ನನಗೂ ದರ್ಶನ್ ಗೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ, ಆದರೆ… ಇಂದ್ರಜಿತ್ ಲಂಕೇಶ್ ಹೇಳಿದ್ದೇನು?
Team Udayavani, Jun 13, 2024, 12:51 PM IST
ಹುಬ್ಬಳ್ಳಿ: ನಟ ದರ್ಶನ ವಿಚಾರದಲ್ಲಿ ನಾನ್ಯಾಕೆ ಟಾಂಗ್ ನೀಡಲಿ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಈ ಹಂತದಲ್ಲಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ನಿರ್ದೇಶಕ ಹಾಗು ಪತ್ರಕರ್ತ ಇಂದ್ರಜಿತ್ ಲಂಕೇಶ ಪ್ರತಿಕ್ರಿಯಿಸಿದರು.
ಗೌರಿ ಚಿತ್ರದ ಕುರಿತಾದ ಸುದ್ದಿಗೋಷ್ಠಿಯಲ್ಲಿ ದರ್ಶನ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದರ್ಶನ ಅವರೊಂದಿಗೆ ಎರಡು ಸಿನಿಮಾ ಮಾಡಿದ್ದೇನೆ. ಅವರಿಗೂ ನನಗೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಆದರೆ ಸಮಾಜದಲ್ಲಿ ಇಂತಹ ಘಟನೆಗಳಾದಾಗ ಓರ್ವ ಪತ್ರಕರ್ತನಾಗಿ ಧ್ವನಿಯೆತ್ತಬೇಕಾಗುತ್ತಿದೆ. ಈ ನಿಟ್ಟಿನಲ್ಲಿ ಮಾತನಾಡಿದ್ದೇನೆಯೇ ವಿನಃ ಯಾವುದೇ ಟಾಂಗ್ ನೀಡಿಲ್ಲ. ಪ್ರಕರದ ತನಿಖೆ ಪೂರ್ಣಗೊಂಡ ನಂತರ ಎಲ್ಲವೂ ಸ್ಪಷ್ಟವಾಗಲಿದೆ. ಆಗ ಈ ಕುರಿತು ಮಾತನಾಡುವೆ ಎಂದು ಸ್ಪಷ್ಟಪಡಿಸಿದರು.
ಸಾಮಾಜಿಕ ಜಾಲತಾಣಗಳು ಜನರ ಧ್ವನಿಯಾಗಿದೆ. ಅದನ್ನು ಸಕರಾತ್ಮಕವಾಗಿ ಬಳಸಿಕೊಳ್ಳಬೇಕು. ಹಿಂದೆ ಓರ್ವ ಯುವಕ ನನ್ನ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ. ಅವನನ್ನು ಬಂಧಿಸುವ ಕೆಲಸ ಆಗಿತ್ತು. ಆದರೆ ಅವನ ತಂದೆ ತಾಯಿ ಕಣ್ಣೀರು ಹಾಕಿ ಕ್ಷಮಿಸುವಂತೆ ಬೇಡಿಕೊಂಡರು. ಅವರ ಕಣ್ಣೀರು ನೋಡಿ ಯುವಕನಿಗೆ ಬುದ್ದಿವಾದ ಹೇಳಿ ಕಳಿಸಿಕೊಟ್ಟಿದ್ದೆ. ಕೊಲೆಯ ಘಟನೆಯಿಂದ ಓರ್ವ ಮಹಿಳೆ ಪತಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾಗಿದ್ದಾರೆ. ಅವರಿಗೆ ನ್ಯಾಯ ಸಿಗುವ ಕೆಲಸ ಆಗಬೇಕು. ಶೀಘ್ರದಲ್ಲಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳುವುದಾಗಿ ತಿಳಿಸಿದರು.
ಸಾಮಾಜಿಕ ಜಾಲಾತಾಣಗಳ ಬಗ್ಗೆ ಸರಕಾರ ನಿಗಾ ವಹಿಸಬೇಕು. ಈ ಕುರಿತು ಆಂದೋಲನ ಮಾದರಿಯಲ್ಲಿ ಹೋರಾಟ ಆರಂಭಿಸುತ್ತೇವೆ. ಸರಕಾರ ಸೈಬರ್ ಕ್ರೈಂ ಅಂತ ಮಾಡಿದೆ. ಅದು ಎಲ್ಲಿ ಕೆಲಸ ಮಾಡುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಇದರಿಂದ ಯಾರಿಗೆ ಅನುಕೂಲವಾಗುತ್ತಿದೆ ಎಂಬುವುದು ಕೂಡ ಗೊತ್ತಾಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು.
ಇದನ್ನೂ ಓದಿ: Online ನಲ್ಲಿ ಆರ್ಡರ್ ಮಾಡಿದ್ದ ಐಸ್ಕ್ರೀಮ್ ಕಂಡು ಆಘಾತಕ್ಕೆ ಒಳಗಾದ ಮಹಿಳೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.