Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್


Team Udayavani, Oct 27, 2024, 2:47 PM IST

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

ನಟ ದರ್ಶನ್‌ ಸದ್ಯ ಕೊಲೆ ಆರೋಪದ ಮೇಲೆ ಜೈಲಿನಲ್ಲಿದ್ದರೂ, ಹೊರಗಡೆ ಅವರ ಸಿನಿಮಾಗಳು ಭರ್ಜರಿ ಸೌಂಡ್‌ ಮಾಡುತ್ತಿವೆ. ಒಂದರ ಹಿಂದೆ ಒಂದರಂತೆ ಅವರ ಹಳೆಯ ಸಿನಿಮಾಗಳು ಮರು ಬಿಡುಗಡೆಯಾಗುತ್ತಿರುವುದು, ಅಭಿಮಾನಿಗಳಿಗೆ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದೆ. ನಿರ್ಮಾಪಕರು ಸಹ ನಾ ಮುಂದು ತಾ ಮುಂದು ಎನ್ನುವಂತೆ ಅವರ ಹಳೆ ಸಿನಿಮಾಗಳನ್ನು ಮತ್ತೆ ಪ್ರದರ್ಶಿಸಲು ತುದಿಗಾಲಲ್ಲಿ ನಿಂತಂತಾಗಿದೆ. ಸದ್ಯ ದರ್ಶನ್‌ ಜೈಲಿನಲ್ಲಿದ್ದರೂ, ಹೊರಗಡೆ ಅವರ ಅಭಿಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜೊತೆಗೆ ಅವರ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ದರ್ಶನ್‌ ಬಂಧನವಾದಾಗ “ಮೆಜೆಸ್ಟಿಕ್‌’, “ಶಾಸ್ತ್ರಿ’ ಸಿನಿಮಾ ಬಿಡುಗಡೆ ಯಾಗಿದ್ದವು. ಅದಕ್ಕೂ ಮೊದಲು “ಕರಿಯ’ ಸಿನಿಮಾ ತೆರೆ ಕಂಡಿತ್ತು. ಇತ್ತೀಚೆಗೆ “ನಮ್ಮ ಪ್ರೀತಿಯ ರಾಮು’, “ಪೊರ್ಕಿ’ ಸಿನಿಮಾ ಮತ್ತೆ ಬಿಡುಗಡೆಗೊಂಡು ತಕ್ಕಮಟ್ಟಿಗೆ ಪ್ರದರ್ಶನಗಳನ್ನು ಕಂಡಿವೆ. ಈ ಮರು ಬಿಡುಗಡೆಯ ಸಂಭ್ರಮಕ್ಕೆ ಸದ್ಯ ದರ್ಶನ್‌ ನಟಿಸಿರುವ “ನವಗ್ರಹ’ ಹಾಗೂ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾಗಳೂ ಸೇರಿಕೊಳ್ಳಲಿವೆ.

ಕೆಲ ದಿನಗಳ ಹಿಂದೆ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮೀ “ನವಗ್ರಹ’ ಸಿನಿಮಾ ಮರು ಬಿಡುಗಡೆ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾಕಷ್ಟು ವೈರಲ್‌ ಆಗಿತ್ತು. ಈಗ ಈ ಸಿನಿಮಾ ನವೆಂಬರ್‌ 8ರಂದು ಮರು ಬಿಡುಗಡೆಯಾಗುತ್ತಿದೆ. ಅದೇ ದಿನ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಸಹ ಬಿಡುಗಡೆಯಾಗುವುದಿತ್ತು. ಆದರೆ, ಒಂದೇ ದಿನ ದರ್ಶನ್‌ ಅವರ ಎರಡು ಸಿನಿಮಾಗಳು ಮರು ಬಿಡುಗಡೆಯಾಗುವುದಕ್ಕೆ ಅಭಿಮಾನಿಗಳಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆ, “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರದ ಮರು ಬಿಡುಗಡೆ ನವೆಂಬರ್‌ 22ಕ್ಕೆ ಮುಂದೂಡಲಾಗಿದೆ.  2012ರಲ್ಲಿ ನಾಗಣ್ಣ ನಿರ್ದೇಶನದಲ್ಲಿ ಮೂಡಿಬಂದಿದ್ದ ಐತಿಹಾಸಿಕ ಚಿತ್ರದಲ್ಲಿ ದರ್ಶನ್‌ ಸಂಗೊಳ್ಳಿ ರಾಯಣ್ಣನ ಪಾತ್ರದಲ್ಲಿ ಮಿಂಚಿದ್ದರು. ಚಿತ್ರ ಹಲವೆಡೆ ಶತದಿನಗಳನ್ನು ಕಂಡಿತ್ತು. ಜಯಪ್ರದಾ, ಶಶಿಕುಮಾರ್‌, ಉಮಾಶ್ರೀ ಸೇರಿದಂತೆ ದೊಡ್ಡ ತಾರಾಗಣವೇ ಚಿತ್ರದಲ್ಲಿತ್ತು.

ಇನ್ನು, ದರ್ಶನ್‌ ಅವರದ್ದೇ ತೂಗುದೀಪ ಪ್ರೊಡಕ್ಷನ್‌ನಲ್ಲಿ ದಿನಕರ್‌ ತುಗೂದೀಪ್‌ ನಿರ್ದೇಶನದ “ನವಗ್ರಹ’ ಚಿತ್ರ 2008ರಲ್ಲಿ ತೆರೆ ಕಂಡು, ಮೆಚ್ಚುಗೆ ಗಳಿಸಿತ್ತು. ಕನ್ನಡ ಚಿತ್ರರಂಗದ ಖಳನಟರ ಮಕ್ಕಳು ನವಗ್ರಹ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಇದರ ವಿಶೇಷತೆ. ಚಿತ್ರದ ಬಿಡುಗಡೆ ದಿನ ಅದರಲ್ಲಿ ನಟಿಸಿದ್ದ ಸೃಜನ್‌ ಲೋಕೇಶ್‌, ವಿನೋದ ಪ್ರಭಾಕರ್‌, ತರುಣ್‌, ಗಿರಿ, ನಾಗೇಂದ್ರ ಅವರು ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

IPL 2025: Here is the list of players that Chennai Super Kings will retain

IPL 2025: ಇಲ್ಲಿದೆ ನೋಡಿ ಚೆನ್ನೈ ಸೂಪರ್‌ ಕಿಂಗ್ಸ್‌ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

2

Kundapura: ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಹುಡುಗನೀಗ ರಣಜಿ ಆಟಗಾರ

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kerebete and venky movie to goa film festival

IFFI: ಗೋವಾ ಚಿತ್ರೋತ್ಸವಕ್ಕೆ ವೆಂಕ್ಯಾ, ಕೆರೆಬೇಟೆ

Janamari song from Yello Jogappa Nin Aramane Movie

Yello Jogappa Nin Aramane Movie; ಜೋಗಪ್ಪನ ಅರಮನೆಯಿಂದ ಮತ್ತೊಂದು ಹಾಡು ಬಂತು

badavara makkalu belibeku kanrayya movie

Sandalwood: ʼಬಡವ್ರ ಮಕ್ಕಳು ಬೇಳಿಬೇಕು ಕಣ್ರಯ್ಯʼ ಟ್ರೇಲರ್‌ ಶೀಘ್ರ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

8(1)

Udupi: ಅಳಿವಿನಂಚಿನಲ್ಲಿರುವ ಪ್ರಾಚೀನ ಸ್ಮಾರಕಗಳ ರಕ್ಷಣೆಗೆ ಟೀಮ್‌ ತೌಳವ

7

Kundapura: ತಲ್ಲೂರು ಪೇಟೆಗೆ ಶೌಚಾಲಯ ಬೇಕು

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

6

Bajpe ಪೇಟೆ ಚರಂಡಿಗೆ ಹೊಸ ಸ್ಲ್ಯಾಬ್‌

5(1)

Mangaluru: ಪ್ಲಾಸ್ಟಿಕ್‌ ನಿಯಂತ್ರಣ: ಸಂಘ-ಸಂಸ್ಥೆಗಳ ಪಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.