
ಕುರುಕ್ಷೇತ್ರಕ್ಕೆ ದರ್ಶನ್ ಡಬ್ಬಿಂಗ್ ಮುಕ್ತಾಯ
Team Udayavani, Jun 8, 2018, 1:38 PM IST

ದರ್ಶನ್ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ದ ಸುದ್ದಿ ಸ್ವಲ್ಪ ಕಡಿಮೆಯಾಗಿತ್ತು. ನಿರ್ಮಾಪಕ ಮುನಿರತ್ನ ಅವರು ವಿಧಾನಸಭೆ ಚುನಾವಣೆಗಳಲ್ಲಿ ಬಿಝಿ ಇದ್ದುದರಿಂದ, ಚಿತ್ರದ ಕೆಲಸಗಳು ಹೆಚ್ಚು ಸದ್ದುಗದ್ದಲವಿಲ್ಲದೆ ನಡೆಯುತ್ತಿದ್ದವು.
ಈಗ ಚುನಾವಣೆ ಮುಗಿದಿದೆ. ಹಾಗೆಯೇ ಚಿತ್ರದ ಕೆಲಸಗಳು ಸಹ ಮುಗಿಯುವ ಹಂತಕ್ಕೆ ಬಂದಿದೆ. ಅದರಲ್ಲೂ ಚಿತ್ರಕ್ಕೆ ದರ್ಶನ್ ಅವರ ಡಬ್ಬಿಂಗ್ ಬುಧವಾರ ಸಂಪೂರ್ಣವಾಗಿದೆ. ಮಿಕ್ಕಂತೆ ಒಂದಿಷ್ಟು ಕೆಲಸಗಳು ಬಾಕಿ ಇದ್ದು, ಮುಂದಿನ ಕೆಲವೇ ದಿನಗಳಲ್ಲಿ ಅದೂ ಸಹ ಮುಗಿಯಲಿದೆ.
“ಕುರುಕ್ಷೇತ್ರ’ ಚಿತ್ರವನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶಿಸುತ್ತಿದ್ದು, ಚಿತ್ರದಲ್ಲಿ ದೊಡ್ಡ ಕಲಾವಿದರ ದಂಡೇ ಇದೆ. ದರ್ಶನ್ ಜೊತೆಗೆ ಅಂಬರೀಶ್, ಅರ್ಜುನ್ ಸರ್ಜಾ, ರವಿಚಂದ್ರನ್, ರವಿಶಂಕರ್, ನಿಖೀಲ್ ಕುಮಾರ್, ರವಿಚೇತನ್, ಭಾರತಿ ವಿಷ್ಣುವರ್ಧನ್, ಶ್ರೀನಿವಾಸಮೂರ್ತಿ, ಸೋನು ಸೂದ್, ಹರಿಪ್ರಿಯಾ, ಮೇಘನಾ ರಾಜ್, ಯಶಸ್ ಸೂರ್ಯ ಸೇರಿದಂತೆ ಹಲವರು ಅಭಿನಯಿಸಿದ್ದಾರೆ.
ಚಿತ್ರಕ್ಕೆ ಅಜಯನ್ ವೆನ್ಸೆಂಟ್ ಛಾಯಾಗ್ರಹಣ ಮಾಡಿದ್ದು, ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. “ಕುರುಕ್ಷೇತ್ರ’ ಚಿತ್ರದ ಆಡಿಯೋ ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಜುಲೈನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.