Sandalwood: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ತನಿಖೆ ಆಗಬೇಕು: ಸಿಎಂಗೆ ಪತ್ರ
Team Udayavani, Sep 4, 2024, 1:02 PM IST
ಬೆಂಗಳೂರು: ಮಾಲಿವುಡ್(Mollywood) ಸಿನಿಮಾರಂಗದಲ್ಲಿ ಹೇಮಾ ಸಮಿತಿ ವರದಿ(Hema Committee Report) ಬಳಿಕ ದಿಗ್ಗಜ ಕಲಾವಿದರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬರುತ್ತಿದೆ. ಕೆಲ ಕಲಾವಿದರ ವಿರುದ್ಧ ದೂರು ಕೂಡ ದಾಖಲಾಗಿದೆ.
ಇತ್ತ ಮಾಲಿವುಡ್ ಬಳಿಕ ಟಾಲಿವುಡ್, ಕಾಲಿವುಡ್ ಹಾಗೂ ಸ್ಯಾಂಡಲ್ ವುಡ್ನ ಕೆಲ ಕಲಾವಿದರು ಕೂಡ ಹೇಮಾ ಸಮಿತಿಯಂತೆ ತಮ್ಮ ಚಿತ್ರರಂಗದಲ್ಲೂ ಒಂದು ಸಮಿತಿ ರಚನೆ ಆಗಬೇಕೆಂದು ಒಂದಾಗಿ ಧ್ವನಿಗೂಡಿಸಿದ್ದಾರೆ.
ಇದನ್ನೂ ಓದಿ: Renukaswamy Case: ಡಿ-ಗ್ಯಾಂಗ್ ವಿರುದ್ಧ 3,991 ಪುಟಗಳ ಆರೋಪ ಪಟ್ಟಿ ಕೋರ್ಟ್ಗೆ ಸಲ್ಲಿಕೆ
ಕನ್ನಡ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಒಂದು ಸಮಿತಿ ರಚನೆ ಆಗಬೇಕೆಂದು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ(ಫೈರ್) ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದೆ.
FIRE—Film Industry for Rights & Equality —has worked to build gender-equitable KFI since 2017
Today 153 gender justice advocates have signed on to FIRE’s demand that KA govt constitute a retired judge-led committee to bring out report on women’s issues & sexual harassment in KFI pic.twitter.com/4AufQWjsNo
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) September 4, 2024
ಏನಿದು ಫೈರ್?: ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ಮಹಿಳಾ ಕಲಾವಿದರು ತಮಗೆ ಲೈಂಗಿಕ ಕಿರುಕುಳ ಅಥವಾ ಯಾವುದಾದರೂ ಇತರೆ ಸಮಸ್ಯೆ ಕಾಣಿಸಿಕೊಂಡರೆ ದೂರು ನೀಡಲು ಹುಟ್ಟುಕೊಂಡ ಆಂತರಿಕ ದೂರು ಸಮಿತಿಯೇ ʼಫೈರ್ʼ. ಈ ಕಮಿಟಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ನಿರ್ದೇಶಕಿ ಕವಿತಾ ಲಂಕೇಶ್ ಸೇರಿದಂತೆ ಇತರೆ ಕಲಾವಿದರನ್ನು ಒಳಗೊಂಡಿದೆ.
ಬೇಡಿಕೆಗಳೇನು?:
ಮೊದಲ ಬೇಡಿಕೆ:
ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕನ್ನಡ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿ ವರದಿ ಮಾಡಲು ಸಮಿತಿ ರಚನೆ ಆಗಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದೆ.
ಎರಡನೇ ಬೇಡಿಕೆ: ಚಿತ್ರ್ಯೋದಮದಲ್ಲಿ ಎಲ್ಲಾ ಮಹಿಳೆಯರಿಗೂ ಸುರಕ್ಷಿತವಾದ ಮತ್ತು ನ್ಯಾಯಯುತವಾದ ವಾತಾವರಣವನ್ನು ಸೃಷ್ಟಿಸಲು ಅದಕ್ಕೆ ತಕ್ಕ ನಿಯಮಗಳನ್ನು ರಚಿಸಬೇಕೆಂದು ಬೇಡಿಕೆಯನ್ನಿಟ್ಟಿದೆ.
ಈ ಪತ್ರಕ್ಕೆ ಅಧ್ಯಕ್ಷೆ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ಹಿಡಿದು ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ ಆಚಾರ್, ಧನ್ಯಾ ರಾಮ್ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧ ಶ್ರೀನಾಥ್, ಕಿಶೋರ್, ನಿಶ್ವಿಕಾ ನಾಯ್ಡು, ವಿನಯ್ ರಾಜ್ಕುಮಾರ್, ಪವನ್ ಕುಮಾರ್, ನಟ ಸುದೀಪ್ ಸೇರಿದಂತೆ 153 ಮಂದಿ ಅರ್ಜಿಗೆ ಸಹಿ ಹಾಕುವ ಮೂಲಕ ಸಮಿತಿ ರಚನೆಗೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Democracy Day ವಿಶ್ವದಾಖಲೆಯ ಪುಟ ಸೇರಿದ ಬೃಹತ್ ಮಾನವ ಸರಪಳಿ
CM Siddaramaiah ವಿಚ್ಛಿದ್ರಕಾರಿ ಶಕ್ತಿಗಳ ನಾಶಕ್ಕೆ ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ
U.T. Khader; ಭಾರತದಲ್ಲಿ ಸಮಸ್ಯೆ ಆಧಾರಿತ ಚರ್ಚೆಗಳಾಗಲಿ
Yadagiri ಶಾಸಕರನ್ನೇಕೆ ಇನ್ನೂ ಬಂಧಿಸಿಲ್ಲ ? ಎನ್. ರವಿಕುಮಾರ್
CM ಸಿದ್ದರಾಮಯ್ಯ ಅವರಿದ್ದ ವೇದಿಕೆಗೆ ನುಗ್ಗಿದ ಯುವಕ:ಎಳೆದೊಯ್ದ ಭದ್ರತಾ ಸಿಬಂದಿ
MUST WATCH
ಹೊಸ ಸೇರ್ಪಡೆ
ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು
Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!
Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್ 17ರ ವರೆಗೆ ಸಿಬಿಐ ವಶಕ್ಕೆ
International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ
India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.