![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 24, 2021, 4:44 PM IST
ತಮಿಳಿನಲ್ಲಿ “ರೌಡಿ ಬೇಬಿ’ ಎಂಬ ಜನಪ್ರಿಯ ಹಾಡನ್ನು ನೀವು ಕೇಳಿರಬಹುದು. ಈಗ ಅದೇ”ರೌಡಿ ಬೇಬಿ’ ಹೆಸರಿನಲ್ಲಿ ಕನ್ನಡದ ಲ್ಲಿ ಸಿನಿಮಾವೊಂದು ತೆರೆಗೆ ಬರಲು ರೆಡಿಯಾಗುತ್ತಿದೆ. ಇತ್ತೀಚೆಗಷ್ಟೇ ಬಿಗ್ಬಾಸ್ ಶೋನಲ್ಲಿ ಸ್ಪರ್ಧಿಯಾಗಿ ಬಿಗ್ಬಾಸ್ ಮನೆಗೆ ಪ್ರವೇಶಿಸಿದ್ದ ದಿವ್ಯಾ ಸುರೇಶ್, “ರೌಡಿ ಬೇಬಿ’ಯಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ “ರೌಡಿ ಬೇಬಿ’ ಚಿತ್ರದ ಬಹುತೇಕ ಚಿತ್ರೀಕರಣಪೂರ್ಣಗೊಂಡಿದ್ದು, ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.
ಇನ್ನು ಎಸ್. ಎಸ್ ರವಿಗೌಡ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಅವರೊಂದಿಗೆ ಹೀರ್ ಕೌರ್ ಮತ್ತೂಬ್ಬ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಅಮಿತ್, ಕೆಂಪೇಗೌಡ, ಅರುಣಾ ಬಾಲರಾಜ್, ಶ್ರೀನಾಥ್ ವಸಿಷ್ಠ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ನಿಧಾನವಾಗಿ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ “ರೌಡಿ ಬೇಬಿ’ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಸಾಂಗ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಇದನ್ನೂ ಓದಿ:ನಟ ಸೋನು ಸೂದ್ ಪಾದಕ್ಕೆ ನಮಿಸಲು ಮುಂದಾದ ಜನರು
ರೆಡ್ಡಿಕೃಷ್ಣ ಚೊಚ್ಚಲ ನಿರ್ದೇಶನದ “ರೌಡಿ ಬೇಬಿ’ ಚಿತ್ರ “ವಾರ್ ಫುಟ್ ಸ್ಟುಡಿಯೋ’ ಹಾಗೂ “ಸುಮುಖ ಎಂಟರ್ಟೈನರ್’ ಬ್ಯಾನರ್ನಲ್ಲಿ ನಿರ್ಮಾಣವಾಗಿದೆ. ಚಿತ್ರದ ಹಾಡುಗಳಿಗೆ ಅರಮಾನ್ ಹಾಗೂ ಅಭಿಷೇಕ್ ರಫಸ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಸಾಮ್ರಾಟ್ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ. ಬೆಂಗಳೂರು, ಮಂಗಳೂರು, ಕೇರಳ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.
ಸದ್ಯ ಬಿಡುಗಡೆಯಾಗಿರುವ ಲಿರಿಕಲ್ ವಿಡಿಯೋ ಸಾಂಗ್ ಸೋಶಿಯಲ್ ಮಿಡಿಯಾದಲ್ಲಿ ನೋಡುಗರ ಗಮನ ಸೆಳೆಯುತ್ತಿದ್ದು, ಲಾಕ್ಡೌನ್ ಮುಕ್ತಾಯದ ಬಳಿಕ “ರೌಡಿ ಬೇಬಿ’ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರ ತಂಡ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.