ಕೇಂದ್ರದ ಸೂಚನೆ ಬಳಿಕ ತೀರ್ಮಾನ


Team Udayavani, May 5, 2020, 10:17 AM IST

ಕೇಂದ್ರದ ಸೂಚನೆ ಬಳಿಕ ತೀರ್ಮಾನ

ಕೋವಿಡ್ 19 ಸಮಸ್ಯೆಗೆ ಸಿನಿಮಾರಂಗ ಅಕ್ಷರಶಃ ತತ್ತರಿಸಿದೆ. ಕಾರ್ಮಿಕರ ಸಮಸ್ಯೆಯಂತೂ ಹೇಳತೀರದು. ನಿರ್ಮಾಪಕರಿಗೆ ಆಗುತ್ತಿರುವ ತೊಂದರೆಯೂ ಇದಕ್ಕೆ ಹೊರತಾಗಿಲ್ಲ. ಈಗಾಗಲೇ ಲಾಕ್‌ಡೌನ್‌ ಅನ್ನು ತುಸುಮಟ್ಟಿಗೆ ಸಡಿಲಗೊಳಿಸಲಾಗಿದೆ. ಎಲ್ಲಾ ವಲಯಗಳಲ್ಲೂ ಒಂದಷ್ಟು ಕೆಲಸಗಳು ಶುರುವಾಗಿವೆ.

ಈಗ ಚಿತ್ರ ರಂಗ ಕೂಡ ತನ್ನ ಕಾರ್ಯಚಟುವಟಕೆಗೆ ಸಜ್ಜಾಗಿದ್ದರೂ, ಸರ್ಕಾರ ಮಾತ್ರ ಇನ್ನೂ ಶೂಟಿಂಗ್‌ಗೆ ಅನುಮತಿ ಕೊಟ್ಟಿಲ್ಲ. ಆ ನಿಟ್ಟಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಈ ಸಂಬಂಧ “ಉದಯವಾಣಿ’ ಜೊತೆ ಮಾತನಾಡಿದ ಫಿಲ್ಮ್ ಛೇಂಬರ್‌ ಅಧ್ಯಕ್ಷ ಜೈರಾಜ್‌, “ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಕುರಿತಂತೆ ಮಾತುಕತೆ ನಡೆಯುತ್ತಿದೆ. ಈಗಾಗಲೇ ಟೆಲಿವಿಷನ್‌ ಅಸೋಸಿಯೇಷನ್‌ನಿಂದ ಸಿಎಂಗೆ ಮನವಿ ಮಾಡಲಾಗಿದೆ. ಆದರೆ, ಅದಕ್ಕಿನ್ನೂ ಯಾವುದೇ ಉತ್ತರ ಬಂದಿಲ್ಲ. ಸದ್ಯಕ್ಕೆ ಕೇಂದ್ರ ಸರ್ಕಾರ ಒಂದು ಸೂಚನೆ ಕೊಟ್ಟಿದೆ. ಈಗಾಗಲೇ ಮಾರ್ಗಸೂಚಿ ಬಿಡುಗಡೆಯಾಗಿದೆ ಎನ್ನಲಾಗಿದೆ. ಆದರೆ ಆ ಪ್ರತಿ ನಮ್ಮ ಕೈಗೆ ಸಿಕ್ಕಿಲ್ಲ.

ಅದನ್ನು ನೋಡಿ, ಏನೆಲ್ಲಾ ಸೂಚನೆ ನೀಡಿದ್ದಾರೆ ಎಂಬುದನ್ನು ಗಮನಿಸಿ ನಾವು ಪ್ರತಿಕ್ರಿಯೆ ಕೊಡುತ್ತೇವೆ. ಸದ್ಯಕ್ಕೆ ಶೂಟಿಂಗ್‌ಗೆ ಮಾತ್ರ ಅನುಮತಿ ಕೋರುತ್ತಿದ್ದೇವೆ. ಚಿತ್ರಮಂದಿರಗಳ ಆರಂಭ ಕಷ್ಟ. ಯಾಕೆಂದರೆ, ಅಲ್ಲಿ ಜನರು ಬರುತ್ತಾರೆ ಎಂಬುದನ್ನು ಸ್ಪಷ್ಟವಾಗಿ ಹೇಳಲು ಆಗಲ್ಲ. ಸರ್ಕಾರ ಕೂಡ ಅದಕ್ಕೆ ಅನುಮತಿಯನ್ನೇ ಇನ್ನೂ ನೀಡಿಲ್ಲ. ಇನ್ನು, ಚಿತ್ರೀಕರಣದಲ್ಲಿ ಭಾಗವಹಿಸುವ ಎಲ್ಲಾ ಕಾರ್ಮಿಕರಿಗೆ, ತಂತ್ರಜ್ಞರಿಗೆ ಆರೋಗ್ಯ ವಿಮೆ, ಜೀವ ವಿಮೆ ಮಾಡಿಸಬೇಕು ಇತ್ಯಾದಿ ಸೂಚನೆಗಳು ಇವೆ ಎಂದು ಹೇಳಲಾಗುತ್ತಿದೆ. ಈ ರೀತಿಯ ಕಟ್ಟುನಿಟ್ಟಿನ ಸೂಚನೆ ಇದ್ದರೆ, ಕಷ್ಟ ಆಗಬಹುದು. ಕೇಂದ್ರ ಸರ್ಕಾರ ಏನೆಲ್ಲಾ ಸೂಚನೆ ಕೊಟ್ಟಿದೆ ಎಂಬುದನ್ನು ನೋಡಬೇಕಿದೆ.

ನಾವು ಎರಡು ದಿನದಲ್ಲಿ ಫಿಲ್ಮ್ ಛೇಂಬರ್‌ ಓಪನ್‌ ಮಾಡ್ತೀವಿ. ಆ ಬಳಿಕ ಪದಾಧಿಕಾರಿಗಳ ಜೊತೆ ಚರ್ಚಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ, ಆಮೇಲೆ ಏನು ಮಾಡಬೇಕು ಎಂಬುದನ್ನು ಯೋಚಿಸುತ್ತೇವೆ. ಶೂಟಿಂಗ್‌ಗೆ ಅನುಮತಿ ನೀಡಿದರೆ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸ ಮಾಡ್ತೀವಿ. ಆದರೆ, ಅವಕಾಶ ಕೊಡುತ್ತಾರೋ, ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ ಎನ್ನುತ್ತಾರೆ ಅಧ್ಯಕ್ಷ  ಜೈರಾಜ್‌.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.