ಏಪ್ರಿಲ್ ನಲ್ಲಿ ಧನ್ಯಾ-ಅನೂಪ್ ಜೋಡಿಯ ‘ಹೈಡ್ ಆ್ಯಂಡ್ ಸೀಕ್’


Team Udayavani, Mar 7, 2023, 12:11 PM IST

Dhanya Ramkumar’s new film Hide and seek

ಸ್ಯಾಂಡಲ್‌ವುಡ್‌ನ‌ಲ್ಲಿ ಇತ್ತೀಚೆಗೆ ನವ ಪ್ರತಿಭೆಗಳ ಅನಾವರಣವಾಗುತ್ತಲೇ ಇದೆ. ವಿಭಿನ್ನ ಕಥೆ ಮತ್ತು ಟೈಟಲ್‌ ಮೂಲಕ ಗಮಸೆಳೆಯುತ್ತಿರುವ ಹೊಸ ಪ್ರತಿಭೆಗಳ ಸಾಲಿಗೆ “ಹೈಡ್‌ ಆ್ಯಂಡ್‌ ಸೀಕ್‌’ ಶೀರ್ಷಿಕೆಯ ಚಿತ್ರವೂ ಸೇರಿದೆ.  ಹೊಸ ನಿರ್ದೇಶಕ ಪುನೀತ್‌ ನಾಗರಾಜು, ಅನುಭವಿ ತಂತ್ರಜ್ಞ ವಸಂತ್‌ ರಾವ್‌ ಎಂ ಕುಲಕರ್ಣಿ ಸೇರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇತ್ತೀಚೆಗೆ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ “ಹೈಡ್‌ ಆ್ಯಂಡ್‌ ಸೀಕ್‌’ ಚಿತ್ರದ ಪೋಸ್ಟರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಹೆಚ್‌.ಎಂ.ರೇವಣ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ನಿರ್ದೇಶಕ ಪುನೀತ್‌ ನಾಗರಾಜು ಮಾತನಾಡಿ, “ಹೈಡ್‌ ಆ್ಯಂಡ್‌ ಸೀಕ್‌ ಒಂದು ಸಸ್ಪೆನ್ಸ್‌, ಥ್ರಿಲ್ಲರ್‌ ಜಾನರ್‌ನ ಚಿತ್ರವಾಗಿದೆ. 25 ದಿನಗಳಲ್ಲಿ ಮಾಗಡಿ, ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತಲೂ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಎರಡು ಹಾಡುಗಳಿವೆ. ಚಿತ್ರದಲ್ಲಿ ರಿವರ್ಸ್‌ ಸ್ಕ್ರೀನ್‌ ಪ್ಲೇ ಮಾದರಿಯನ್ನು ಪ್ರಯೋಗ ಮಾಡಿದ್ದೇವೆ. ಕನ್ನಡದಲ್ಲಿ ಈ ಮಾದರಿ ಮೊದಲು ಎನ್ನಬಹುದು. ಚಿತ್ರದಲ್ಲಿ ಒಂದು ಕಿಡ್ನಾಪ್‌ ನಡೆಯುತ್ತದೆ. ಅದು ಯಾಕೆ, ಹೇಗೆ, ಯಾರಿಂದ ಎಂಬುದೇ ಚಿತ್ರದ ಕಥೆಯಾಗಿದೆ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಹಲವು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ: ಯಡಿಯೂರಪ್ಪ

ಚಿತ್ರ ಸಹ ನಿರ್ಮಾಪಕ ವಸಂತ್‌ ರಾವ್‌ ಮಾತನಾಡಿ , “ನಾನು ಚಿತ್ರರಂಗದಲ್ಲಿ 20 ವರ್ಷಗಳಿಂದ ತಂತ್ರಜ್ಞನಾಗಿ, ಕಲಾ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಪುನೀತ್‌ ನಾಗರಾಜು ಬಂದು ಕಥೆ ಹೇಳಿದಾಗ ಬಹಳ ಇಷ್ಟವಾಯ್ತು. ಆ ಕಾರಣಕ್ಕೆ ಬಂಡವಾಳ ಹಾಕಿದ್ದೇನೆ. ನನ್ನ ದಶಕಗಳ ದುಡಿಮೆಯನ್ನು ಚಿತ್ರದ ಮೇಲೆ ಹಾಕಿದ್ದೇನೆ. ಚಿತ್ರ ಉತ್ತಮವಾಗಿ ಮೂಡಿಬಂದಿದೆ ಎಂದರು.

ಧನ್ಯಾ ರಾಮ್‌ಕುಮಾರ್‌ಮಾತನಾಡಿ, “ಸಸ್ಪೆನ್ಸ್‌ , ಥ್ರಿಲ್ಲರ್‌ ನನಗೆ ಇಷ್ಟವಾದ ಜಾನರ್‌. ಮೊದಲು ಕಥೆ ಕೇಳಿದಾಗ ಬಹಳ ಇಷ್ಟವಾಯ್ತು. ನನ್ನ ಎರಡನೇ ಚಿತ್ರ ಈ ಜಾನರ್‌ ಆಗಿರಬೇಕು ಎಂದು ಆಯ್ಕೆ ಮಾಡಿಕೊಂಡೆ. ಚಿತ್ರೀಕರಣಕ್ಕೂ ಮುಂಚೆ ಚಿತ್ರತಂಡದವರು ವರ್ಕ್‌ ಶಾಪ್‌ ಮಾಡುವ ಮೂಲಕ ಒಂದು ಬಾಂಡಿಂಗ್‌ ಬೆಳೆಸಿಕೊಂಡೆವು. ಚಿತ್ರದಲ್ಲಿ ನನ್ನದು ಅಪ್ಪನ ಮುದ್ದಿನ ಮಗಳ ಪಾತ್ರ. ದೊಡ್ಡ ಉದ್ಯಮಿಯ ಮಗಳಾಗಿ ಕಾಣಿಸಿಕೊಂಡಿದ್ದೇನೆ. ಕೊನೆಯವರೆಗೂ ಕುತೂಹಲ ಮೂಡಿಸುವ ಚಿತ್ರ ಇದಾಗಿದೆ. ಇದೇ ಏಪ್ರಿಲ್‌ನಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದರು.

ಚಿತ್ರದ ಕಲಾವಿದರು ತಮ್ಮ ಪಾತ್ರಗಳು ಹಾಗೂ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. ಚಿತ್ರ ಕ್ಕೆ ರೆಜೋ ಪಿ ಜಾನ್‌ ಛಾಯಾಗ್ರಹಣ, ಸ್ಯಾಂಡಿ ಅಡ್ಡಂಕಿ ಸಂಗೀತ, ಮಧು ತುಂಬೇಕೆರೆ ಸಂಕಲನ ಚಿತ್ರಕ್ಕಿದೆ. ಅನೂಪ್‌ ರೇವಣ್ಣ, ಧನ್ಯಾ ರಾಮ್‌ ಕುಮಾರ್‌, ಮೈತ್ರೀ ಜಗ್ಗಿ, ರಕ್ಷಾ ಉಮೇಶ್‌, ಅರವಿಂದ್‌, ಸೂರಜ್‌ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.