
Kannada Cinema; ‘ಪ್ರೇತ’- ಹರೀಶ್ ರಾಜ್ ಸಿನಿಮಾ ರಿಲೀಸ್ ಗೆ ರೆಡಿ
Team Udayavani, Dec 8, 2023, 3:43 PM IST

ಕನ್ನಡ ಚಿತ್ರರಂಗದ “ಕಲಾಕಾರ್’ ಖ್ಯಾತಿಯ ನಟ ಕಂ ನಿರ್ದೇಶಕ ಹರೀಶ್ ರಾಜ್ ಶೀಘ್ರದಲ್ಲಿಯೇ “ಪ್ರೇತ’ದ ಜೊತೆಗೆ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಹೌದು, ಹರೀಶ್ ರಾಜ್ ನಾಯಕನಾಗಿ ನಟಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಔಟ್ ಆ್ಯಂಡ್ ಔಟ್ ಹಾರರ್-ಥ್ರಿಲ್ಲರ್ “ಪ್ರೇತ’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಹೊಸ ವರ್ಷದ ಆರಂಭದಲ್ಲಿಯೇ ಥಿಯೇಟರ್ನಲ್ಲಿ “ಪ್ರೇತ’ ಪ್ರೇಕ್ಷಕರನ್ನು ಬಿಚ್ಚಿಬೀಳಿಸುವ ಯೋಜನೆ ಹಾಕಿಕೊಂಡಿದೆ.
“ಪ್ರೇತ’ ಸಿನಿಮಾದಲ್ಲಿ ಹರೀಶ್ ರಾಜ್ ಅವರೊಂದಿಗೆ ಅಮೂಲ್ಯ ಭಾರದ್ವಾಜ್, ಅಹಿರಾ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಿ. ಎಂ. ವೆಂಕಟೇಶ್, ಅಮಿತ್ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಹರೀಶ್ ರಾಜ್ ಪ್ರೊಡಕ್ಷನ್’ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ “ಪ್ರೇತ’ ಸಿನಿಮಾ ಏಕಕಾಲಕ್ಕೆ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿಬರುತ್ತಿದೆ. ಮಡಿಕೇರಿ, ವಿರಾಜಪೇಟೆ, ಮೂಡಿಗೆರೆ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೇ “ಪ್ರೇತ’ ಸಿನಿಮಾದ “ದೂರದ ಊರಿಗೆ…’ ಎಂಬ ಗೀತೆ ಬಿಡುಗಡೆಯಾಗಿದ್ದು, ಈ ಹಾಡಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಗೀತೆಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದು, ನವೀನ್ ಸಜ್ಜು ಧ್ವನಿಯಾಗಿದ್ದು, ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡಿನಲ್ಲಿ ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಜೋಡಿಯಾಗಿ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ಸದ್ಯ ಫಸ್ಟ್ ಕಾಪಿಯೊಂದಿಗೆ ಹೊರಬಂದಿರುವ “ಪ್ರೇತ’ ಸಿನಿಮಾವನ್ನು ಇತ್ತೀಚೆಗಷ್ಟೇ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ, ಸಿನಿಮಾಕ್ಕೆ ಯಾವುದೇ ಕಟ್ಸ್, ಮ್ಯೂಟ್ಸ್ ಇಲ್ಲದೆ “ಯು/ಎ’ ಸರ್ಟಿಫಿಕೆಟ್ ನೀಡಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಇದೀಗ ನಿಧಾನವಾಗಿ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಇದೇ ಡಿಸೆಂಬರ್ ಅಂತ್ಯದೊಳಗೆ “ಪ್ರೇತ’ ಟ್ರೇಲರ್ ಬಿಡುಗಡೆಯಾಗಲಿದ್ದು, ಜನವರಿ ಅಂತ್ಯದೊಳಗೆ “ಪ್ರೇತ’ ದರ್ಶನ ಗ್ಯಾರೆಂಟಿ ಎನ್ನುವುದು ಚಿತ್ರತಂಡದ ಮಾತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.