![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 31, 2019, 3:04 AM IST
ಹೊಸಬರಿಗೆ ಮೊದಲಿನಿಂದಲೂ ದರ್ಶನ್ ಬೆಂಬಲ ಕೊಡುತ್ತಲೇ ಬಂದವರು. ಅದು ಆಡಿಯೋ ಬಿಡುಗಡೆ ಇರಲಿ, ಪೋಸ್ಟರ್, ಟೀಸರ್, ಟ್ರೇಲರ್ ಬಿಡುಗಡೆ ಹೀಗೆ ಸಿನಿಮಾದ ಯಾವುದೇ ಕಾರ್ಯಕ್ರಮವಿದ್ದರೂ, ದರ್ಶನ್ ಪ್ರೀತಿಯಿಂದಲೇ ಪ್ರೋತ್ಸಾಹಿಸಿಸುತ್ತಿದ್ದಾರೆ. ಈಗ “ಮೋಸ್ಟ್ ರೆಸ್ಪಾನ್ಸಿಬಲ್ ಪರ್ಸನ್’ಗೂ ಸಾಥ್ ಕೊಡುತ್ತಿದ್ದಾರೆ. ಇದು “ಎಂಆರ್ಪಿ’ ಚಿತ್ರದ ವಿಷಯ. ಹೌದು, ದರ್ಶನ್ ಅವರು ಶನಿವಾರ (ಇಂದು) ಸಂಜೆ 6 ಕ್ಕೆ ಈ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಹೊಸ ತಂಡಕ್ಕೆ ಬೆಂಬಲ ಕೊಡುತ್ತಿದ್ದಾರೆ.
ಇದೇ ಮೊದಲ ಸಲ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಾಯಕ ಹರಿ ಅಭಿನಯದ ಚಿತ್ರವನ್ನು ಬಾಹುಬಲಿ ನಿರ್ದೇಶನ ಮಾಡಿದ್ದಾರೆ. ಇನ್ನು ಎಂ.ಡಿ.ಶ್ರೀಧರ್, ಮೋಹನ್ ಹಾಗು ಛಾಯಾಗ್ರಾಹಕ ಕೃಷ್ಣಕುಮಾರ್ (ಕೆಕೆ) ನಿರ್ಮಾಣ ಮಾಡಿದ್ದಾರೆ. ಇವರೆಲ್ಲರ ಪ್ರೀತಿ, ಶ್ರದ್ಧೆಯಿಂದ ತಯಾರಾಗಿರುವ “ಎಂಆರ್ಪಿ’ ಚಿತ್ರತಂಡಕ್ಕೆ ದರ್ಶನ್ ಅವರು ಶನಿವಾರ (ಇಂದು) ಸಂಜೆ ತಮ್ಮ ಮನೆಯಲ್ಲೇ ಟೀಸರ್ ಬಿಡುಗಡೆ ಮಾಡಿ ಸಾಥ್ ಕೊಡುತ್ತಿದ್ದಾರೆ.
“ಎಂಆರ್ಪಿ’ ಅಂದರೆ, ಎಲ್ಲರಿಗೂ ಬಾರ್ ನೆನಪಾಗುತ್ತೆ. ಇಲ್ಲಿ “ಎಂಆರ್ಪಿ” ಅಂದರೆ ಮೋಸ್ಟ್ ರೆಸ್ಪಾನ್ಸಿಬಲ್ ಪರ್ಸನ್ ಎಂದರ್ಥ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ. ಅವರ ಬಾಡಿಗೆ ಅವರವರೇ ಜವಾಬ್ದಾರಿ ಆಗುತ್ತಾರೆ ವಿನಃ, ಬೇರೆ ಯಾರೂ ಆಗಲ್ಲ. ತಮ್ಮ ಬಾಡಿಯ ಜವಾಬ್ದಾರಿ ಏನೆಂಬುದು ಅವರಿಗಷ್ಟೇ ಗೊತ್ತಿರುತ್ತೆ. ಇಲ್ಲಿರುವ ಹೀರೋ ಕೂಡ ತುಂಬಾ ಜವಾಬ್ದಾರಿ ಇರುವ ವ್ಯಕ್ತಿ. ಅದು ಹೇಗೆ ಎಂಬುದನ್ನು ಕಾಮಿಡಿ ರೂಪದಲ್ಲಿ ತೋರಿಸಲಾಗಿದೆ ಎಂಬುದು ಚಿತ್ರತಂಡದ ಮಾತು.
ಚಿತ್ರಕ್ಕೆ ಹರ್ಷವರ್ಧನ್ ರಾಜ್ ಸಂಗೀತವಿದೆ. ಎಲ್.ಎಂ.ಸೂರಿ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನವಿದೆ. ಚಿತ್ರದಲ್ಲಿ ವಿಜಯ್ ಚೆಂಡೂರ್ ಸೇರಿದಂತೆ ಹಲವು ಕಲಾವಿದರಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ, ನವೆಂಬರ್ನಲ್ಲಿ “ಎಂಆರ್ಪಿ’ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆ ನಿರ್ಮಾಪಕ ಎಂ.ಡಿ.ಶ್ರೀಧರ್ ಅವರಿಗಿದೆ. ಆದರೆ, ದೊಡ್ಡ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿರುವುದರಿಂದ ಅವುಗಳ ಬಿಡುಗಡೆ ನೋಡಿಕೊಂಡು ಚಿತ್ರಮಂದಿರಕ್ಕೆ ಬರುವ ಕುರಿತು ಚರ್ಚಿಸುತ್ತಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.