ಸೆಲ್ಫಿಆಪತ್ತುಗಳ ಬಗ್ಗೆ ಗ್ರೂಫಿ ಸಂದೇಶ!


Team Udayavani, Aug 17, 2021, 1:07 PM IST

ಸೆಲ್ಫಿಆಪತ್ತುಗಳ ಬಗ್ಗೆ ಗ್ರೂಫಿ ಸಂದೇಶ!

ಇಂದಿನ ದಿನಗಳಲ್ಲಿ ಬಹುತೇಕರು ಸ್ಮಾರ್ಟ್‌ ಪೋನ್‌ ಮೇಲೆ ಅವಲಂಬಿತರಾಗಿರುತ್ತಾರೆ. ಆದರೆ ಅದೆಷ್ಟೋ ಜನರಿಗೆ ಅದರ ಅನಾನೂಕುಲತೆ, ಆಪತ್ತುಗಳ ಬಗ್ಗೆ ಗೊತ್ತಿರುವುದಿಲ್ಲ. ಅದರಲ್ಲೂ ಸ್ಮಾರ್ಟ್‌ಪೋನ್‌ಗಳ ಸೆಲ್ಫಿಕ್ರೇಜ್‌ ಅಂತೂ ಪ್ರತಿವರ್ಷ ಅದೆಷ್ಟೋ ಜೀವಗಳನ್ನ ಬಲಿಪಡೆಯುತ್ತಿದೆ. ಈಗ ಇದೇ ವಿಷಯವನ್ನು ಇಟ್ಟುಕೊಂಡು ಇಲ್ಲೊಂದು ಹೊಸಬರ ತಂಡ “ಗ್ರೂಫಿ’ ಹೆಸರಿನ ಸಿನಿಮಾದಲ್ಲಿ ಅದನ್ನ ತೆರೆಮೇಲೆ ಹೇಳಲು ಹೊರಟಿದೆ.

ಹೌದು, ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ ಜೊತೆ ಎಳೆಂಟು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿರುವ ಡಿ. ರವಿ ಅರ್ಜುನ್‌ ಇಂಥದ್ದೊಂದು ಸಬ್ಜೆಕ್ಟ್ ಸಿನಿಮಾ ಟಚ್‌ಕೊಟ್ಟು ಬಿಗ್‌ ಸ್ಕ್ರೀನ್‌ ಮೇಲೆ ತರುತ್ತಿದ್ದಾರೆ.

ಈ ಬಗ್ಗೆ ಮಾತನಾಡುವ ನಿರ್ದೇಶಕ ಡಿ. ರವಿ ಅರ್ಜುನ್‌, “ಕೆಲ ವರ್ಷಗಳ ಹಿಂದೆ ಮಂಡ್ಯದಲ್ಲಿ ನಡೆದ ಮೆಡಿಕಲ್‌ ಸ್ಟುಡೆಂಟ್ಸ್‌ ಕುರಿತ ನೈಜ ಘಟನೆಯನ್ನ ಆಧಾರವಾಗಿಟ್ಟುಕೊಂಡು, ಅದನ್ನ ಸಿನಿಮ್ಯಾಟಿಕ್‌ ಸ್ಟೈಲ್‌ನಲ್ಲಿ ಈ ಸಿನಿಮಾದಲ್ಲಿ ಸ್ಕ್ರೀನ್‌ ಮೇಲೆ ತರುತ್ತಿದ್ದೇವೆ. ಇದೊಂದು ಔಟ್‌ ಆ್ಯಂಡ್‌ ಔಟ್‌ ಯೂಥ್‌ ಫ‌ುಲ್‌ ಸಬ್ಜೆಕ್ಟ್ ಸಿನಿಮಾ.ಕನ್ನಡದಲ್ಲಿ ಇಂಥದ್ದೊಂದು ಸಬ್ಜೆಕ್ಟ್ ಸಿನಿಮಾ ಬಂದಿಲ್ಲ. ಸೆಲ್ಫಿ ಡೆಸಾಸ್ಟರ್‌ (ಸೆಲ್ಫಿಕ್ರೇಜ್‌) ನಮ್ಮ ಯುವಕರನ್ನು ಎಷ್ಟರ ಮಟ್ಟಿಗೆ ಹಾಳು ಮಾಡುತ್ತದೆ ಅನ್ನೋದರ ಸುತ್ತ ಇಡೀ ಸಿನಿಮಾದ ಕಥೆ ನಡೆಯುತ್ತದೆ. “ಸೆಲ್ಫಿ’ ಆಪತ್ತುಗಳ ಬಗ್ಗೆ “ಗ್ರೂಫಿ’ಯಲ್ಲಿ ಸಂದೇಶವಿದೆ. ಸಸ್ಪೆನ್ಸ್‌ – ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ. ಒಬ್ಬರೆ ಪೋಟೋ ತೆಗೆದುಕೊಂಡರೆ ಸೆಲ್ಫಿ. ಅದೇ ಪೋಟೋವನ್ನ ಗುಂಪಾಗಿ ತೆಗೆದುಕೊಂಡರೆ ಅದು “ಗ್ರೂಫಿ’ ಎನ್ನುತ್ತಾರೆ. ಕಥೆಗೆ ಹೊಂದಿಕೆ ಆಗುತ್ತದೆ ಎಂಬ ಕಾರಣಕ್ಕೆ “ಗ್ರೂಫಿ’ ಟೈಟಲ್‌ ಇಟ್ಟುಕೊಂಡಿದ್ದೇವೆ’ ಎಂದು ವಿವರಣೆ ಕೊಡುತ್ತಾರೆ.

“ಲಿಯಾ ಗ್ಲೋಬಲ್‌ ಮೀಡಿಯಾ’ ಬ್ಯಾನರ್‌ ನಲ್ಲಿ ಕೆ.ಜಿ ಸ್ವಾಮಿ ನಿರ್ಮಿಸಿದ “ಗ್ರೂಫಿ’ ಚಿತ್ರದಲ್ಲಿ ಹೊಸ ಪ್ರತಿಭೆಗಳಾದ ಆರ್ಯನ್‌, ಪದ್ಮಶ್ರೀ ಜೈನ್‌, ಗಗನ್‌, ಉಮಾ ಮಯೂರಿ, ಸಂದ್ಯಾ, ಪ್ರಜ್ವಲ್‌, ಶ್ರೀಧರ್‌, ಹನುಮಂತೇಗೌಡ, ಸಂಗೀತಾ, ರಘು ಪಾಂಡೇಶ್ವರ್‌, ರಜನಿಕಾಂತ್‌ ಮೊದಲಾದವರು ವಿವಿಧ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಗ್ರೂಫಿ’ ಹಾಡುಗಳಿಗೆ ವಿಜೇತ್‌ಕೃಷ್ಣ ಸಂಗೀತ ಸಂಯೋಜನೆಯಿದ್ದು, ಅಜಯ ಲಕ್ಷ್ಮೀಕಾಂತ ಛಾಯಾಗ್ರಹಣ, ವಿಜೇತ್‌ ಚಂದ್ರ ಸಂಕಲನವಿದೆ.

ಪ್ರಕೃತಿಯ ಜೊತೆ ಇಡೀ ಸಿನಿಮಾದ ಕಥೆ ಸಾಗಲಿದ್ದು, ಮಡಿಕೇರಿ, ಸೋಮವಾರ ಪೇಟೆ, ಹೊನ್ನಾವರದ ಸುಂದರ ತಾಣಗಳಲ್ಲಿ ಚಿತ್ರದ ಶೂಟಿಂಗ್‌ ಮಾಡಲಾಗಿದೆ. ಚಿತ್ರದ ಆರು ಪ್ರಮುಖ ಪಾತ್ರಗಳು ಒಂದು ಕಡೆ ಸೇರಿದಾಗ ನಡೆಯುವ ಘಟನೆ ಸಿನಿಮಾದ ಹೈಲೈಟ್‌ ಎನ್ನುತ್ತದೆ ಚಿತ್ರತಂಡ.

ಇತ್ತೀಚೆಗಷ್ಟೇ “ಗ್ರೂಫಿ’ ಟ್ರೇಲರ್‌ ಬಿಡುಗಡೆ ಮಾಡಿ ಭರ್ಜರಿಯಾಗಿ ಪ್ರಚಾರ ಕಾರ್ಯದಲ್ಲಿರುವ ಚಿತ್ರತಂಡ, ಇದೇ ಆ.20ರಂದು “ಗ್ರೂಫಿ’ಯನ್ನು ತೆರೆಗೆ ತರಲು ಪ್ಲಾನ್‌ ಹಾಕಿಕೊಂಡಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.