ತೋತಾಪುರಿ ಹಿಡಿದ ಧನಂಜಯ್‌


Team Udayavani, Jan 28, 2019, 5:40 AM IST

dhananjay.jpg

ಧನಂಜಯ್‌ “ಭೈರವಗೀತ’ ಬಳಿಕ ಮತ್ಯಾವ ಚಿತ್ರ ಒಪ್ಪಿಕೊಂಡಿದ್ದಾರೆ ಎಂಬ ಪ್ರಶ್ನೆಗೆ ಇದೀಗ “ತೋತಾಪುರಿ’ ಉತ್ತರವಾಗಿದೆ. ಹೌದು, ಜಗ್ಗೇಶ್‌ ಅಭಿನಯದ “ತೋತಾಪುರಿ’ ಚಿತ್ರದಲ್ಲಿ ಧನಂಜಯ್‌ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೆ ಈಗಾಗಲೇ ಒಂದಷ್ಟು ಭಾಗದ ಚಿತ್ರೀಕರಣ ಕೂಡ ನಡೆದಿದೆ. ಧನಂಜಯ್‌ ಇಲ್ಲಿ ಒಂದಲ್ಲ, ಎರಡಲ್ಲ, ಮೂರು ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಅಂದಹಾಗೆ, ಈ ಕುರಿತು ಮಾಹಿತಿ ನೀಡುವ ನಿರ್ದೇಶಕ ವಿಜಯ ಪ್ರಸಾದ್‌, “ಈಗಾಗಲೇ ಧನಂಜಯ್‌ ಅವರು “ತೋತಾಪುರಿ’ ಚಿತ್ರದ ಕೆಲ ಭಾಗದಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಸೋಮವಾರ ಪೇಟೆಯಲ್ಲಿ ಸುಮಾರು 11 ದಿನಗಳ ಕಾಲ ಚಿತ್ರೀಕರಣ ನಡೆದಿದ್ದು, ಅದರಲ್ಲಿ ಧನಂಜಯ್‌ ಪಾಲ್ಗೊಂಡಿದ್ದರು. ಧನಂಜಯ್‌ ಅವರಿಗೆ ಇಲ್ಲಿ ಮೂರು ಹೊಸ ಗೆಟಪ್‌ ಇದೆ. ಗಡ್ಡ ಇರುವ ಗೆಟಪ್‌, ಇಲ್ಲದ ಗೆಟಪ್‌ ಮತ್ತು ಇನ್ನೊಂದು ಹೊಸ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸದ್ಯಕ್ಕೆ ಧನಂಜಯ್‌ ಅವರು “ದುನಿಯಾ’ ಸೂರಿ ಅವರ “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರದಲ್ಲಿ ನಟಿಸುತ್ತಿದ್ದು, ಆ ಚಿತ್ರದಲ್ಲಿ ಅವರು ಮೀಸೆ ಇಲ್ಲದ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆ ಗೆಟಪ್‌ ಕೂಡ “ತೋತಾಪುರಿ’ ಚಿತ್ರದಲ್ಲಿರಲಿದೆ. ಮೈಸೂರು ಮತ್ತು ಸೋಮವಾರ ಪೇಟೆಯಲ್ಲಿ ನಡೆದ ಚಿತ್ರೀಕರಣದಲ್ಲಿ ಒಂದೊಂದು ಗೆಟಪ್‌ನಲ್ಲಿ ಧನಂಜಯ್‌ ಕಾಣಿಸಿಕೊಂಡಿರುವ ದೃಶ್ಯವನ್ನು ಚಿತ್ರೀಕರಿಸಿಕೊಳ್ಳಲಾಗಿದೆ.

ಇನ್ನುಳಿದಂತೆ ಫೆಬ್ರವರಿ 3 ಅಥವಾ 5 ರಿಂದ ಇನ್ನೊಂದು ಹಂತದ ಚಿತ್ರೀಕರಣ ನಡೆಯಲಿದೆ. ಅದಾದ ಬಳಿಕ ಕೇರಳದಲ್ಲಿ ಚಿತ್ರೀಕರಣ ನಡೆಸುವ ತಯಾರಿ ಮಾಡಿಕೊಂಡಿದ್ದೇವೆ’ ಎಂದು ವಿವರ ಕೊಡುವ ನಿರ್ದೇಶಕ ವಿಜಯ ಪ್ರಸಾದ್‌, ಧನಂಜಯ್‌ ಈ ಚಿತ್ರದಲ್ಲಿ ನಾರಾಯಣ್‌ ಪಿಳೈ ಎಂಬ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರೊಬ್ಬ ಪೆಟ್ರೋಲ್‌ ಬಂಕ್‌ ಮಾಲೀಕರಾಗಿ ನಟಿಸುತ್ತಿದ್ದು, ಅವರಿಗೆ ಸುಮನ್‌ ರಂಗನಾಥ್‌ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ’ ಎಂಬುದು ನಿರ್ದೇಶಕರ ಮಾತು.

“ತೋತಾಪುರಿ’ ಚಿತ್ರಕ್ಕೆ “ತೊಟ್‌ ಕೀಳ್‌ಬೇಕಷ್ಟೇ’ ಎಂಬ ಅಡಿಬರಹವಿದೆ. ಇಲ್ಲಿ ಶೀರ್ಷಿಕೆ ಮತ್ತು ಅಡಿಬರಹ ಗಮನಿಸಿದರೆ, ಇದೊಂದು ಪಕ್ಕಾ ಮನರಂಜನೆ ಚಿತ್ರ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಈಗಾಗಲೇ “ನೀರ್‌ದೋಸೆ’ ಮೂಲಕ ನಿರ್ದೇಶಕರು ಮಾಡಿದ ಮೋಡಿ ಎಲ್ಲರಿಗೂ ಗೊತ್ತಿದೆ. ಈ ಚಿತ್ರಕ್ಕೆ ಕೆ.ಎ.ಸುರೇಶ್‌ ನಿರ್ಮಾಪಕರು. ಜಗ್ಗೇಶ್‌ ಅವರಿಗೆ  ಅದಿತಿ ಪ್ರಭುದೇವ್‌ ಜೋಡಿಯಾಗಿದ್ದಾರೆ. 

ಉಳಿದಂತೆ ಚಿತ್ರದಲ್ಲಿ ವೀಣಾಸುಂದರ್‌ ಇತರರು ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಅದಿತಿ ಪ್ರಭುದೇವ್‌ ಇಲ್ಲಿ ಮುಸ್ಲಿಂ ಹುಡುಗಿಯಾಗಿ ನಟಿಸುತ್ತಿದ್ದಾರೆ. ಇಲ್ಲಿ ತರಹೇವಾರಿ ಪಾತ್ರಗಳಿರುವುದರಿಂದ ಇದೊಂದು ವಿಡಂಬನಾತ್ಮಕ ಸಿನಿಮಾ ಆಗಿ ಹೊರಬರಲಿದೆ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.