ರತಂಡದ ಒಕ್ಕೊರಲ ಮಾತು.
“ಜಿ.ಎಲ್ ಮೋಶನ್ ಪಿಕ್ಚರ್’ ಬ್ಯಾನರಿನಲ್ಲಿ ಪ್ರಶಾಂತ್ ಅಂಜನಪ್ಪ ನಿರ್ಮಾಣದಲ್ಲಿ ಮೂಡಿಬರುತ್ತಿರುವ “ಭಾವಪೂರ್ಣ’ ಸಿನಿಮಾಕ್ಕೆ ಚೇತನ್ ಮುಂಡಾಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಲ್ಲಿಯವರೆಗೆ ಸಿನಿಮಾ ಮತ್ತು ಕಿರುತೆರೆಯಲ್ಲಿ ನೂರಾರು ವಿಭಿನ್ನ ಪಾತ್ರಗಳಲ್ಲಿ ಮಿಂಚಿರುವ ನಟ ರಮೇಶ್ ಪಂಡಿತ್ ತಮ್ಮ ವೃತ್ತಿ ಜೀವನದಲ್ಲೇ ಮೊದಲ ಬಾರಿಗೆ “ಭಾವಪೂರ್ಣ’ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ಮಂಜುನಾಥ್ ಹೆಗಡೆ, ಶೈಲಶ್ರೀ, ಮಂಗಳಾ, ನಾಗೇಂದ್ರ ಶಾ, ಅಥರ್ವ ಪ್ರಕಾಶ್, ವಿನ್ಯಾ ರೈ, ವಿ. ಮನೋಹರ್, ಸುಜಯ್ ಶಾಸ್ತ್ರಿ, ಎಂ. ಕೆ ಮಠ, ಉಗ್ರಂ ಮಂಜು, ಶಿವಾಜಿರಾವ್ ಜಾಧವ್, ಪವನ್, ಗೋವಿಂದೇಗೌಡ (ಜಿ. ಜಿ) ಮುಂತಾದವರು “ಭಾವಪೂರ್ಣ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.