ವೀಕೆಂಡ್‌ ಲಾಕ್‌ ಡೌನ್‌ ಗೆ ಮುಕ್ತಿ: ಹೊಸಬರ ಸಿನ್ಮಾ ರಿಲೀಸ್‌ ಗೆ ಇದು ಸಕಾಲ


Team Udayavani, Jan 22, 2022, 11:57 AM IST

khasagi putagalu

ಜನಾಕ್ರೋಶಕ್ಕೆ ಮಣಿದ ಸರ್ಕಾರ ರಾಜ್ಯಕ್ಕೆ ವಿಧಿಸಿದ್ದ ವೀಕೆಂಡ್‌ ಲಾಕ್‌ಡೌನ್‌ ಅನ್ನು ತೆರವುಗೊಳಿಸಿದೆ. ಈ ಮೂಲಕ ಬೇರೆ ಬೇರೆ ಕ್ಷೇತ್ರಗಳ ಮಂದಿಯ ಮೊಗದಲ್ಲಿ ನಗು ಮೂಡಿದೆ. ಅದರಲ್ಲಿ ಚಿತ್ರರಂಗ ಕೂಡಾ ಒಂದು. ಸಾಮಾನ್ಯವಾಗಿ ಸಿನಿಮಾಗಳಿಗೆ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಬರೋದು ವೀಕೆಂಡ್‌ನಲ್ಲಿ. ಆದರೆ, ವೀಕೆಂಡ್‌ನಲ್ಲೇ ಲಾಕ್‌ಡೌನ್‌ ಆಗಿರುವಾಗ ಸಿನಿಮಾ ಯಾಕೆ ಬಿಡುಗಡೆ ಮಾಡಬೇಕು ಎಂಬ ನಿರ್ಧಾರಕ್ಕೆ ಸಿನಿಮಾ ಮಂದಿ ಬಂದಿದ್ದರು. ಅದೇ ಕಾರಣದಿಂದ ಹೊಸಬರು ಕೂಡಾ ತಮ್ಮ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದರು. ಈಗ ಹೊಸಬರು ತಮ್ಮ ಸಿನಿಮಾ ಬಿಡುಗಡೆಗೆ ತಯಾರಿ ಮಾಡಿಕೊಳ್ಳಬಹುದು. ಹಾಗೆ ನೋಡಿದರೆ ಹೊಸಬರ ಸಿನಿಮಾ ಬಿಡುಗಡೆಗೆ ಇದು ಸಕಾಲ.

ಸದ್ಯ ಚಿತ್ರಮಂದಿರಗಳಲ್ಲಿ ಶೇ 50 ಸೀಟು ಭರ್ತಿಗೆ ಅವಕಾಶವಿದೆ. ಶೇ 50 ಅನ್ನೋದು ಅನೇಕರಿಗೆ ಅಸಮಾಧಾನವಾಗಿರಬಹುದು. ಆದರೆ, ವಾಸ್ತವವಾಗಿ ಹೊಸಬರ ಸಿನಿಮಾಗಳಿಗೆ ಶೇ 50 ಸೀಟು ಭರ್ತಿಯಿಂದ ಹೆಚ್ಚಿನ ತೊಂದರೆಯಾಗಲ್ಲ. ಸಾಮಾನ್ಯವಾಗಿ ಸ್ಟಾರ್‌ ಸಿನಿಮಾಗಳು ಬಿಡುಗಡೆಯಾದಾಗ ಒಂದು ವಾರ ಹೌಸ್‌ಫ‌ುಲ್‌ ಪ್ರದರ್ಶನವಾಗುತ್ತದೆ. ಆ ನಂತರ ವೀಕೆಂಡ್‌ ಬಿಟ್ಟು ಮಿಕ್ಕ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನ ಕಾಣೋದು ಕಡಿಮೆ. ಅದರಲ್ಲೂ ಹೊಸಬರ ಸಿನಿಮಾ ಹೌಸ್‌ಫ‌ುಲ್‌ ಪ್ರದರ್ಶನ ಕಾಣಬೇಕಾದರೆ, ಆ ಸಿನಿಮಾ ಬಿಡುಗಡೆಯಾಗಿ, ಅದರ ಬೆನ್ನಿಗೆ ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿಬರಬೇಕು. ಸಿನಿಮಾ ಚೆನ್ನಾಗಿದೆ ಎಂಬ ಮಾತು ಹರಿದಾಡಿದಾಗ ಸಹಜವಾಗಿಯೇ ಜನರಿಗೆ ಕುತೂಹಲ ಹೆಚ್ಚಾಗಿ ಸಿನಿಮಾ ಮಂದಿರದತ್ತ ಹೋಗುತ್ತಾರೆ. ಹಾಗಾಗಿ, ಶೇ 50 ಹೊಸಬರಿಗೆ ತೊಂದರೆಯಾಗಲ್ಲ.

ಅದಕ್ಕೆ ಒಳ್ಳೆಯ ಉದಾಹರಣೆ ಎಂದರೆ, “ಆ್ಯಕ್ಟ್ 1978′ ಚಿತ್ರ. ಮೊದಲ ಲಾಕ್‌ಡೌನ್‌ ತೆರವುಗೊಂಡು ಚಿತ್ರಮಂದಿರಗಳಲ್ಲಿ ಶೇ 50ಕ್ಕೆ ಅನುಮತಿ ಸಿಕ್ಕ ಬಳಿಕ ಬಿಡುಗಡೆಯಾದ ಈ ಚಿತ್ರ ಯಶಸ್ವಿಯಾಯಿತು. ಅದಕ್ಕೆ ಕಾರಣ ಆ ಸಿನಿಮಾದ ಕಥೆ ಹಾಗೂ ಚಿತ್ರಕ್ಕೆ ಸಿಕ್ಕ ಪ್ರಚಾರ. ಈ ಎಲ್ಲಾ ಕಾರಣಗಳಿಂದಾಗಿ ಜನ ಚಿತ್ರಮಂದಿರಕ್ಕೆ ಬಂದರು. ಹಾಗೆ ನೋಡಿದರೆ, ಆಗ ಕೊರೊನಾ ಭಯ ಜನರಲ್ಲಿ ಹೆಚ್ಚಿದ್ದ ಸಮಯ.

ಇದನ್ನೂ ಓದಿ:ನಟಿ Riya Suman ಹಾಟ್ & ಬ್ಯೂಟಿ ಲುಕ್ಸ್

ಆದರೆ, ಈಗ ಜನರಲ್ಲಿ ಕೊರೊನಾ ಭಯ ಕಡಿಮೆಯಾಗಿದೆ. ಮೂರನೇ ಅಲೆಯ ತೀವ್ರತೆ ಕೂಡಾ ಹೆಚ್ಚಿಲ್ಲ. ಸಾರಿಗೆ, ಹೋಟೆಲ್‌, ಮಾರುಕಟ್ಟೆ … ಎಲ್ಲಾ ಕಡೆ ಜನ ತಮ್ಮ ಮುನ್ನೆಚ್ಚರಿಕೆಯೊಂದಿಗೆ ಓಡಾಡುತ್ತಿದ್ದಾರೆ. ಸಿನಿಮಾ ಬಿಡುಗಡೆಯಾಗಿ ಒಳ್ಳೆಯ ಮಾತುಗಳು ಕೇಳಿಬಂದರೆ ಈ ಬಾರಿಯೂ ಜನ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಲು ಹಿಂದೇಟು ಹಾಕುವುದಿಲ್ಲ. ಹಾಗಾಗಿ, ಹೊಸಬರಿಗೆ ತಮ್ಮ ಸಿನಿಮಾ ಬಿಡುಗಡೆ ಮಾಡಲು ಇದು ಸಕಾಲ.

ಪರಭಾಷಾ ಸಿನಿಮಾಗಳು ಕಾಯುತ್ತಿವೆ….

ಕನ್ನಡದ ಸ್ಟಾರ್‌ ನಟರ ಸಿನಿಮಾಗಳ ಜೊತೆ ಪರಭಾಷೆಯ ಬಿಗ್‌ ಬಜೆಟ್‌ ಸಿನಿಮಾಗಳು ಕೂಡಾ ದೊಡ್ಡ ಮಟ್ಟದಲ್ಲಿ ರಿಲೀಸ್‌ ಆಗಲಿವೆ. “ಆರ್‌ಆರ್‌ಆರ್‌’, “ರಾಧೆ ಶ್ಯಾಮ್‌’ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದವು. ಆ ಚಿತ್ರಗಳು ಶೇ 100 ಸೀಟು ಭರ್ತಿಗೆ ಅವಕಾಶ ಸಿಕ್ಕ ಕೂಡಲೇ ಬರಲಿವೆ. ಸಹಜವಾಗಿಯೇ ಬೇರೆ ಭಾಷೆಯ ಸಿನಿಮಾಗಳು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್‌ ಆಗುವುದರಿಂದ ಮತ್ತೆ ಹೊಸಬರಿಗೆ ಥಿಯೇಟರ್‌ ಸಮಸ್ಯೆ ಕಾಡಲಿದೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.