![1-india](https://www.udayavani.com/wp-content/uploads/2024/06/1-india-415x277.jpg)
Dasappa Movie; ಗ್ರಾಮೀಣ ಸೊಗಡಿನ ‘ದಾಸಪ್ಪ’ ಚಿತ್ರದ ಟ್ರೇಲರ್ ರಿಲೀಸ್
Team Udayavani, May 31, 2024, 2:45 PM IST
![Dasappa Movie; ಗ್ರಾಮೀಣ ಸೊಗಡಿನ ‘ದಾಸಪ್ಪ’ ಚಿತ್ರದ ಟ್ರೇಲರ್ ರಿಲೀಸ್](https://www.udayavani.com/wp-content/uploads/2024/05/dasappa-620x342.jpg)
“ದಾಸಪ್ಪ’ ಎಂಬ ಚಿತ್ರವೊಂದು ಬಿಡುಗಡೆಯ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ತಿಥಿ ಚಿತ್ರದ ಮೂಲಕ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕೀಲಾರ ಈ ಚಿತ್ರದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡಿದ ವಿಜಯ್, “ನಾನು ಮಂಡ್ಯ ಜಿಲ್ಲೆಯ ಕೀಲಾರದವನು. ದಾಸಪ್ಪ ಪಕ್ಕಾ ಗ್ರಾಮೀಣ ಸೊಗಡಿನ ಚಿತ್ರ. ಎಲ್ಲಾ ಹಳ್ಳಿಗಳಲ್ಲಿ ಯಾವುದೇ ಕಾರ್ಯವಾದರೂ ದಾಸಪ್ಪ ಅವರು ಇರಲೇ ಬೇಕು. ಅಂತಹ ದಾಸಪ್ಪ ಎಂಬ ಪಾತ್ರದ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ತಿಥಿ ಚಿತ್ರದ ಸ್ಫೂರ್ತಿಯಿಂದ ಈ ಚಿತ್ರ ಮಾಡಿದ್ದೇನೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ನಾನೇ ಬರೆದಿದ್ದೇನೆ. ಆನಂದ್ ಕೆಂಪೇಗೌಡ ಕೆಬ್ಬಳ್ಳಿ ಈ ಚಿತ್ರದ ನಿರ್ಮಾಪಕರು. ತಿಥಿ ಖ್ಯಾತಿಯ ನಟ ತಮ್ಮಣ್ಣ ಅವರು ದಾಸಪ್ಪನಾಗಿ ಅಭಿನಯಿಸಿದ್ದಾರೆ. ಮಂಜು ಪಾವಗಡ, ವಿನೋದ್ ಗೊಬ್ರಗಾಲ, ಅಂಜನ ಗಿರೀಶ್, ಸುರಕ್ಷಿತ ಶೆಟ್ಟಿ, ಸಿಂಚನ ಗೌಡ ಮುಂತಾದವರು ಅಭಿನಯಿಸಿದ್ದಾರೆ. ಹಾಡುಗಳು ಹಾಗೂ ಸಾಹಸ ಸನ್ನಿವೇಶಗಳು ಇಲ್ಲದಿರುವುದು ಈ ಚಿತ್ರದ ವಿಶೇಷ. ಮಂಡ್ಯ, ಕೀಲಾರ, ಮದ್ದೂರಿನಲ್ಲಿ ಚಿತ್ರೀಕರಣವಾಗಿದೆ’ ಎಂದು ವಿವರ ನೀಡಿದರು.
“ನಿರ್ದೇಶಕರು ನನ್ನ ಸ್ನೇಹಿತರು. ಕಥೆ ಕೇಳಿ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು. ನಿರ್ಮಾಣದ ಜೊತೆಗೆ ಸಣ್ಣ ಪಾತ್ರದಲ್ಲೂ ಕಾಣಿಸಿ ಕೊಂಡಿರುವುದಾಗಿ ಸಹ ನಿರ್ಮಾಪಕ ಶ್ರೀನಿವಾಸ್ ತಿಳಿಸಿದರು.
ಟಾಪ್ ನ್ಯೂಸ್
![1-india](https://www.udayavani.com/wp-content/uploads/2024/06/1-india-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ](https://www.udayavani.com/wp-content/uploads/2024/06/prajwl-150x83.jpg)
Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ
![D Boss, 6106…; title craze continues](https://www.udayavani.com/wp-content/uploads/2024/06/darshan-22-150x83.jpg)
D Gang, 6106….; ಮುಂದುವರಿದ ಟೈಟಲ್ ಕ್ರೇಜ್
![Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್ ಬಿ ಶೆಟ್ಟಿ](https://www.udayavani.com/wp-content/uploads/2024/06/Untitled-1-27-150x90.jpg)
Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್ ಬಿ ಶೆಟ್ಟಿ
![ದರ್ಶನ್ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್ – ಸೋನಲ್ ಪ್ರೇಮ್ ಕಹಾನಿ?](https://www.udayavani.com/wp-content/uploads/2024/06/Untitled-1-26-150x90.jpg)
ದರ್ಶನ್ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್ – ಸೋನಲ್ ಪ್ರೇಮ್ ಕಹಾನಿ?
![ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್ ಸ್ಟಿಕ್ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್](https://www.udayavani.com/wp-content/uploads/2024/06/Untitled-1-22-150x90.jpg)
ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್ ಸ್ಟಿಕ್ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.