ಕೊನೆಗೂ ಸಿನಿಮಾ ಆಗಲಿದೆ ಜುಗಾರಿ ಕ್ರಾಸ್‌


Team Udayavani, Jun 16, 2018, 4:24 PM IST

jugari-cross.jpg

ಅಭಿಷೇಕ್‌ ಅಭಿನಯದ “ಅಮರ್‌’ ಚಿತ್ರದ ಮುಹೂರ್ತದ ಸಂದರ್ಭದಲ್ಲಿ ನಟ-ನಿರ್ಮಾಪಕ “ಕಡ್ಡಿಪುಡಿ’ ಚಂದ್ರು ಸದ್ಯದಲ್ಲೇ ಒಂದು ಚಿತ್ರ ನಿರ್ಮಿಸುವುದಾಗಿ ಹೇಳಿದ್ದರು. ಒಬ್ಬ ದೊಡ್ಡ ಬರಹಗಾರರ ಕಾದಂಬರಿಯ ರೈಟ್ಸ್‌ ಪಡೆಯುವುದಕ್ಕೆ ಓಡಾಡುತ್ತಿದ್ದು, ಸಿಕ್ಕ ನಂತರ ತಿಳಿಸುವುದಾಗಿ ಹೇಳಿದ್ದರು. ಅದರಂತೆ ಈಗ ಚಂದ್ರುಗೆ ಕಾದಂಬರಿಯ ಹಕ್ಕುಗಳು ಸಿಕ್ಕಿರುವುದಷ್ಟೇ ಅಲ್ಲ, ಮೂರ್‍ನಾಲ್ಕು ತಿಂಗಳ ಅಂತರದಲ್ಲಿ ಅವರು ಹೊಸದೊಂದು ಚಿತ್ರವನ್ನು ಶುರು ಮಾಡುವ ಯೋಚನೆಯಲ್ಲಿದ್ದಾರೆ.

ಆ ಕಾದಂಬರಿ ಮತ್ತು ಚಿತ್ರ ಯಾವುದು ಗೊತ್ತಾ? “ಜುಗಾರಿ ಕ್ರಾಸ್‌’. ಈ ಚಿತ್ರವನ್ನು ನಾಗಾಭರಣ ನಿರ್ದೇಶಿಸುತ್ತಿರುವುದು ಮತ್ತೂಂದು ವಿಶೇಷ. “ಜುಗಾರಿ ಕ್ರಾಸ್‌’ ಕಾದಂಬರಿಯನ್ನು ಚಿತ್ರ ಮಾಡುವುದಕ್ಕೆ ಇದುವರೆಗೂ ಹಲವರು ಪ್ರಯತ್ನಿಸಿದ್ದಾರೆ. ಹಲವು ವರ್ಷಗಳ ಹಿಂದೆ “ಕಾನೂರು ಹೆಗ್ಗಡತಿ’ ಚಿತ್ರವನ್ನು ನಿರ್ಮಿಸಿದ್ದ ನಾರಾಯಣ ಅವರು “ಜುಗಾರಿ ಕ್ರಾಸ್‌’ ಕಾದಂಬರಿಯನ್ನು ಚಿತ್ರವನ್ನಾಗಿ ಮಾಡುವ ತಮ್ಮ ಆಸೆ ವ್ಯಕ್ತಪಡಿಸಿದ್ದರು.

ಆ ನಂತರ ಶಿವರಾಜಕುಮಾರ್‌ ಅಭಿನಯದಲ್ಲಿ ಕೋಡ್ಲು ರಾಮಕೃಷ್ಣ ಅವರು “ಜುಗಾರಿ ಕ್ರಾಸ್‌’ ಚಿತ್ರವನ್ನು ಪ್ರಾರಂಭಿಸಿಯೇಬಿಡುತ್ತಾರೆ ಎಂಬ ಸುದ್ದಿಯಾಗಿತ್ತು. ಆದರೆ, ಕಾರಣಾಂತರಗಳಿಂದ ಆ ಚಿತ್ರಗಳು ಶುರುವಾಗಲೇ ಇಲ್ಲ.  ಆಗೊಮ್ಮೆ ಈಗೊಮ್ಮೆ “ಜುಗಾರಿ ಕ್ರಾಸ್‌’ ಚಿತ್ರವಾಗುವ, ಅದರ ಹಕ್ಕುಗಳು ಒಬ್ಬರ ಕೈಯಿಂದ ಇನ್ನೊಬ್ಬರಿಗೆ ಹಸ್ತಾಂತರವಾಗಿರುವ ಸುದ್ದಿಗಳು ಬರುತ್ತಲೇ ಇದ್ದವು.

ಈಗ ಕೊನೆಗೂ ಆ ಹಕ್ಕುಗಳನ್ನು “ಕಡ್ಡಿಪುಡಿ’ ಚಂದ್ರು ಪಡೆದು, ನಾಗಾಭರಣ ಅವರ ನಿರ್ದೇಶನದಲ್ಲಿ ಚಿತ್ರ ಮಾಡುತ್ತಿದ್ದಾರೆ. “ಜುಗಾರಿ ಕ್ರಾಸ್‌’ ಕಾದಂಬರಿಯನ್ನು ಚಿತ್ರ ಮಾಡಬೇಕು ಎಂಬ ಆಸೆ ಬಹಳ ದಿನಗಳಿಂದ ಇತ್ತು. ಈಗ ಆ ಕಾದಂಬರಿಯ ಹಕ್ಕುಗಳನ್ನು ಪಡೆದು ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನನ್ನ ಹಿಂದಿನ ಚಿತ್ರಗಳಂತೆ ಈ ಚಿತ್ರವನ್ನು ಸಂದೇಶ್‌ ನಾಗರಾಜ್‌ ಅವರು ಅರ್ಪಿಸಿದರೆ, ಜಯಣ್ಣ ಫಿಲಂಸ್‌ನವರು ವಿತರಿಸುತ್ತಿದ್ದಾರೆ’ ಎನ್ನುತ್ತಾರೆ ಚಂದ್ರು.

ಈ ಚಿತ್ರದಲ್ಲಿ ಒಬ್ಬ ಹೊಸ ಹೀರೋನನ್ನು ಪರಿಚಯಿಸುತ್ತಿರುವುದಾಗಿ ಚಂದ್ರು ಹೇಳುತ್ತಾರೆ. ಜೊತೆಗೆ ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ತಾರಾ ಮುಂತಾದವರು ಅಭಿನಯಿಸುತ್ತಿದ್ದಾರೆ. ಎಚ್‌.ಸಿ. ವೇಣು ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆಯಂತೆ. ಮಿಕ್ಕ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ಇನ್ನಷ್ಟೇ ಆಗಬೇಕಿದ್ದು, ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ ಎನ್ನುತ್ತಾರೆ ಚಂದ್ರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.