ಗಣೇಶ್‌ ಈಗ ಚೌಕಿದಾರ

ಹಿರಿಯ ನಾಗರಿಕನ ಗೆಟಪ್‌ನಲ್ಲಿ ಗೋಲ್ಡನ್‌ ಹುಡುಗ

Team Udayavani, Jun 2, 2019, 3:00 AM IST

Ganesh

“ಚೌಕಿದಾರ…’ ಈ ಹೆಸರು ಕೇಳಿದೊಡನೆ ಥಟ್ಟನೆ ನೆನಪಾಗೋದೇ ಪ್ರಧಾನ ಮಂತ್ರಿ ಮೋದಿ ಅವರು. ಈ “ಚೌಕಿದಾರ’ ಇಡೀ ದೇಶ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾದ ಪದ. “ಚೌಕಿದಾರ’ ಈಗ ಕನ್ನಡ ಚಿತ್ರದ ಶೀರ್ಷಿಕೆಯಾಗಿದೆ. ಹೌದು, ಈಗಾಗಲೇ ಚೇಂಬರ್‌ನಲ್ಲಿ ಚಿತ್ರದ ಶೀರ್ಷಿಕೆ ನೋಂದಣಿ ಆಗಿದ್ದು, ಈ ಚಿತ್ರವನ್ನು ಚಂದ್ರಶೇಖರ್‌ ಬಂಡಿಯಪ್ಪ ನಿರ್ದೇಶಿಸುತ್ತಿದ್ದಾರೆ.

ಎಲ್ಲಾ ಸರಿ, “ಚೌಕಿದಾರ’ ಯಾರು? ಈ ಪ್ರಶ್ನೆಗೆ ಉತ್ತರ ಗಣೇಶ್‌ ಎನ್ನುತ್ತಾರೆ ನಿರ್ದೇಶಕರು. ಆ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಚಂದ್ರಶೇಖರ್‌ ಬಂಡಿಯಪ್ಪ, “ಚೌಕಿದಾರ’ ಸಿನಿಮಾ ಕುರಿತಂತೆ ಗಣೇಶ್‌ ಅವರೊಂದಿಗೆ ಕಳೆದ ನಾಲ್ಕು ತಿಂಗಳಿನಿಂದಲೂ ಕಥೆ ಮತ್ತು ಪಾತ್ರ ಕುರಿತು ಚರ್ಚಿಸಿದ ನಂತರ ಇಷ್ಟಪಟ್ಟು, ಅವರು ಸಿನಿಮಾ ಮಾಡಲು ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ.

ಇನ್ನೊಂದು ಸುತ್ತಿನ ಅಂತಿಮ ಮಾತುಕತೆ ನಡೆದರೆ, ಚಿತ್ರ ಯಾವಾಗ, ಏನು ಎಂಬಿತ್ಯಾದಿ ಮಾಹಿತಿಗಳು ಸ್ಪಷ್ಟವಾಗಲಿವೆ. ಚಿತ್ರದ ಶೀರ್ಷಿಕೆಯನ್ನು ಮೂರು ತಿಂಗಳ ಹಿಂದೆಯೇ ನೋಂದಣಿ ಮಾಡಿಸಲಾಗಿತ್ತು’ ಎನ್ನುತ್ತಾರೆ ಬಂಡಿಯಪ್ಪ. “ಚೌಕಿದಾರ್‌’ನಲ್ಲಿ ಗಣೇಶ್‌ ಅವರು ಸುಮಾರು 55 ವರ್ಷದ ಹಿರಿಯ ನಾಗರಿಕನ ಪಾತ್ರ ನಿರ್ವಹಿಸುತ್ತಿದ್ದಾರೆ. ಅದೊಂದು ಕ್ಲಾಸ್‌ ಆಗಿರುವ ಪಾತ್ರ.

ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ವಿಷಯಗಳು ಚಿತ್ರದಲ್ಲಿರಲಿವೆ. ರಾಜಕೀಯ ಅಂಶಗಳೂ ಚಿತ್ರದ ಹೈಲೈಟ್‌ ಆಗಿರಲಿವೆ. ಚಿತ್ರದ ಕಥೆಗೂ “ಚೌಕಿದಾರ’ ಶೀರ್ಷಿಕೆಗೂ ಸಂಬಂಧವಿದೆ. ಇದುವರೆಗೆ ಲವ್ವರ್‌ ಬಾಯ್‌ ಆಗಿದ್ದ ಗಣೇಶ್‌ ಅವರಿಗಿಲ್ಲಿ ಬೇರೆ ರೀತಿಯದ್ದೇ ಪಾತ್ರವಿದೆ. ಎಮೋಷನ್ಸ್‌ ಅಂಶಗಳಿಗೆ ಒತ್ತು ಕೊಡಲಾಗಿದೆ.

“ಇಂಡಿಯನ್‌’ ಸಿನಿಮಾಗೆ ಕಮಲಹಾಸನ್‌ಗೆ ಮೇಕಪ್‌ ಮಾಡಿದ್ದ ಕಲಾವಿದರು ಇಲ್ಲಿ ಗಣೇಶ್‌ ಅವರಿಗೆ ಮೇಕಪ್‌ ಮಾಡಲಿದ್ದಾರೆ. ಪ್ಯಾನ್‌ಫೇರ್‌ ಎಂಟರ್‌ಟೈನ್‌ಮೆಂಟ್ಸ್‌ ಸಂಸ್ಥೆ ಈ ಚಿತ್ರ ನಿರ್ಮಿಸುತ್ತಿದೆ. ಧರ್ಮವಿಶ್‌ ಸಂಗೀತ, ಸಿದ್ದೇಗೌಡ ಛಾಯಾಗ್ರಹಣ ಇರಲಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ “ಚೌಕಿದಾರ’ನಿಗೆ ಆಗಸ್ಟ್‌ನಲ್ಲಿ ಚಿತ್ರೀಕರಣ ಶುರುವಾಗಲಿದೆ ಎಂಬುದು ನಿರ್ದೇಶಕರ ಹೇಳಿಕೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

mantrika kannada movie

Kannada Cinema; ಮಾಂತ್ರಿಕ ಆಟ ಶುರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.