ಐ ಲವ್ ಯೂ ಟೀಂಗೆ ಗುಳ್ಟು ಸೋನು
Team Udayavani, Jun 26, 2018, 11:14 AM IST
ನಟಿ ಸೋನು ಅವರ “ಗುಳ್ಟು’ ಚಿತ್ರ ಒಂದು ವಿಭಿನ್ನ ಪ್ರಯೋಗದ ಚಿತ್ರವಾಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಈ ಚಿತ್ರದಲ್ಲಿನ ಸೋನು ಅವರ ಪಾತ್ರವನ್ನೂ ಜನ ಇಷ್ಟಪಟ್ಟಿದ್ದರು. ಆ ಚಿತ್ರದ ನಂತರ ಸೋನುಗೆ ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬಂದುವು. ಆದರೆ, ಸೋನು ಮಾತ್ರ ವಿಭಿನ್ನ ಪಾತ್ರದ ನಿರೀಕ್ಷೆಯಲ್ಲಿದ್ದ ಕಾರಣ ಯಾವ ಸಿನಿಮಾವನ್ನು ಒಪ್ಪಿಕೊಂಡಿರಲಿಲ್ಲ. ಈಗ ಸೋನು ಸದ್ದಿಲ್ಲದೇ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ.
ಅದು ಉಪೇಂದ್ರ ಅಭಿನಯದ “ಐ ಲವ್ ಯೂ’ ಚಿತ್ರ. “ಐ ಲವ್ ಯೂ’ ಚಿತ್ರದಲ್ಲಿ ರಚಿತಾ ರಾಮ್ ನಾಯಕಿಯಾಗಿರುವುದು ನಿಮಗೆ ಈಗಾಗಲೇ ಗೊತ್ತಿದೆ. ಹೀಗಿರುವಾಗ ಸೋನು ಗೌಡ ಅವರ ಪಾತ್ರವೇನು ಎಂದು ನೀವು ಕೇಳಬಹುದು. ಚಿತ್ರದಲ್ಲಿ ನಾಯಕಿಯ ಜೊತೆಗೆ ಮತ್ತೂಂದು ಪಾತ್ರ ಕೂಡಾ ಪ್ರಮುಖವಾಗಿದ್ದು, ಈಗ ಆ ಪಾತ್ರವನ್ನು ಸೋನು ಮಾಡುತ್ತಿದ್ದಾರೆ. ಹಾಗಾಗಿ ಸೋನು ಈ ಚಿತ್ರದ ಮತ್ತೂಬ್ಬ ನಾಯಕಿಯಾಗಿ ನಟಿಸುತ್ತಿದ್ದಾರೆ.
ಈಗಾಗಲೇ ಅವರ ಭಾಗದ ಚಿತ್ರೀಕರಣ ಸೋಮವಾರದಿಂದಲೇ ಆರಂಭವಾಗಿದ್ದು, ರುಪ್ಪೀಸ್ ರೆಸಾರ್ಟ್ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾದಲ್ಲಿ ಸೋನು ಹಾಗೂ ಉಪೇಂದ್ರ ಅವರ ಕಾಂಬಿನೇಶನ್ನಲ್ಲಿ ಸಾಕಷ್ಟು ದೃಶ್ಯಗಳಿದ್ದು, ಇದನ್ನು ಚಿತ್ರೀಕರಿಸಿಕೊಳ್ಳುತ್ತಿದ್ದಾರೆ ನಿರ್ದೇಶಕ ಆರ್.ಚಂದ್ರು. ಉಪೇಂದ್ರ ಅವರ ಇಂಟ್ರೋಡಕ್ಷನ್ನ ಆ್ಯಕ್ಷನ್ ದೃಶ್ಯಗಳೊಂದಿಗೆ ಉಪೇಂದ್ರ “ಐ ಲವ್ ಯೂ’ ಚಿತ್ರೀಕರಣ ಆರಂಭವಾಗಿದ್ದು, ಸಪೋಟ ಗಾರ್ಡನ್ ಹಾಗೂ ನೈಸ್ ರೋಡ್ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.
ಅಂದಹಾಗೆ, ನಿರ್ದೇಶಕ ಚಂದ್ರು ಈ ಚಿತ್ರದ ಮೂಲಕ ಪ್ರೀತಿಗೆ ಹೊಸ ವ್ಯಾಖ್ಯಾನ ನೀಡಲಿದ್ದಾರಂತೆ. ಇದು “ಎ’, “ಉಪೇಂದ್ರ’ ಹಾಗೂ “ಪ್ರೀತ್ಸೆ’ ಶೈಲಿಯ ಲವ್ಸ್ಟೋರಿಯಾಗಿದ್ದು, ಉಪೇಂದ್ರ ಅವರ ಪಾತ್ರ ಕೂಡಾ ವಿಭಿನ್ನವಾಗಿದೆಯಂತೆ. ಉಪೇಂದ್ರ ಈ ಹಿಂದೆ ತಮ್ಮ “ಎ’ ಸಿನಿಮಾದಲ್ಲಿ, “ಈ ಪ್ರೀತಿ ಪ್ರೇಮ ಎಲ್ಲಾ ಪುಸ್ತಕದ ಬದ್ನೇಕಾಯಿ’ ಎಂದಿದ್ದರು.
ಆದರೆ, ಈಗ 15 ವರ್ಷಗಳ ನಂತರ ಉಪೇಂದ್ರ ಅವರು, ಅದೇ ಪ್ರೀತಿ ಬಗ್ಗೆ ಹೊಸ ಅಂಶವನ್ನು ಹೇಳಲಿದ್ದಾರಂತೆ. ಬೆಂಗಳೂರು, ಮಂಗಳೂರು ಹಾಗೂ ಹೈದರಾಬಾದ್ನಲ್ಲಿ ಚಿತ್ರೀಕರಣ ನಡೆಯಲಿದ್ದು, ಹಾಡುಗಳಿಗೆ ಚಿತ್ರತಂಡ ವಿದೇಶಕ್ಕೆ ತೆರಳಲಿದೆ. ಚಿತ್ರದಲ್ಲಿ ಪ್ರದೀಪ್ ರಾವತ್, ಶಯ್ನಾಜಿ ಶಿಂಧೆ, ರವಿಕಾಳೆ, ರವಿಶಂಕರ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈ ಚಿತ್ರದ ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಚಂದ್ರು ಅವರದ್ದೇ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.