![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 15, 2022, 2:44 PM IST
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಚಿತ್ರವು ಚಿತ್ರಮಂದಿರದಲ್ಲಿ ಅಬ್ಬರಿಸುತ್ತಿದೆ. ವಿಶ್ವದಾದ್ಯಂತ ಹತ್ತು ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ತೆರೆ ಕಂಡಿರುವ ‘ಕೆಜಿಎಫ್ ಚಾಪ್ಟರ್ 2’ ಚಿತ್ರವು ಮೊದಲ ದಿನವೇ ಭಾರತದಲ್ಲಿ 134.5 ಕೋಟಿ ರೂ ಗಳನ್ನು ಬಾಚಿಕೊಂಡಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರವು ವಿಶ್ವಾದ್ಯಂತ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ತೆರೆಕಂಡ ಐದು ಭಾಷೆಗಳಲ್ಲೂ ಚಿತ್ರವು ಸದ್ದು ಮಾಡುತ್ತಿದೆ. ಯಶ್ – ನೀಲ್ ಕಾಂಬಿನೇಶನ್ ಮತ್ತೊಮ್ಮೆ ಯಶಸ್ವಿಯಾಗಿದೆ.
ಇದನ್ನೂ ಓದಿ:‘ಗಿರ್ಕಿ’ ಸುತ್ತಾಟ ಶುರು; ಇದು ವಿಶ್ವ ಕನಸು
ಭಾರತದಲ್ಲಿ ಮೊದಲ ದಿನದ ಗಳಿಕೆಯ ಬಗ್ಗೆ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಅಧಿಕೃತ ಮಾಹಿತಿ ನೀಡಿದೆ. ‘ಕೆಜಿಎಫ್ ಚಾಪ್ಟರ್ 2’ ಚಿತ್ರವು ಭಾರತದಲ್ಲಿ ಮೊದಲ ದಿನ ಒಟ್ಟು 134.5 ಕೋಟಿ ರೂ ಗಳಿಸಿದೆ ಎಂದು ಹೊಂಬಾಳೆ ಫಿಲಂಸ್ ಹೇಳಿಕೊಂಡಿದೆ. ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರ ಮೊದಲ ದಿನ 156 ಕೋಟಿ ಗಳಿಸಿದ್ದರೆ, ಬಾಹುಬಲಿ 2 ಚಿತ್ರ 152 ಕೋಟಿ ರೂ. ಗಳಿಸಿತ್ತು. ಹೀಗಾಗಿ ಕೆಜಿಎಫ್ ಚಾಪ್ಟರ್ 2 ಚಿತ್ರ ಮೂರನೇ ಸ್ಥಾನದಲ್ಲಿದೆ.
ಇದೇ ವೇಳೆ ‘ಕೆಜಿಎಫ್ ಚಾಪ್ಟರ್ 2’ ಚಿತ್ರ ಮತ್ತೊಂದು ದಾಖಲೆ ಬರೆದಿದೆ. ‘ಕೆಜಿಎಫ್ ಚಾಪ್ಟರ್ 2’ ಹಿಂದಿ ಅವತರಣಿಕೆಯು ಬಾಲಿವುಡ್ ಚಿತ್ರಗಳಾದ ‘ವಾರ್’ ಮತ್ತು ‘ಥಗ್ಸ್ ಆಫ್ ಹಿಂದೂಸ್ಥಾನ್’ ಚಿತ್ರಗಳ ದಾಖಲೆ ಮುರಿದಿದೆ. ಹೃತಿಕ್ ರೋಷನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವು ಮೊದಲ ದಿನದಲ್ಲಿ 51.60 ಕೋಟಿ ರೂ ಗಳಿಸಿದ್ದರೆ, ‘ಥಗ್ಸ್ ಆಫ್ ಹಿಂದೂಸ್ಥಾನ್’ ಚಿತ್ರವು ಮೊದಲ ದಿನದಲ್ಲಿ 50.75 ಕೋಟಿ ರೂ. ಗಳಿಸಿತ್ತು. ಇದೀಗ ಈ ದಾಖಲೆ ಮುರಿದಿರುವ ಕೆಜಿಎಫ್ 2 ಹಿಂದಿ ವರ್ಷನ್ ಮೊದಲ ದಿನದಲ್ಲಿ 53.95 ಕೋಟಿ ರೂ. ಕಲೆಕ್ಷನ್ ಮಾಡಿದೆ.
ವಿಜಯ್ ಕಿರಗಂದೂರು ನಿರ್ಮಿಸಿರುವ ‘ಕೆಜಿಎಫ್ ಚಾಪ್ಟರ್ 2’ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.