![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 15, 2022, 12:05 PM IST
ಕನ್ನಡದಲ್ಲಿ ದೇಶಭಕ್ತಿಯನ್ನು ಬಿಂಬಿಸುವ ಮ್ಯೂಸಿಕ್ ಆಲ್ಬಂಗಳ ಸಂಖ್ಯೆ ಕಡಿಮೆ ಎಂಬ ಮಾತುಗಳ ನಡುವೆಯೇ ಯುವ ಗಾಯಕ ಆದರ್ಶ್ ಅಯ್ಯಂಗಾರ್, “ಜಯ ಹೇ…’ ಎಂಬ ದೇಶಭಕ್ತಿ ಮ್ಯೂಸಿಕ್ ಆಲ್ಬಂ ಅನ್ನು ನಾಡಿನ ಮನೆ-ಮನಗಳಿಗೆ ತಲುಪಿಸಲು ಮುಂದಾಗಿದ್ದಾರೆ.
ಆದರ್ಶ್ ಅಯ್ಯಂಗಾರ್ ಮಾಡಿರುವ ಈ “ಜಯ ಹೇ…’ ಮ್ಯೂಸಿಕ್ ಆಲ್ಬಂ ವಿಂಗ್ ಕಮಾಂಡರ್ ಸುದರ್ಶನ್, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ರಾಮ್ ದಾಸ್ ಜಿ. ಎನ್, ನಟ ವಿರಾಟ್ ಸೇರಿದಂತೆ ಅನೇಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು.
ಸದ್ಯ ಶಿವಮೊಗ್ಗ ಮೂಲದ ಆದರ್ಶ್ ಅಯ್ಯಂಗಾರ್ ಅಮೆರಿಕಾದಲ್ಲಿ ಪ್ರತಿಷ್ಟಿತ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಲ್ಲಿಯೇ ತಮ್ಮದೊಂದು ಸ್ಟುಡಿಯೋ ಮಾಡಿಕೊಂಡು ಬಿಡುವಿನ ಸಮಯದಲ್ಲಿ ಅನೇಕ ಸಂಗೀತ ಪ್ರಯೋಗಗಳನ್ನು ಮಾಡುತ್ತ ಬಂದಿದ್ದಾರೆ. ಈ ಹಿಂದೆ ತಮ್ಮ “ಶ್ರೀಕೃಷ್ಣ ಪೊಡಕ್ಷನ್’ ಮೂಲಕ “ಮೈ ಫ್ರೆಂಡ್’ ಎಂಬ ವಿಡಿಯೋ ಹಾಡನ್ನು ಭಾರತ ಮತ್ತು ಅಮೆರಿಕಾ ಎರಡು ಕಡೆ ಚಿತ್ರೀಕರಿಸಿದ್ದ ಆದರ್ಶ್, ಇದೀಗ ಭಾರತದ ಸೈನಿಕರಿಗೆ ಅರ್ಪಿಸುವುದಕ್ಕಾಗಿಯೇ “ಜಯ ಹೇ…’ ಮ್ಯೂಸಿಕ್ ಆಲ್ಬಂ ನಿರ್ಮಿಸಿದ್ದಾರೆ.
ಇದನ್ನೂ ಓದಿ:ಇನ್ಸ್ಟ್ರಾಗ್ರಾಂ ಮೂಲಕ ಮಹಿಳೆ ಸೇರಿ ಇಬ್ಬರ ಖಾತೆಯಿಂದ 7 ಲಕ್ಷ ರೂ ವಂಚನೆ
ಇನ್ನು “ಜಯ ಹೇ…’ ಹಾಡನ್ನು ತೀರ್ಥಹಳ್ಳಿಯ ಸುತ್ತಮುತ್ತ ಎರಡು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಹಳ್ಳಿಗಾಡಿನಿಂದಲೇ ಸೈನ್ಯಕ್ಕೆ ಸೇರುವವರ ಸಂಖ್ಯೆ ಜಾಸ್ತಿ ಇರುವುದರಿಂದ ಮಲೆನಾಡಿನ ಹಳ್ಳಿಯೊಂದರಲ್ಲಿ ಮತ್ತು ಅಲ್ಲಿನ ಕುಟುಂಬವನ್ನು ಆಯ್ಕೆ ಮಾಡಿಕೊಂಡು ಈ ಹಾಡನ್ನು ಚಿತ್ರಿಸಲಾಗಿದೆ. ರಾಕ್-ಪಾಪ್ ಜಾನರ್ನಲ್ಲಿ ಮೂಡಿ ಬಂದಿರುವ “ಜಯ ಹೇ…’ ಎಂಬ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದು, ಹೇಮಂತ್ ಜೋಯಿಸ್ ಸಂಗೀತ ಸಂಯೋಜಿಸಿದ್ದಾರೆ.
ಇನ್ನು ಈ ಗೀತೆಗೆ ಆದರ್ಶ್ ಅಯ್ಯಂಗಾರ್ ಹಾಡಿಗೆ ಧ್ವನಿಯಾಗುವುದರ ಜೊತೆಗೆ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಹೇಮಂತ್ ಜೋಯಿಸ್, ಗುರುಪ್ರಸಾದ್ ಬಡಿಗೇರ್, ದರ್ಶನ್ ಕುಮಾರ್, ಶ್ರೀಹರ್ಷ ಕುಮಾರ್ ಮೊದಲಾದವರು ನಟಿಸಿದ್ದಾರೆ. ಗೀತೆಗೆ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನ, ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ಸುಧೀರ್ ಎಸ್. ಜೆ ಸಂಕಲನವಿದೆ. ಸದ್ಯ ಗಾಯಕ ಆದರ್ಶ್ ಅಯ್ಯಂಗಾರ್ ಅವರ ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಆಗಿರುವ ಈ ಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.