ಫೆ. 2ಕ್ಕೆ 8 ಸಿನಿಮಾ ಬಿಡುಗಡೆ


Team Udayavani, Jan 29, 2018, 11:39 AM IST

relese-feb.jpg

ಜನವರಿಯಲ್ಲಿ ಸಾಕಷ್ಟು ಸಿನಿಮಾಗಳು ಬಿಡುಗಡೆಯಾಗಲಿದ್ದು, ಹೊಸ ವರ್ಷದ ಆರಂಭದಲ್ಲೇ ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳಲಿದೆ ಎಂದೇ ನಂಬಲಾಗಿತ್ತು. ಅದಕ್ಕೆ ಸರಿಯಾಗಿ ಅನೇಕ ಚಿತ್ರಗಳು ಆರಂಭದಲ್ಲಿ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿದ್ದವು ಕೂಡಾ. ಆದರೆ, ಕೊನೆಯ ಕ್ಷಣದಲ್ಲಿ ಅವೆಲ್ಲವೂ ತಮ್ಮ ಬಿಡುಗಡೆಯನ್ನು ಮುಂದಕ್ಕೆ ಹಾಕಿವೆ. ಅದಕ್ಕೆ ಕಾರಣ ಹಲವು.

ಕೆಲವರಿಗೆ ಥಿಯೇಟರ್‌ ಸಮಸ್ಯೆ ಎದುರಾದರೆ, ಇನ್ನು ಕೆಲವರು ಪರಭಾಷೆಯ ದೊಡ್ಡ ಚಿತ್ರಗಳ ಮುಂದೆ ಪೈಪೋಟಿ ಅಸಾಧ್ಯ ಎಂದು ಮುಂದೆ ಹೋಗಿದ್ದರು. ಪರಿಣಾಮವಾಗಿ ಜನವರಿಯಲ್ಲಿ ಬಿಡುಗಡೆಯಾಗಿರುವ ಚಿತ್ರಗಳನ್ನು ಲೆಕ್ಕ ಹಾಕಿದರೆ ಸಿಗೋದು ಕೇವಲ 12 ಅಷ್ಟೇ. ಮೊದಲ ವಾರ 4, ಎರಡನೇ ವಾರ 2, ಮೂರನೇ ಹಾಗೂ ನಾಲ್ಕನೇ ವಾರ ತಲಾ 4  ಚಿತ್ರಗಳು ಬಿಡುಗಡೆಯಾಗಿವೆ.

ಹಾಗೆ ನೋಡಿದರೆ ಜನವರಿಯಲ್ಲಿ ಬಿರುಸಿನ ಬಿಡುಗಡೆ ಅಥವಾ ವಾರಕ್ಕೆ ಐದಾರು ಚಿತ್ರಗಳು ಬಿಡುಗಡೆಯಾಗಿದ್ದೇ ಇಲ್ಲ. ಆದರೆ, ಫೆಬ್ರವರಿ ಮೊದಲ ವಾರ ಇದಕ್ಕೆ ತದ್ವಿರುದ್ಧವಾಗಿದೆ. ಮೊದಲ ವಾರದಲ್ಲೇ ಸಿನಿಮಾ ಬಿಡುಗಡೆಯ ಭರಾಟೆ ಜೋರಾಗಿದೆ. ಫೆ. 2 ರಂದು ಬರೋಬ್ಬರಿ ಎಂಟು ಕನ್ನಡ ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. ಈ ಮೂಲಕ ಫೆಬ್ರವರಿಯ ಸಿನಿಹಬ್ಬ ನಡೆಯಲಿದೆ ಎಂದರೂ ತಪ್ಪಲ್ಲ. 

ಈಗಾಗಲೇ “ಜವ’, “ಮಂಜರಿ’, “ಮಳೆಗಾಲ’, “ದೇವ್ರಂಥ ಮನುಷ್ಯ’, “ಸಂಜೀವ’, “ಆ ಒಂದು ದಿನ’, “ರಾಜಾಸಿಂಹ’ ಹಾಗೂ “ಜಂತರ್‌ ಮಂತರ್‌’ ಚಿತ್ರಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. ಈ ಎಂಟು ಸಿನಿಮಾಗಳಲ್ಲಿ ಬೇರೆ ಬೇರೆ ವರ್ಗಗಳಿಗೆ ಸೇರಿದ ಚಿತ್ರಗಳಿರೋದು ವಿಶೇಷ.

ಅಭಯ್‌ ಚಂದ್ರ ನಿರ್ದೇಶನದ “ಜವ’ ಒಂದು ಹೊಸ ಪ್ರಯೋಗದ ಚಿತ್ರವಾದರೆ, ರೂಪಿಕಾ ಮುಖ್ಯಭೂಮಿಕೆಯಲ್ಲಿರುವ “ಮಂಜರಿ’ ಚಿತ್ರ ಹಾರರ್‌ ಸಿನಿಮಾವಾಗಿದೆ. ಇನ್ನು ಹೊಸಬರ “ಮಳೆಗಾಲ’ ಹಾಗೂ “ಸಂಜೀವ’ ಚಿತ್ರಗಳು ಪಕ್ಕಾ ಲವ್‌ಸ್ಟೋರಿಯಾಗಿವೆ. ಪ್ರಥಮ್‌ ನಟಿಸಿರುವ “ದೇವ್ರಂಥ ಮನುಷ್ಯ’ ಹಾಗೂ ಕಾಮಿಡಿ ಕಿಲಾಡಿಗಳ ತಂಡ ಸೇರಿಕೊಂಡು ಮಾಡಿರುವ “ಜಂತರ್‌ ಮಂತರ್‌’ ಚಿತ್ರಗಳು ಕಾಮಿಡಿ ಜಾನರ್‌ಗೆ ಸೇರಿವೆ.

ಅನಿರುದ್ಧ್ ಅವರ “ರಾಜಾಸಿಂಹ’ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಚಿತ್ರವಾದರೆ, “ಆ ಒಂದು ದಿನ’ ಚಿತ್ರದಲ್ಲಿ ಸಮಾಜದ ಪಿಡುಗುಗಳ ಬಗ್ಗೆ ಹೇಳಲಾಗಿದೆ. ಹಾಗಾಗಿ, ಎಂಟು ಸಿನಿಮಾಗಳಲ್ಲಿ ಎಲ್ಲಾ ವರ್ಗದ ಪ್ರೇಕ್ಷಕರಿಗೂ ಬೇಕಾದ ಸಿನಿಮಾಗಳಿರೋದಂತೂ ಸತ್ಯ. ಆದರೆ, ಹೇಗಿವೆ ಎಂಬುದನ್ನು ಮಾತ್ರ ಚಿತ್ರಮಂದಿರದಲ್ಲೇ ನೋಡಬೇಕು.

ಸಿನಿಟ್ರಾಫಿಕ್‌ಗೆ ಕಾರಣವೇನು?: ಸಹಜವಾಗಿಯೇ ಒಂದು ಪ್ರಶ್ನೆ ಬರುತ್ತದೆ. ಜನವರಿಯಲ್ಲಿ ಇಲ್ಲದ ಬಿಡುಗಡೆಯ ಭರಾಟೆ ಫೆಬ್ರವರಿ ಮೊದಲ ವಾರದಲ್ಲಿ ಯಾಕೆ ಎಂಬ ಪ್ರಶ್ನೆಗೆ ಉತ್ತರ ಸದ್ಯ ಯಾವುದೇ ದೊಡ್ಡ ಸಿನಿಮಾ ಇಲ್ಲದಿರೋದು. ಹೌದು, ಈಗಾಗಲೇ ಪರಭಾಷೆಯ ಒಂದಷ್ಟು ಚಿತ್ರಗಳು ಬಿಡುಗಡೆಯಾಗಿವೆ. ಹಿಂದಿಯ “ಪದ್ಮಾವತ್‌’ಗಾಗಿ ಅನೇಕರು ತಮ್ಮ ಚಿತ್ರಗಳ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದರು.

ಈಗ “ಪದ್ಮಾವತ್‌’ ಕೂಡಾ ಬಿಡುಗಡೆಯಾಗಿದೆ. ಕನ್ನಡದಲ್ಲೂ “ರಾಜು ಕನ್ನಡ ಮೀಡಿಯಂ’, “ಕನಕ’ ಸೇರಿದಂತೆ ಒಂದಷ್ಟು ಚಿತ್ರಗಳು ಬಿಡುಗಡೆಯಾಗಿವೆ. ಸದ್ಯ ದೊಡ್ಡ ಸ್ಟಾರ್‌ಗಳ ಯಾವುದೇ ಸಿನಿಮಾವಿಲ್ಲ ಎಂಬುದು ಒಂದು ಕಾರಣವಾದರೆ, ಮುಂದೆ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಸ್ಟಾರ್‌ ಸಿನಿಮಾವೊಂದು ಬಿಡುಗಡೆಯಾಗಲಿದೆ ಎಂಬುದು ಮತ್ತೂಂದು ಕಾರಣ. ಹೌದು, ಶಿವರಾಜಕುಮಾರ್‌ ಅವರ “ಟಗರು’ ಚಿತ್ರ ಸದ್ಯ ಬಹುನಿರೀಕ್ಷೆಯ ಸ್ಟಾರ್‌ ಸಿನಿಮಾ.

ಈಗಾಗಲೇ ಟ್ರೇಲರ್‌, ಹಾಡುಗಳ ಮೂಲಕ ಕ್ರೇಜ್‌ ಹುಟ್ಟಿಸಿರುವ ಈ ಚಿತ್ರ ಫೆ.23 ರಂದು ಬಿಡುಗಡೆಯಾಗುತ್ತದೆ ಎನ್ನಲಾಗಿದೆ. ಈ ಕಾರಣದಿಂದಲೂ ಆ ಚಿತ್ರ ಬರುವ ಮುನ್ನ ತಮ್ಮ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಜೊತೆಗೆ ಫೆ.9 ರಂದು “ಸಂಹಾರ’, “ಪ್ರೇಮ ಬರಹ’ ಸೇರಿದಂತೆ ಇನ್ನೂ ಕೆಲವು ಚಿತ್ರಗಳು ಬಿಡುಗಡೆಯಾಗಲಿವೆ. ಹಾಗಾಗಿ, ಹೊಸಬರು ಫೆಬ್ರವರಿ ಮೊದಲ ವಾರವನ್ನು ನಂಬಿಕೊಂಡು, ಬಿಡುಗಡೆ ಮಾಡುತ್ತಿದ್ದಾರೆ. 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.