![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 2, 2018, 11:23 AM IST
ಕನ್ನಡ ಚಿತ್ರರಂಗದ ಡಬ್ಬಿಂಗ್ ವಿರೋಧಿ ಹೋರಾಟದಲ್ಲಿ ಆರಂಭದಿಂದಲೂ ಮುಂಚೂಣಿಯಲ್ಲಿದ್ದ, ಡಬ್ಬಿಂಗ್ ವಿರೋಧಿಸಿದ್ದಕ್ಕಾಗಿ ದಂಡ ಕೂಡ ಹಾಕಿಸಿಕೊಂಡಿದ್ದ ನಟ ಜಗ್ಗೇಶ್ ಈಗ ಡಬ್ಬಿಂಗ್ ಕುರಿತಾಗಿ ತಟಸ್ಥ ನಿಲುವು ತಾಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ನಲ್ಲಿ ತಮ್ಮ ಅಭಿಪ್ರಾಯವನ್ನು ಪೋಸ್ಟ್ ಮಾಡಿರುವ ಜಗ್ಗೇಶ್, “ಡಬ್ಬಿಂಗ್ ಹೋರಾಟಕ್ಕೂ ನನಗೂ ಇನ್ನು ಮುಂದೆ ಸಂಬಂಧವಿಲ್ಲ. ಕನ್ನಡಿಗರು ಅವರಿಗೆ ಇಷ್ಟವಾದುದನ್ನು ಪಡೆಯಬಹುದು’ ಎಂದು ಹೇಳಿದ್ದಾರೆ.
ಜಗ್ಗೇಶ್ ಟ್ವೀಟರ್ನಲ್ಲಿ ಹೀಗೆ ಬರೆದುಕೊಂಡಿದ್ದಾರೆ; “ಮಾನ್ಯರೆ 36 ವರ್ಷ ಕನ್ನಡ ಚಿತ್ರರಂಗದಲ್ಲಿ ದುಡಿದ ನಾನು ಚಿತ್ರರಂಗದ ಸಮಸ್ಯೆಗೆ ಸ್ಪಂದಿಸುವುದು ನನ್ನ ಕರ್ತವ್ಯ. ಉದ್ಯಮ ಕರೆದ ಡಬ್ಬಿಂಗ್ ವಿರುದ್ಧದ ಸಭೆಗೆ ನಾನು ಹೋದದ್ದು ನಿಜ. ನಮ್ಮ ಆಕ್ರೋಶವು ನಿಜ. ಆದರೆ ಅದಷ್ಟು ನಿಮ್ಮ ಕಲಾವಿದರು, ತಂತ್ರಜ್ಞರಿಗಾಗಿ ಮಾತ್ರವೆ ವಿನಃ ಯಾವ ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ. ಸಂವಿಧಾನವೇ ಸರಿ ಅಂದ ಮೇಲೆ ನಮ್ಮದೇನು ಇಲ್ಲಾ. ಕನ್ನಡಿಗರಿಗೆ ಏನು ಇಷ್ಟವೋ ಅದನ್ನ ನೋಡಲು ಪಡೆಯಲು ಕನ್ನಡಿಗರು ಸರ್ವಸ್ವತಂತ್ರರು.
ಇನ್ನು ಮುಂದೆ ನನಗೂ ಡಬ್ಬಿಂಗ್ಗೂ ಯಾವ ಸಂಬಂಧವು ಇರುವುದಿಲ್ಲ. ನಾನಾಯಿತು ನನ್ನ ಕಲಾ ಕರ್ತವ್ಯವಾಯಿತು. ನನ್ನ ಹಿಂದಿನ ನಡಾವಳಿಗೆ ನಿಮಗೆ ನೋವಾಗಿದ್ದರೆ ಕ್ಷಮೆಯಿರಲಿ. ನಾನು ನಿಮ್ಮವನು. ವಯಸ್ಸಿನಲ್ಲಿ ಹಿರಿಯನಾದರೆ ಸಹೋದರನು ಎಂದು ಭಾವಿಸಿ. ನಗುತ ಸಂತೋಷವಾಗಿ ಬಾಳಿ. ಶುಭಹಾರೈಕೆ ಕನ್ನಡದ ಮನಗಳಿಗೆ. ನಾನು ಬದುಕಿನಲ್ಲಿ ಶ್ರಮದಿಂದ ಮುಂದೆ ಬಂದವನು. ಕನಸಿನಲ್ಲಿಯು ಯಾರಿಗೂ ಕೆಟ್ಟದ್ದು ಬಯಸಿಲ್ಲ, ಬಯಸಲ್ಲಾ.
ರಾಯರ ಭಕ್ತರು ತಪ್ಪು ಮಾಡುವವರಲ್ಲಾ. ನನಗೆ ನನ್ನ ಕನ್ನಡ ಭಾಷೆ ಹಾಗೂ ಕನ್ನಡ ಜನರೇ ದೇವರು ಎಂದು ಭಾವಿಸಿ ಶ್ರದ್ಧೆಯಿಂದ ಯಾವ ತಪ್ಪೂ ಮಾಡದೆ ಬದುಕಿರುವೆ. ನನ್ನ ಮೇಲಿನ ಅಪಾರ್ಥ ಸರಿಪಡಿಸಲು ಹೀಗೆ ಬರೆದಿದ್ದೇನೆ. ಭಿನ್ನಾಭಿಪ್ರಾಯ ಇದ್ದರೆ ಮರೆತುಬಿಡಿ’ ಅಂತ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಡಬ್ಬಿಂಗ್ ವಿರುದ್ಧ ಧ್ವನಿ ಎತ್ತುತ್ತಿದ್ದ ಜಗ್ಗೇಶ್, ಇದೀಗ “ಡಬ್ಬಿಂಗ್ ವಿರೋಧಿ ಹೋರಾಟ ಮಾಡಲ್ಲ’ ಎಂದು ಬಹಿರಂಗವಾಗಿ ಹೇಳಿ ಚಿತ್ರೋದ್ಯಮದ ಮಂದಿಗೆ ಅಚ್ಚರಿ ಮೂಡಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.