![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 13, 2022, 9:02 AM IST
ಮೇ ತಿಂಗಳ ಎರಡನೇ ಶುಕ್ರವಾರವಾದ ಇಂದು (ಮೇ. 13) ಕನ್ನಡದಲ್ಲಿ ನಾಲ್ಕು ಸಿನಿಮಾಗಳು ತೆರೆಗೆ ಬರುತ್ತಿವೆ. ಶಾನ್ವಿ ಶ್ರೀವಾಸ್ತವ್, ಸ್ಕಂದ ಅಶೋಕ್, ರಂಗಾಯಣ ರಘು, ಶ್ರುತಿ ಪ್ರಕಾಶ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ, ಹಿರಿಯ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ “ಕಸ್ತೂರಿ ಮಹಲ್’ ಇಂದು ರಾಜ್ಯಾದ್ಯಂತ ಸುಮಾರು 100ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆ ಕಾಣುತ್ತಿದೆ.
ಐಪಿಎಲ್ ಬೆಟ್ಟಿಂಗ್ ಕಥಾಹಂದರ ಹೊಂದಿರುವ ಕಾಮಿಡಿ-ಥ್ರಿಲ್ಲರ್ ಶೈಲಿಯ “ಕ್ರಿಟಿಕಲ್ ಕೀರ್ತನೆಗಳು’ ಚಿತ್ರ ಕೂಡ ಈ ವಾರ ರಾಜ್ಯಾದ್ಯಂತ ಸುಮಾರು 80ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆಯಾಗುತ್ತಿದೆ. ತಬಲನಾಣಿ, ಸುಚೇಂದ್ರ ಪ್ರಸಾದ್, ಅಪೂರ್ವಾ, ರಾಜೇಶ್ ನಟರಂಗ ಮೊದಲಾದ ಕಲಾವಿದರ ಅಭಿನಯ ವಿರುವ ಈ ಚಿತ್ರಕ್ಕೆ ಕುಮಾರ್ ನಿರ್ದೇಶನವಿದೆ.
ಸೃಜನ್ ಲೋಕೇಶ್, ಮೇಘನಾ ರಾಜ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರ ಇಂದು ತೆರೆ ಕಾಣುತ್ತಿದ್ದು, ಚಿತ್ರಕ್ಕೆ ಮಧುಚಂದ್ರ ನಿರ್ದೇಶನವಿದೆ.
ಇದರೊಂದಿಗೆ ಶಿವಕುಮಾರ್ ಜೇವರಗಿ ನಟಿಸಿ, ನಿರ್ಮಿಸಿ, ನಿರ್ದೇಶಿಸಿರುವ “ಅತ್ಯುತ್ತಮ’ ಚಿತ್ರ ರಾಜ್ಯಾದ್ಯಂತ ಸುಮಾರು 80ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆ ಯಾಗುತ್ತಿದೆ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.