ಒಪ್ಪೊತ್ತಿನ ಕೂಳಿಗಾದರೂ ಮುಂದಾಗಿ: ದರ್ಶನ್
Team Udayavani, Mar 30, 2020, 1:35 PM IST
ಕೋವಿಡ್ 19 ಎಫೆಕ್ಟ್ ನಿಂದಾಗಿ ಇಡಿಈ ದೇಶವೇ ಸ್ತಬ್ಧವಾಗಿದೆ. ಸಾಕಷ್ಟು ಮಂದಿ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಅನೇಕರು ಬಡ ಜನರ ಸಹಾಯಕ್ಕೆ ಧಾವಿಸುತ್ತಿದ್ದಾರೆ. ಸಿನಿಮಾ ಮಂದಿ ಕೂಡಾ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಸ್ಟಾರ್ ನಟರ ಅಭಿಮಾನಿ ಸಂಘಗಳು ಕೂಡಾ ಕಾರ್ಯಪ್ರವೃತ್ತರಾಗಿವೆ.
ಈ ಸಂದರ್ಭದಲ್ಲಿ ನಟ ದರ್ಶನ್ ಟ್ವೀಟ್ ಮಾಡಿ ಒಂದು ಸಲಹೆ ನೀಡಿದ್ದಾರೆ. ಈ ಸಮಯದಲ್ಲಿ ನಾನೊಂದು ಸಣ್ಣ ಸಲಹೆ ನೀಡಲು ಇಚ್ಛಿಸುತ್ತೇನೆ. ದಿನನಿತ್ಯ ನೀವು ಮಡುವ ಅಡುಗೆಯಲ್ಲಿ ಸ್ವಲ್ಪ ಹೆಚ್ಚು ಜನರಿಗಾಗುವಂತೆ ಮಾಡಿ, ನಿಮ್ಮ ಅಕ್ಕಪಕ್ಕದ ಬಡಜನರಿಗೆ ಒಪ್ಪೊತ್ತು ಕೂಳಿಗಾದರೂ ನೆರವಾದರೆ ಒಳಿತು ಎಂಬುದು ನನ್ನ ಭಾವನೆ. ಸಾಧ್ಯವಾದಷ್ಟೂ ನಿಮ್ಮ ಕೈಲಾಗುವ ಈ ಕೆಲಸ ಅನೇಕ ಕುಟುಂಬಗಳು ಚೇತರಿಸಿಕೊಳ್ಳಬಹುದು’ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ಈಗಾಗಲೇ ದರ್ಶನ್ ಅಭಿಮಾನಿಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ಹಸಿದವರಿಗೆ ಊಟದ ವ್ಯವಸ್ಥೆ, ತುರ್ತಾಗಿ ಬೇಕಾದಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ದೇಶದ ಲಾಕ್ ಡೌನ್ ಮುಗಿಯುವವರೆಗೆ ಇದನ್ನು ಮುಂದುವರೆಸಲಿದ್ದಾರೆ. ಬಹುತೇಕ ಸ್ಟಾರ್ ನಟರ ಅಭಿಮಾನಿಗಳು ಕಷ್ಟದ ಸಮಯದಲ್ಲಿ ತಮ್ಮ ಕೈಲದ ಸಹಾಯ ಮಾಡುತ್ತಾ ಮಾನವೀಯತೆ ಮೆರೆಯುತ್ತಿರುತ್ತಾರೆ. ಅದು ಈ ಬಾರಿಯೂ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Seetha Payana: ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್ ಹೀರೋ
Chethan Kumar: ನಟ ಚೇತನ್ ವಿರುದ್ಧದ ವಾರಂಟ್ ಹಿಂಪಡೆದ ಕೋರ್ಟ್
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.