ಚಿತ್ರೀಕರಣ ಶುರು ಮಾಡಿದ ‘ಎಜುಕೇಟೆಡ್ ಬುಲ್ಸ್’
Team Udayavani, Jun 20, 2023, 1:08 PM IST
ಈ ಹಿಂದೆ “ಜಯಭೇರಿ’, “ರಣಚಂಡಿ’ ಸೇರಿದಂತೆ ಹಲವಾರು ಸಿನಿಮಾಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಜಿ. ಕೆ. ಮುದ್ದುರಾಜ್ ಹಲವು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದಾರೆ. ಈ ಬಾರಿ ಜಿ. ಕೆ ಮುದ್ದುರಾಜ್ “ಎಜುಕೇಟೆಡ್ ಬುಲ್ಸ್’ ಎಂಬ ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ತಯಾರಿಯಲ್ಲಿದ್ದಾರೆ.
ಇತ್ತೀಚೆಗೆ “ಎಜುಕೇಟೆಡ್ ಬುಲ್ಸ್’ ಚಿತ್ರದ ಮುಹೂರ್ತ ಸಮಾರಂಭ ಸರಳವಾಗಿ ನೆರವೇರಿತು. ನಿರ್ಮಾಪಕ ಭಾ. ಮ. ಗಿರೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸಿದರೆ, ಗೀತ ಸಾಹಿತಿ ಮತ್ತು ನಿರ್ದೇಶಕ ಡಾ. ವಿ. ನಾಗೇಂದ್ರಪ್ರಸಾದ್ ಕ್ಯಾಮೆರಾ ಆನ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. “ಒಡೆಯರ್ ಎಂಟರ್ಟೈನ್ಮೆಂಟ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ “ಎಜುಕೇಟೆಡ್ ಬುಲ್ಸ್’ ಸಿನಿಮಾದಲ್ಲಿ ತನುಷ್, ಯಶಸ್ ಅಭಿ, ರಾಕೇಶ್ ಚಂದ್ರ, ಹರ್ಷಿಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ನಿರ್ದೇಶಕ ಜಿ. ಕೆ ಮುದ್ದುರಾಜ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ “ಎಜುಕೇಟೆಡ್ ಬುಲ್ಸ್’ ಚಿತ್ರಕ್ಕೆ ಜಗದೀಶ್ ಸಂಭಾಷಣೆಯಿದೆ. ಚಿತ್ರಕ್ಕೆ ರಾಘವೇಂದ್ರ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಥ್ರಿಲ್ಲರ್ ಮಂಜು ಸಾಹಸ ಸಂಯೋಜನೆಯಿದೆ. ಸದ್ಯ ಮುಹೂರ್ತವನ್ನು ಆಚರಿಸಿಕೊಂಡಿರುವ “ಎಜುಕೇಟೆಡ್ ಬುಲ್ಸ್’ ಸಿನಿಮಾವನ್ನು ಬೆಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಸುಮಾರು ನಲವತ್ತು ದಿನಗಳ ಚಿತ್ರೀಕರಣ ನಡೆ ಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ತಂದೆ-ಮಗನ ಕಥಾಹಂದರ ʼಜನಕʼ
Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ
Toxic Movie: ಯಶ್ ʼಟಾಕ್ಸಿಕ್ʼ ಅಖಾಡಕ್ಕೆ ಖಡಕ್ ಬ್ರಿಟೀಷ್ ನಟ ಎಂಟ್ರಿ
45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್ 45 ಬಗ್ಗೆ ಶಿವಣ್ಣ ಮಾತು
Dhruva Meets Fans: ಪ್ರತಿ ಭಾನುವಾರ ಅಭಿಮಾನಿಗಳ ಜತೆ ಧ್ರುವ ಸರ್ಜಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.