‘ಕಾಗೆಮೊಟ್ಟೆ’ ಮೇಲೆ ಗರಿಗೆದರಿದ ನಿರೀಕ್ಷೆ: ಅ.1ಕ್ಕೆ ಚಿತ್ರ ತೆರೆಗೆ


Team Udayavani, Sep 30, 2021, 10:49 AM IST

‘ಕಾಗೆಮೊಟ್ಟೆ’ ಮೇಲೆ ಗರಿಗೆದರಿದ ನಿರೀಕ್ಷೆ: ಅ.1ಕ್ಕೆ ಚಿತ್ರ ತೆರೆಗೆ

ನವರಸ ನಾಯಕ ಜಗ್ಗೇಶ್‌ ಪುತ್ರ ಗುರುರಾಜ್‌ ಅಭಿನಯಿಸಿರುವ “ಕಾಗೆ ಮೊಟ್ಟೆ’ ಚಿತ್ರ ಇದೇ ಶುಕ್ರವಾರ (ಅ. 1)ಕ್ಕೆ ತೆರೆಗೆ ಬರುತ್ತಿದೆ. ಕಳೆದ ಕೆಲದಿನಗಳಿಂದ ಚಿತ್ರದ ಪ್ರಚಾರ ಕಾರ್ಯದಲ್ಲಿರುವ ಚಿತ್ರತಂಡ ಇತ್ತೀಚೆಗಷ್ಟೇ “ಕಾಗೆ ಮೊಟ್ಟೆ’ ಟ್ರೇಲರ್‌ ಬಿಡುಗಡೆ ಮಾಡಿದ್ದು, ಟ್ರೇಲರ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ನೋಡು ಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮೂವರು ಹಳ್ಳಿ ಯುವಕರು ಬೆಂಗಳೂರಿಗೆ ಬಂದು ಇಲ್ಲಿನ ಭೂಗತ ಲೋಕವನ್ನು ಪ್ರವೇಶಿಸಿ ಅಲ್ಲಿನ ಭೂಗತ ಪಾತಕಿಗಳ ಸುತ್ತ ಸೆಣೆಸಾಡುವ ಘಟನೆಗಳ ಸುತ್ತ “ಕಾಗೆ ಮೊಟ್ಟೆ’ ಚಿತ್ರ ಸಾಗುತ್ತದೆ. ಚಂದ್ರಹಾಸ “ಕಾಗೆ ಮೊಟ್ಟೆ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ಗುರುರಾಜ್‌ ಜಗ್ಗೇಶ್‌ ಅವರೊಂದಿಗೆ ಹೇಮಂತ್‌ ರೆಡ್ಡಿ ಮತ್ತು ಮಾದೇಶ್‌ ಸಹ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ ತನುಜಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಸೌಜನ್ಯಾ, ಶರತ್‌ ಲೋಹಿತಾಶ್ವ, ಪೊನ್ನಂ ಬಲಂ, ರಾಜ್‌ ಬಹದ್ದೂರ್‌ ಮೊದಲಾದವರು “ಕಾಗೆ ಮೊಟ್ಟೆ’ಯ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ:ಹಿಂದೂಗಳೇ ಎಲ್ಲೋಗಿದ್ದೀರಾ? ವಿಜಯಲಕ್ಷ್ಮಿ ಕಷ್ಟಕ್ಕೆ ಸ್ಪಂದಿಸದವರ ವಿರುದ್ಧ ಜಗದೀಶ್ ವಾಗ್ದಾಳಿ

ಚಿತ್ರಕ್ಕೆ ಡಾ. ವಿ ನಾಗೇಂದ್ರ ಪ್ರಸಾದ್‌ ಸಂಭಾಷಣೆ ಬರೆದಿದ್ದು, ಕವಿರಾಜ್‌ ಹಾಗೂ ಜಯಂತ್‌ ಕಾಯ್ಕಿಣಿ ಹಾಡುಗಳನ್ನು ಬರೆದಿದ್ದಾರೆ. ಶ್ರೀವತ್ಸ ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಪಿ.ಎಲ್. ರವಿ ಛಾಯಾಗ್ರಹಣವಿದೆ. ಕೊಳ್ಳೇಗಾಲ, ಚಾಮ ರಾಜನಗರ ಅಲ್ಲದೆ ಬೆಂಗಳೂರಿನ ಹಲವಾರು ಸ್ಲಂಗಳಲ್ಲಿ ಚಿತ್ರದ ಶೂಟಿಂಗ್‌ ನಡೆಸಲಾಗಿದೆ.

ಕೋವಿಡ್‌ ಎರಡನೇ ಲಾಕ್‌ಡೌನ್‌ಗೂ ಮೊದಲೇ “ಕಾಗೆ ಮೊಟ್ಟೆ’ ಸಿನಿಮಾದ ಎಲ್ಲ ಕೆಲಸಗಳೂ ಮುಗಿದಿದ್ದು, ಸಿನಿಮಾ ರಿಲೀಸಿಗೆ ಸಿದ್ಧವಾಗಿತ್ತು. ಈಗ ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದರಿಂದ, ಇದೇ ಅಕ್ಟೋಬರ್‌ ಮೊದಲವಾರ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಯೋಚನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.