ರಂಗನಾಯಕಿ ಹಿಂದೆ ದಯಾಳ್‌

ಅದಿತಿ ಕೈಯಲ್ಲಿ ಮತ್ತೊಂದು ಸಿನಿಮಾ

Team Udayavani, Mar 31, 2019, 11:30 AM IST

aditi

ನಿರ್ದೇಶಕ ದಯಾಳ್‌ ಪದ್ಮನಾಭ್‌, ಈಗ “ತ್ರಯಂಬಕಂ’ ಚಿತ್ರ ಬಿಡುಗಡೆ ತಯಾರಿಯಲ್ಲಿದ್ದಾರೆ. ಏಪ್ರಿಲ್‌ 19 ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಈಗಾಗಲೇ ಹೇಳಿಕೊಂಡಿದ್ದಾರೆ. ಆ ಚಿತ್ರ ಬಿಡುಗಡೆ ಮುನ್ನವೇ ಮತ್ತೊಂದು ಚಿತ್ರ ನಿರ್ದೇಶನ ಮಾಡುವ ಬಗ್ಗೆ ಘೋಷಿಸಿದ್ದಾರೆ ದಯಾಳ್‌.

ಅಂದಹಾಗೆ, ಈ ಬಾರಿ ಅವರು “ರಂಗನಾಯಕಿ’ ಹೆಸರಿನ ಚಿತ್ರಕ್ಕೆ ಕೈ ಹಾಕಿದ್ದಾರೆ ಎಂಬುದೇ ವಿಶೇಷ. “ರಂಗನಾಯಕಿ’ ಅಂದಾಕ್ಷಣ, ಥಟ್ಟನೆ ನೆನಪಾಗೋದೇ ಪುಟ್ಟಣ್ಣ ಕಣಗಾಲ್‌ ನಿರ್ದೇಶನದ ಎವರ್‌ಗ್ರೀನ್‌ ಚಿತ್ರ “ರಂಗನಾಯಕಿ’. ಹಾಗಂತ, ಆ ಚಿತ್ರಕ್ಕೂ ದಯಾಳ್‌ ನಿರ್ದೇಶಿಸುತ್ತಿರುವ “ರಂಗನಾಯಕಿ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ.

“ರಂಗನಾಯಕಿ’ ಹೆಸರಲ್ಲೇ ಒಂದು ಫೋರ್ಸ್‌ ಇದೆ. ಆ ಫೋರ್ಸ್‌ ದಯಾಳ್‌ ಅವರ “ರಂಗನಾಯಕಿ’ ಚಿತ್ರದಲ್ಲೂ ಇರಲಿದೆ ಎಂಬುದು ಅವರ ಮಾತು. ಹಾಗಾದರೆ ಈ ಚಿತ್ರದ “ರಂಗನಾಯಕಿ’ ಯಾರು? ಎಂಬ ಪ್ರಶ್ನೆಗೆ ನಟಿ ಅದಿತಿ ಪ್ರಭುದೇವ ಉತ್ತರ. ಹೌದು, ಅದಿತಿ ಇಲ್ಲಿ ನಾಯಕಿಯಾಗಿ ಕಾಣಸಿಕೊಳ್ಳುತ್ತಿದ್ದಾರೆ.

ನಾಯಕರಾಗಿ “ಬೀರ್‌ಬಲ್‌’ ಶ್ರೀನಿ ನಟಿಸುತ್ತಿದ್ದಾರೆ. ಇವರೊಂದಿಗೆ “ಪದ್ಮಾವತಿ’ ಧಾರಾವಾಹಿ ನಾಯಕ ತ್ರಿವಿಕ್ರಮ್‌ ಕೂಡ ನಟಿಸುತ್ತಿದ್ದಾರೆ. ಸದ್ಯಕ್ಕೆ ಈ ಮೂವರು ಪಕ್ಕಾ ಆಗಿದ್ದು, ಇಷ್ಟರಲ್ಲೇ ಇನ್ನುಳಿದ ಕಲಾವಿದರು ಸೇರಿಕೊಳ್ಳಲಿದ್ದಾರೆ ಎಂಬುದು ನಿರ್ದೇಶಕರ ಹೇಳಿಕೆ.

ಏಪ್ರಿಲ್‌ 29 ಕ್ಕೆ “ರಂಗನಾಯಕಿ’ ಚಿತ್ರಕ್ಕೆ ಚಾಲನೆ ಸಿಗಲಿದೆ. “ರಂಗನಾಯಕಿ’ ಕುರಿತು ಹೇಳಿಕೊಳ್ಳುವ ನಿರ್ದೇಶಕ ದಯಾಳ್‌, ಇದೊಂದು ರೇರ್‌ ಸ್ಟೋರಿ ಹೊಂದಿರುವ ಕಥೆ. ಒಂದು ಜರ್ನಿಯಲ್ಲೇ ಎಲ್ಲವನ್ನೂ ಹೇಳುವಂತಹ ಚಿತ್ರ.

ನಾಯಕಿಯದ್ದೇ ಇಲ್ಲಿ ಪ್ರಮುಖ ಅಂಶ. ಒಂದು ಘಟನೆಯಲ್ಲಿ ಸಿಲುಕಿಕೊಳ್ಳುವ ಆಕೆ, ಸಮಾಜವನ್ನು ಹೇಗೆ ಎದುರಿಸುತ್ತಾಳೆ, ಹೋರಾಡುತ್ತಾಳೆ ಮತ್ತು ಬದುಕುತ್ತಾಳೆ ಅನ್ನೋದು ಕಥೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ನವೀನ್‌ಕೃಷ್ಣ ಅವರು ಸಂಭಾಷಣೆ ಬರೆದಿದ್ದಾರೆ.

ಸುಮಾರು 25 ದಿನಗಳ ಕಾಲ ಶೇ.99 ರಷ್ಟು ಬೆಂಗಳೂರಲ್ಲೇ ಚಿತ್ರೀಕರಣಗೊಳ್ಳಲಿದೆ. ಸಿನಿಮಾದಲ್ಲಿ ನಾಯಕಿಯ ಪಾತ್ರ ಬೋಲ್ಡ್‌ ಆಗಿರಲಿದೆ. ತುಂಬಾ ವಿಭಿನ್ನ ಪಾತ್ರವಾಗಿದ್ದು, ಎಲ್ಲರಿಗೂ ಇಷ್ಟವಾಗುವಂತಹ ಚಿತ್ರ ಕೊಡುವ ಪ್ರಯತ್ನ ಮಾಡುತ್ತಿದ್ದೇನೆ. ಮಣಿಕಾಂತ್‌ ಕದ್ರಿ ಸಂಗೀತವಿದೆ. ರಾಕೇಶ್‌ ಛಾಯಾಗ್ರಹಣವಿದೆ. ಸುನೀಲ್‌ ಸಂಕಲನವಿದೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.