Dhananjaya; ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ಡಾಲಿ


Team Udayavani, Jun 21, 2024, 12:56 PM IST

Dhananjaya as Nadaprabhu Kempegowda

ಸಿನಿಮಾ ರಂಗಕ್ಕೆ ಬರುವ ಪ್ರತಿಯೊಬ್ಬ ಕಲಾವಿದನು ಹೊಸದೇನೋ ಮಾಡಬೇಕೆಂಬ ಆಸೆ, ತುಡಿತದೊಂದಿಗೆ ಬಂದಿರುತ್ತಾನೆ. ಆದರೆ, ಚಿತ್ರರಂಗದ ವ್ಯವಸ್ಥೆ ಮಾತ್ರ ಆತನ ತುಡಿತ, ಆಸೆಗಳನ್ನು ಬದಿಗೊತ್ತಿ, ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ಸಿಕ್ಕ ಸಿಕ್ಕ ಪಾತ್ರಗಳನ್ನು ಒಪ್ಪುವಂತೆ ಮಾಡುತ್ತದೆ. ಆದರೆ, ಕೆಲವು ನಟರು ಮಾತ್ರ ಕಮರ್ಷಿಯಲ್‌ ಆಗಿ ಹಾಗೂ ತಮ್ಮ ಇತರ ಆಶಯಗಳಿಗಾಗಿ ಕೆಲವು ಪಾತ್ರಗಳನ್ನು ಒಪ್ಪಿಕೊಂಡರೂ, ಅವರ ಮನಸ್ಸಿನಲ್ಲಿನ ತುಡಿತ ಮಾತ್ರ ಹಾಗೇ ಇರುತ್ತದೆ. ಅಂತಹ ನಟರಲ್ಲಿ ಧನಂಜಯ್‌ ಕೂಡಾ ಒಬ್ಬರು.

ಹೊಸದೇನನ್ನೋ ಮಾಡಬೇಕೆಂಬ ಬಯಕೆ ಧನಂಜಯ್‌ ಅವರಲ್ಲಿ ಸದಾ ಇದೆ. ಈ ಹಾದಿಯಲ್ಲಿ ಪ್ರಯತ್ನಿಸುತ್ತಲೇ ಇದ್ದಾರೆ. ಕೆಲವೊಮ್ಮೆ ಅದು ಕೈ ಹಿಡಿದಿದೆ, ಇನ್ನು ಕೆಲವೊಮ್ಮೆ ನಿರೀಕ್ಷಿತ ಪ್ರತಿಫ‌ಲ ನೀಡಿಲ್ಲ. ಈಗ ನಟ ಧನಂಜಯ್‌ ಮತ್ತೂಂದು ಕನಸು ಕಾಣುತ್ತಿದ್ದಾರೆ. ಅದು “ನಾಡಪ್ರಭು ಕೆಂಪೇಗೌಡ’ರ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಇದು ಧನಂಜಯ್‌ ನಟನೆಯ ಹೊಸ ಸಿನಿಮಾ.

ಹೀಗೊಂದು ಸಿನಿಮಾದ ಹೆಸರು ಅನೇಕ ದಿನಗಳಿಂದ ಕೇಳಿಬರುತ್ತಿತ್ತು. ಈಗ ಚಿತ್ರೀಕರಣಕ್ಕೆ ತಂಡ ಅಣಿಯಾಗಿದೆ. ಹಿರಿಯ ನಿರ್ದೇಶಕ ಟಿ.ಎಸ್‌.ನಾಗಾಭರಣ ಅವರು ಈ ಚಿತ್ರದ ನಿರ್ದೇಶಕರು. ಕೆಂಪೇಗೌಡ ಕುರಿತಾಗಿ ಸಿನಿಮಾ ಮಾಡಬೇಕೆಂಬುದು ನಾಗಾಭರಣ ಅವರ ಎರಡು ದಶಕಗಳ ಕನಸು ಈಗ ನನಸಾಗುತ್ತಿದೆ. ಅದಕ್ಕೆ ಧನಂಜಯ್‌ ಸಾಥ್‌ ನೀಡುತ್ತಿದ್ದಾರೆ.

“ನಾಡಪ್ರಭು ಕೆಂಪೇಗೌಡ’ ಚಿತ್ರಕ್ಕೆ “ಬೆಂಗಳೂರು ಕಾರಣಿಕ’ ಎಂಬ ಅಡಿಬರಹವಿದೆ. ಡಾ.ಎಂ. ಎನ್‌.ಶಿವರುದ್ರಪ್ಪ ಹಾಗೂ ಶುಭಂ ಗುಂಡಾಲ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್‌ ಸಂಗೀತ, ಅದ್ವೈತ್‌ ಗುರುಮೂರ್ತಿ ಛಾಯಾಗ್ರಹಣ, ಶಶಿಧರ ಅಡಪ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ.

ನಾಗಾರಭರಣ ಅವರು ಈ ಚಿತ್ರಕ್ಕಾಗಿ ಸಾಕಷ್ಟು ಸಂಶೋಧನೆ ಮಾಡಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ರಚಿಸಿದ್ದಾರೆ. ಶೀಘ್ರದಲ್ಲಿಯೇ ಸಿನಿಮಾ ಆರಂಭವಾಗಲಿದೆ.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

nange allava song

Nange Allava Song; ಸಂಜನಾ ದಾಸ್ ಜತೆಗೆ ಹೆಜ್ಜೆ ಹಾಕಿದ ಸಂಜಿತ್ ಹೆಗ್ಡೆ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.