![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 20, 2024, 11:01 AM IST
ಬೆಂಗಳೂರು: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಹಾಗೂ ʼಮಾರ್ಟಿನ್ʼ ಚಿತ್ರತಂಡ ಸಂಚರಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಚಿತ್ರತಂಡ ಪಾರಾಗಿದೆ.
ಎ.ಪಿ ಅರ್ಜುನ್ ಅವರ ನಿರ್ದೇಶನದ ʼಮಾರ್ಟಿನ್ʼ ಚಿತ್ರದ ಹಾಡಿನ ಚಿತ್ರೀಕರಣಕ್ಕೆ ಚಿತ್ರತಂಡದೊಂದಿಗೆ ಧ್ರುವ ಸರ್ಜಾ ಶ್ರೀನಗರಕ್ಕೆ ತೆರಳುತ್ತಿದ್ದರು. ಅಲ್ಲಿ ಚಿತ್ರೀಕರಣ ಮುಗಿಸಿ ದೆಹಲಿಗೆ ವಾಪಾಸಾಗುವ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಆದರೆ ಸೂಕ್ತ ಸಮಯದಲ್ಲಿ ಪೈಲೆಟ್ ದುರಂತವನ್ನು ತಪ್ಪಿಸಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ.
ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆದ ಬಳಿಕ ವಿಮಾನದೊಳಗಿನಿಂದಲೇ ʼಮಾರ್ಟಿನ್ʼ ಚಿತ್ರತಂಡ ಸಮಯ ಪ್ರಜ್ಞೆ ಮೆರೆದ ಪೈಲೆಟ್ ಗೆ ಧನ್ಯವಾದ ಹೇಳಿದೆ.
” ಕಟ್ಟ ಅನುಭವ ಇವತ್ತು ಆಗಿದ್ದು. ಜೀವನದಲ್ಲಿ ಇಂತಹ ಕೆಟ್ಟ ಅನುಭವ ಆಗಿರಲಿಲ್ಲ. ದೇವರಿಗೆ ಧನ್ಯವಾದ ತಿಳಿಸಬೇಕು. ಜೈ ಆಂಜನೇಯ” ಎಂದು ಧ್ರುವಾ ಸರ್ಜಾ ವಿಡಿಯೋದಲ್ಲಿ ಹೇಳಿದ್ದಾರೆ.
ಇಮ್ರಾನ್ ಸರ್ದಾರಿಯಾ ಕೊರಿಯೋಗ್ರಫಿ ಸಿನಿಮಾಕ್ಕಿದೆ. ಸಿನಿಮಾದ ಕೊನೆ ಹಂತದ ಚಿತ್ರೀಕರಣ ನಡೆಯುತ್ತಿದೆ.
ಧ್ರುವ ವೃತ್ತಿ ಬದುಕಿನ ಮತ್ತೊಂದು ಬಹು ನಿರೀಕ್ಷಿತ ದುಬಾರಿ ಸಿನಿಮಾಗಳಲ್ಲಿ ಒಂದಾಗಿರುವ ʼಮಾರ್ಟಿನ್ʼ ನಲ್ಲಿ ಕನ್ನಡದ ಕಲಾವಿದರ ಜೊತೆ ಟಾಲಿವುಡ್, ಕಾಲಿವುಡ್ ಹಾಗೂ ಬಿಟೌನ್ ಕಲಾವಿದರು ಕೂಡ ನಟಿಸಿದ್ದಾರೆ. ವೈಭವಿ ಶಾಂಡಲ್ಯ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
View this post on Instagram
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.