ಹೃದಯವಂತ ವಿಷ್ಣು ಜನ್ಮದಿನ: ಅವರ ಜೀವನಚರಿತ್ರೆ ಹಾಗೂ ನೋಡಲೇಬೇಕಾದ ಚಿತ್ರಗಳು ಇಲ್ಲಿವೆ !


Team Udayavani, Sep 18, 2020, 12:43 PM IST

vishnuvardhan

ಬೆಂಗಳೂರು: ಅಭಿನವ ಭಾರ್ಗವ, ಸಾಹಸಸಿಂಹ, ಹೃದಯವಂತ ಎಂದೇ ಖ್ಯಾತಿವೆತ್ತ ವಿಷ್ಣುವರ್ಧನ್ ಅವರ 70ನೇ ಜನ್ಮದಿನವಿಂದು. ತಮ್ಮ ಮನೋಜ್ಞ ಅಭಿನಯದ ಮೂಲಕ ಕೋಟ್ಯಾಂತರ ಜನರ ಮನಗೆದ್ದ “ದಾದಾ’ ಕನ್ನಡ ಚಿತ್ರರಂಗದ ದಿಗ್ಗಜ ನಟರಲ್ಲಿ ಒಬ್ಬರು. ಮಗು ಮನಸ್ಸಿನ ಹೃದಯ, ಎಲ್ಲಾ ವಯಸ್ಸಿನವರನ್ನೂ ಸಮಾನಾಗಿ ಕಾಣುವ ಅವರ ವ್ಯಕ್ತಿತ್ವವೇ ಅವರನ್ನು ಕನ್ನಡಿಗರ ಕಣ್ಮಣಿಯನ್ನಾಗಿಸಿತ್ತು.

ಡಾ. ವಿಷ್ಣುವರ್ಧನ್ ಅವರ ಮೂಲ ಹೆಸರು ಸಂಪತ್ ಕುಮಾರ್. 1950ರ ಸೆಪ್ಟೆಂಬರ್ 18 ರಂದು ಹೆಚ್.ಎಲ್ ನಾರಾಯಣರಾವ್ ಮತ್ತು ಕಾಮಾಕ್ಷಮ್ಮ ದಂಪತಿಗಳ ಪುತ್ರರಾಗಿ ಮೈಸೂರಿನಲ್ಲಿ ಜನಿಸಿದ್ದರು. ನಾರಾಯಣರಾವ್ ಕೂಡ ಕಲಾವಿದರಾಗಿದ್ದರು. ಸಂಪತ್ ಕುಮಾರ್ ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿ, ಬೆಂಗಳೂರಿನ ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದರು.

ಸಂಪತ್ ಕುಮಾರ್ 1955ರಲ್ಲಿ ಮೊದಲ ಬಾರಿಗೆ ‘ಶಿವಶರಣ ನಂಬೆಯಕ್ಕ’ ಸಿನಿಮಾದಲ್ಲಿ ಬಾಲನಟನಾಗಿ ಅಭಿನಯಿಸಿದ್ದರು. ಗಮನಾರ್ಹ ಸಂಗತಿಯೆಂದರೇ ಈ ಚಿತ್ರ ಕೇವಲ 28 ದಿನಗಳಲ್ಲಿ ಚಿತ್ರಿಕರಣಗೊಂಡ ಮೊದಲ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಯಿತು. ನಂತರ 1956ರಲ್ಲಿ ಕೋಕಿಲವಾಣಿ, ಎಸ್ ಎಲ್ ಬೈರಪ್ಪನವರ ಕಾದಂಬರಿಯಾಧರಿತ ವಂಶವೃಕ್ಷದಲ್ಲೂ ಸಣ್ಣಪಾತ್ರವೊಂದರಲ್ಲಿ ನಟಿಸಿದ್ದರು.

1972 ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ “ನಾಗರಹಾವು” ಚಿತ್ರದಲ್ಲಿ ಮೊದಲ ಬಾರಿಗೆ ನಾಯಕನಾಗಿದ್ದರು. ಸಂಪತ್ ಕುಮಾರನಾಗಿ ಬಂದಿದ್ದ ಹುಡುಗನಿಗೆ ‘ವಿಷ್ಣುವರ್ಧನ್ಎಂದು ಹೆಸರಿಟ್ಟಿದ್ದು ಪುಟ್ಟಣ್ಣ ಕಣಗಾಲ್. ಬೆಂಗಳೂರಿನ ಸಾಗರ್ ಚಿತ್ರಮಂದಿರ ಒಂದರಲ್ಲೇ ಸತತ 25 ವಾರಗಳು ಯಶಸ್ವಿಯಾದ ಚಿತ್ರ, ಆಗಿನ ಕಾಲಕ್ಕೇ 7 ಲಕ್ಷ ರೂಪಾಯಿಗಳನ್ನು ಗಳಿಸಿ ಹೊಸ ದಾಖಲೆ ಬರೆಯಿತು ಮತ್ತು ಬೆಂಗಳೂರಿನ ಮೂರು ಮುಖ್ಯ ಚಿತ್ರಮಂದಿರಗಳಲ್ಲಿ ನೂರು ದಿನ ಪೂರೈಸಿದ ಮೊದಲ ಸಿನೆಮಾವೆಂಬ ಹೆಗ್ಗಳಿಕೆ ಪಡೆಯಿತು. ರಾಶ್ಟ್ರಪ್ರಶಸ್ತಿ ಗೆದ್ದುಕೊಂಡಿತು. ವಿಷ್ಣು ನಟಿಸಿದ್ದ ‘ಸಾಹಸಸಿಂಹ’ ಸಿನೆಮಾ 25 ವಾರಗಳನ್ನು ಪೂರೈಸಿತು. ಇಲ್ಲಿಂದ ಮುಂದೆ ವಿಷ್ಣು ಸಾಹಸಸಿಂಹ ಎಂದು ಹೆಸರುವಾಸಿಯಾದರು. ಆದರೆ ಈ ಚಿತ್ರಕ್ಕೂ ಮೊದಲೆ ಅಂದರೆ 1979ರಲ್ಲೆ ಇವರಿಗೆ ‘ಸಾಹಸಸಿಂಹ’ ಎಂಬ ಬಿರುದು ಬಂದಿತ್ತು. 1980 ರಲ್ಲಿ ಶಂಕರ್ ನಾಗ್ ನಿರ್ದೇಶನದಲ್ಲಿ ಮೂಡಿಬಂದ “ಮಾಲ್ಗುಡಿ ಡೇಸ್”ಎಂಬ ಕಿರುತೆರೆಯಲ್ಲಿ ನಟಿಸಿದರು

ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ, ಜಿಮ್ಮಿಗಲ್ಲು, ಖೈದಿ, ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ. ಕನ್ನಡ ಚಿತ್ರಗಳಲ್ಲಿ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.

220 ಚಿತ್ರಗಳ ಮೂಲಕ ಕನ್ನಡ ಕಲಾದೇವಿಯ ಸೇವೆಗೈದ ವಿಷ್ಣು, ಆಪ್ತರಕ್ಷಕ ಚಿತ್ರದಲ್ಲಿ ಕೊನೆಯ ಬಾರಿಗೆ ನಟಿಸಿದ್ದರು. ಕನ್ನಡ ಚಿತ್ರರಂಗದ ಮೇರು ನಟರಾಗಿ ತನ್ನ ಸ್ಮರಣೀಯ ಪಾತ್ರಗಳ ಮೂಲಕ ಅಭಿಮಾನಿಗಳ ಚಿತ್ತಗಳಲ್ಲಿ ಇಂದಿಗೂ ಅಜರಾಮರರಾಗಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ ವಿಷ್ಣು 30 ಡಿಸೆಂಬರ್ 2009ರಲ್ಲಿ ವಿಧಿವಶರಾದರು.

ಡಾ. ವಿಷ್ಣುವರ್ಧನ್  ಅವರ ನೋಡಲೇಬೇಕಾದ ಸಿನಿಮಾ: ನಾಗರಹಾವು, ಸಾಹಸಸಿಂಹ, ಬಂಧನ, ನೀ ಬರೆದ ಕಾದಂಬರಿ, ಮಲಯ ಮಾರುತ, ಜಯಸಿಂಹ, ಮುತ್ತಿನಹಾರ, ಲಯನ್ ಜಗಪತಿರಾವ್, ಅಪ್ಪಾಜಿ, ವೀರಪ್ಪ ನಾಯಕ, ಯಜಮಾನ, ಸೂರಪ್ಪ, ಸೂರ್ಯವಂಶ, ದಿಗ್ಗಜರು, ಕೋಟಿಗೊಬ್ಬ, ಸಿಂಹಾದ್ರಿಯ ಸಿಂಹ, ಆಪ್ತಮಿತ್ರ, ಸಿರಿವಂತ, ಈ ಬಂಧನ, ಆಪ್ತರಕ್ಷಕ,

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.