![rain 21](https://www.udayavani.com/wp-content/uploads/2024/07/rain-21-415x263.jpg)
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Team Udayavani, Apr 23, 2024, 11:44 AM IST
![Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು](https://www.udayavani.com/wp-content/uploads/2024/04/7-17-620x372.jpg)
ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ನಟಿ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ನಡೆಸಿದ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.
ನಟಿ ಹರ್ಷಿಕಾ ಪತಿ ಭುವನ್ ಪೊನಣ್ಣ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಿಸಿರುವ ಪೊಲೀಸರು ಆರೋಪಿಗಳಿ ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಭುವನ್ ದಂಪತಿ ಏ.2ರಂದು ಪುಲಕೇಶಿನಗರದ ಮಾಸ್ಕ್ ರಸ್ತೆಯಲ್ಲಿರುವ ಹೋಟೆಲ್ಗೆ ಕುಟುಂಬ ಸಮೇತ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ದಂಪತಿ ಪಾರ್ಕಿಂಗ್ನಲ್ಲಿದ್ದ ಕಾರನ್ನು ಹಿಂತೆಗೆದುಕೊಳ್ಳುವಾಗ ಕಿಡಿಗೇಡಿಯೊಬ್ಬ ನಿಮ್ಮ ಕಾರು ದೊಡ್ಡದಾಗಿದೆ. ಏಕಾಏಕಿ ಕಾರು ಚಲಾಯಿಸಿದರೆ ನಮಗೆ ತಾಗಬಹುದು ಎಂದು ವಾದಿಸಿದ್ದಾರೆ. ಅದಕ್ಕೆ ಆಯ್ತು ದಾರಿ ಬಿಡಿ ನಾನು ಹೋಗಬೇಕು ಎಂದು ದೂರುದಾರ ಭುವನ್ ಪೊನ್ನಣ್ಣ ಹೇಳಿದರೂ, ಗಲಾಟೆ ಮುಂದುವರಿಸಿ ಕಾರಿನ ಕಿಟಕಿ ತೆಗೆದು ಹಲ್ಲೆಗೆ ಮುಂದಾಗಿ, ಚಿನ್ನದ ಸರ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಬಳಿಕ ಹರ್ಷಿಕಾ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದಿದ್ದಾಗ ಹರ್ಷಿಕಾ ರನ್ನು ನೋಡಿ ಕನ್ನಡದವರು ಇಷ್ಟು ಬೆಳ್ಳಗೆ ಇರುವುದಿಲ್ಲ. ನಮ್ಮ ಏರಿಯಾ ಹುಡುಗಿಯನ್ನು ಕರೆದುಕೊಂಡು ಹೋಗುತ್ತಿದ್ದಾನೆ ಅಂತಾ ಕಾರನ್ನು ತಡೆದು ಡ್ಯಾಮೇಜ್ ಮಾಡಿದ್ದಾರೆ. ಅವರ ವರ್ತನೆಯನ್ನು ಪ್ರಶ್ನಿಸಿದಾಗ, ನಿಮ್ಮ ಕನ್ನಡ ಸ್ಟೈಲ್ ನೀವೇ ಇಟ್ಟುಕೊಳ್ಳಿ ಎಂದಿದ್ದಾರೆ. ತಮ್ಮ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿಗಳು ಹಿಂದಿ, ಉರ್ದು ಮತ್ತು ಕೆಲವರು ಅರ್ಧಂಬರ್ಧ ಕನ್ನಡದಲ್ಲಿ ಮಾತನಾಡುತ್ತಿದ್ದರು. ಆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಭುವನ್ ಎಂದು ದೂರಿನಲ್ಲಿ ಕೋರಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿರುವ ಪೊಲೀಸರು ಮೊಬೈಲ್ನಲ್ಲಿ ಸೆರೆಹಿಡಿರುವ ಇಬ್ಬರು ವ್ಯಕ್ತಿಗಳ ಭಾವಚಿತ್ರ ಆಧರಿಸಿ ಕಿಡಿಗೇಡಿಗಳ ಹುಡುಕಾಟ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
![rain 21](https://www.udayavani.com/wp-content/uploads/2024/07/rain-21-415x263.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![rain 21](https://www.udayavani.com/wp-content/uploads/2024/07/rain-21-150x95.jpg)
Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ
![Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ](https://www.udayavani.com/wp-content/uploads/2024/07/Bha-150x73.jpg)
Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ
![1-wqwewewq](https://www.udayavani.com/wp-content/uploads/2024/07/1-wqwewewq-150x106.jpg)
T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ
![renukaacharya](https://www.udayavani.com/wp-content/uploads/2024/07/renukaacharya-150x100.jpg)
Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ
![BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!](https://www.udayavani.com/wp-content/uploads/2024/07/BSNL-150x84.jpg)
BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.